ದಾವಣಗೆರೆಯಲ್ಲಿ ಇಂದು ‘ಬಾಬ್ ಮಾರ್ಲಿ ಫ್ರಮ್ ಕೋಡಿಹಳ್ಳಿ’ ನಾಟಕ ಪ್ರದರ್ಶನ

Date:

Advertisements

ಸತೀಶ್ ಜಾರಕಿಹೊಳಿ ಟ್ರಸ್ಟ್ ಮತ್ತು ಮಾನವ ಬಂಧುತ್ವ ವೇದಿಕೆಯ ವತಿಯಿಂದ ದಾವಣಗೆರೆಯಲ್ಲಿ ಇಂದು ಸಾಮಾಜಿಕ ಸಂದೇಶ ಸಾರುವ ‘ಬಾಬ್ ಮಾರ್ಲಿ ಫ್ರಮ್ ಕೋಡಿಹಳ್ಳಿ’ ನಾಟಕ ಪ್ರದರ್ಶನವನ್ನು ಆಯೋಜಿಸಲಾಗಿದೆ.

ಸೆಪ್ಟೆಂಬರ್ 27ರಂದು(ಶುಕ್ರವಾರ) ಸಂಜೆ 6ಕ್ಕೆ ದಾವಣಗೆರೆಯ ಜೆ.ಜೆ.ಎಂ. ಮೆಡಿಕಲ್ ಕಾಲೇಜ್‌ನ ಆವರಣದಲ್ಲಿರುವ ಬಾಪೂಜಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಘಟಕರು ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

‘ಗುರುತು’ ಅನ್ನುವುದು ಕೆಲವರಿಗೆ ಹೆಮ್ಮೆಯಾದರೆ, ಕೆಲವರಿಗದು ಅಸಹ್ಯ, ಹಿಂಸೆ, ಜೀವನದ್ದುದ್ದಕ್ಕೂ ಹೊತ್ತು ತಿರುಗಬೇಕಾದ ಹೆಣಭಾರದ ಚಾಕರಿ. ಹಲವು ಬಾರಿ ಉಳಿವಿಗಾಗಿ ಗುರುತುಗಳನ್ನು ಮುಚ್ಚಿಡುತ್ತಾ ಸಾಗುವುದೇ ಬದುಕು ಅನ್ನಿಸಿಕೊಂಡು ಹರಿಯುತ್ತಾ ಹಗುರಾಗುವುದು ಸಾಗದ ದಾರಿಯಾಗಿ ಕಂಡು ದಣಿವಾಗುತ್ತದೆ.

Advertisements
ನಾಟಕ 2

ದಣಿವಾಗುತ್ತದೆ ಎಂಬ ಕಾರಣಕ್ಕೆ ಹಾರಾಡುವ ಬಯಕೆಯನ್ನು ಬಿಡುವಂತೆಯೂ ಇರುವುದಿಲ್ಲ. ಕತ್ತಲ ದಾರಿಯಲ್ಲಿ ಮಿಂಚುಹುಳುಗಳಿಗಾಗಿ ಜೀವ ಕಾಯುತ್ತಾ ಆತುಕೊಳ್ಳಬೇಕಾಗುತ್ತದೆ. ಆಗ ಕತ್ತಲೊಂದು ರೀತಿಯ ಸಂಭ್ರಮ, ಬೆಳಕೊಂದು ರೀತಿಯ ಸಂಭ್ರಮ. ಹೀಗೆ ಗುರುತಿನ ಸುತ್ತ ಇರುವ ಹಲವು ಸಂಕೀರ್ಣ ವಿರೋಧಾಭಾಸಗಳನ್ನು ಎದುರುಗೊಳ್ಳುವ ಕಥನಗಳ ಗೊಂಚಲೇ “ಬಾಬ್ ಮಾರ್ಲಿ ಫ್ರಮ್ ಕೋಡಿಹಳ್ಳಿ” ನಾಟಕದ ಕಥಾಹಂದರ.

ಇಲ್ಲಿ. ‘ಬಾಬಾ ಸಾಹೇಬ್ ಅಂಬೇಡ್ಕರ್ ಅವರ ‘Waiting for a Visa’ ಒಂದು ರೂಪಕವಾಗಿ ಕಂಡು, ಅವರು ನಿಜಕ್ಕೂ ಪ್ರವೇಶ ಕೇಳುತ್ತಿರುವುದು ಎಲ್ಲಿಗೆ? ಅನ್ನುವ ಪ್ರಶ್ನೆ ಮುಖ್ಯವಾಗುತ್ತದೆ.

ಇದನ್ನು ಓದಿದ್ದೀರಾ? ಬೆಂಗಳೂರು | ಹನಿಟ್ರ್ಯಾಪ್ ಮಾಡಿ ಬ್ಲ್ಯಾಕ್‌ಮೇಲ್: ಮಹಿಳೆ ವಿರುದ್ಧ ಎಸ್‌ಡಿಪಿಐ ಮುಖಂಡನಿಂದ ದೂರು

ನಾಟಕದ ಪಠ್ಯ ಆಕರವನ್ನು ಕೆ.ಎನ್.ಹನುಮಂತಯ್ಯ, ಕೆ.ಚಂದ್ರಶೇಖರ್ ಮಾಡಿದ್ದರೆ, ಕೆ.ಪಿ.ಲಕ್ಷ್ಮಣ್ ನಾಟಕದ ರಚನೆ, ನಿರ್ದೇಶನ, ವಿನ್ಯಾಸ ಮಾಡಿದ್ದಾರೆ. ವಿ.ಎಲ್. ನರಸಿಂಹಮೂರ್ತಿ ಡ್ರಮ್ ಬರ್ಗ್ ನಿರ್ವಹಣೆ ಇರಲಿದೆ. ಮರಿಯಮ್ಮ ಚೂಡಿ, ಚಂದ್ರಶೇಖರ್ ಕೆ, ಶ್ವೇತಾರಾಣಿ ಹೆಚ್ ಕೆ, ಭರತ್ ಡಿಂಗ್ರಿ ನಟಿಸಲಿದ್ದಾರೆ. ಮಂಜು ನಾರಾಯಣ್ ಅವರು ‘ಬೆಳಕು’ ನೀಡಲಿದ್ದಾರೆ.

ಎಲ್ಲರಿಗೂ ಉಚಿತ ಪ್ರವೇಶವಿದ್ದು, ಸಾರ್ವಜನಿಕರು ಆಗಮಿಸಿ ನಾಟಕ ವೀಕ್ಷಿಸಿ ಯಶಸ್ವಿಗೊಳಿಸಲು ಹಾಗೂ ಸಾಮಾಜಿಕ ಸಂದೇಶ ಸಾರಲು ಮಾನವ ಬಂಧುತ್ವ ವೇದಿಕೆಯ ರಾಜ್ಯ ಸಂಚಾಲಕರಾದ ಪ್ರೊ.ರಾಮಚಂದ್ರಪ್ಪ ಮತ್ತು ವೇದಿಕೆಯ ಕಾರ್ಯಕರ್ತರು ಪ್ರಕಟಣೆಯ ಮೂಲಕ ಮನವಿ ಮಾಡಿದ್ದಾರೆ.

ಬಾಬ್ ಮಾರ್ಲಿ
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X