ಮಂಡ್ಯ | ʼಜಗದ್ಗುರು ಶ್ರೀ ಬಾಲಗಂಗಾಧರನಾಥ ಸ್ವಾಮೀಜಿʼಯವರ 51ನೇ ಪಟ್ಟಾಭಿಷೇಕ ಮಹೋತ್ಸವ

Date:

Advertisements

ಮಂಡ್ಯ ಜಿಲ್ಲೆಯ ಕೆ ಆರ್‌ ಪೇಟೆ ತಾಲೂಕಿನ ಹೇಮಗಿರಿ ಬಿಜಿಎಸ್ ಶಾಖಾ ಮಠದಲ್ಲಿ ʼಜಗದ್ಗುರು ಶ್ರೀ ಬಾಲಗಂಗಾಧರನಾಥ ಸ್ವಾಮೀಜಿʼಯವರ 51ನೇ ಪಟ್ಟಾಭಿಷೇಕ ಮಹೋತ್ಸವ ನಡೆಯಿತು.

ಪಟ್ಟಾಭಿಷೇಕ ಮಹೋತ್ಸವದ ನಿಮಿತ್ತ ಐವತ್ತೊಂದು ಹಿರಿಯ ಆದರ್ಶ ಜೋಡಿಗಳಿಗೆ ಮಠದ ಪ್ರಧಾನ ಕಾರ್ಯದರ್ಶಿ ಡಾ ಜೆ ಎನ್ ರಾಮಕೃಷ್ಣೇಗೌಡ ನೇತೃತ್ವದಲ್ಲಿ ವಿಶೇಷ ಪೂಜೆ ಹಾಗೂ ಅಭಿನಂದನಾ ಸಮಾರಂಭ ಕಾರ್ಯಕ್ರಮ ಅರ್ಥಪೂರ್ಣವಾಗಿ ಜರುಗಿತು.

ಶಾಸಕ ಹೆಚ್ ಟಿ ಮಂಜು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, “ಶ್ರೀಗಳು ನಾಡು ಕಂಡ ಅಪ್ರತಿಮ ಕಾಯಕ ಯೋಗಿ, ಸಂತ ಶ್ರೇಷ್ಠರ 51ನೇ ವರ್ಷದ ಪಟ್ಟಾಭಿಷೇಕದ ಸುಸಂದರ್ಭದಲ್ಲಿ ಸ್ಮರಿಸುವುದು ನಮ್ಮೆಲ್ಲರ ಪುಣ್ಯ. ಕುವೆಂಪು ಅವರಂತೆ ವಿಶ್ವಮಾನವ ಪರಿಕಲ್ಪನೆಯನ್ನು, ಬಸವಣ್ಣನವರಂತೆ ಸರ್ವರಿಗೂ ಸಮಬಾಳು ಎಂಬಂತೆ ಸಮಾಜದ ಏಳಿಗೆಗೆ ದುಡಿದವರು ಶ್ರೀಗಳು” ಎಂದು ಸ್ಮರಿಸಿದರು.

Advertisements

“ಶ್ರೀಗಳು ಸಮಾಜದ ಸುಧಾರಕರಾಗಿ, ಜಾತಿ ಧರ್ಮ ಭೇದ ಮರೆತು ಲಕ್ಷಾಂತರ ವಿದ್ಯಾರ್ಥಿಗಳಿಗೆ ಅಕ್ಷರ ನೀಡಿ, ಅನ್ನದಾಸೋಹದ ಮೂಲಕ ಬದುಕು ಕಟ್ಟಿಕೊಟ್ಟವರು. ಸಮಾಜದಲ್ಲಿ ಬದುಕುವ ರೀತಿ ಮತ್ತು ಸಮಾಜ ಸುಧಾರಣೆಗೆ ಹಲವಾರು ಮೌಲ್ಯಯುತ ಸಲಹೆ ಮತ್ತು ಸಹಕಾರವನ್ನು ಶ್ರೀ ಮಠದ ಮೂಲಕ ಮಾಡಿದ್ದಾರೆ” ಎಂದು ಹೇಳಿದರು.

ಶಾಖಾ ಮಠದ ಪ್ರಧಾನ ಕಾರ್ಯದರ್ಶಿ ಡಾ ಜೆ ಎನ್ ರಾಮಕೃಷ್ಣೇಗೌಡ ಮಾತನಾಡಿ, “ಶ್ರೀಗಳ 51ನೇ ವಾರ್ಷಿಕ ಪಟ್ಟಾಭಿಷೇಕ ಮಹೋತ್ಸವದ ಅಂಗವಾಗಿ ಶ್ರೀಗಳ ಆದರ್ಶಗಳನ್ನು ಮೈಗೂಡಿಸಿಕೊಂಡು, ಶ್ರೀಗಳ ಆಶೀರ್ವಾದದೊಂದಿಗೆ ಪ್ರತಿ ವರ್ಷದಂತೆ ಈ ವರ್ಷವೂ ವಿನೂತನವಾಗಿ 51 ಜೋಡಿ ಹಿರಿಯ ಆದರ್ಶ ದಂಪತಿಗಳಿಗೆ ಅಭಿನಂದನೆ ಸಮಾರಂಭ ಆಯೋಜಿಸಿದ್ದೇವೆ. ಯುವಸಮುದಾಯಕ್ಕೆ ಮಾದರಿಯಾಗಿರುವ ದಂಪತಿಗಳನ್ನು ಗೌರವಿಸುವುದು ನಮ್ಮ ಕರ್ತವ್ಯ” ಎಂದರು.

ಕೆ ಆರ್ ನಗರ ಕಾಗಿನಲೆ ಮಹಾಸಾನಸ್ಥಾನ ಶಾಖಾ ಮಠದ ಪೀಠಾಧ್ಯಕ್ಷ ಶ್ರೀ ಶಿವಾನಂದಪುರಿ, ಕಾಪನಹಳ್ಳಿ ಗವಿಮಠ ಪೀಠಾಧ್ಯಕ್ಷ ಶ್ರೀ ಸ್ವತಂತ್ರ ಚನ್ನವೀರ ಸ್ವಾಮೀಜಿ, ತೆಂಡೇಕೆರೆ ಬಾಳೆಹೊನ್ನೂರು ಶಾಖಾ ಮಠದ ಅಧ್ಯಕ್ಷ ಶ್ರೀ ಗಂಗಾಧರ್ ಶಿವಚಾರ್ಯ ಸ್ವಾಮಿಜೀ, ಬೇಬಿ ಶ್ರೀರಾಮ ಯೋಗಿಶ್ವರ ಮಠದ ಅಧ್ಯಕ್ಷ ಶ್ರೀ ಶಿವಬಸವ ಸ್ವಾಮೀಜಿ, ಎಲೆರಾಮಪುರ ಕುಂಚಟಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಹನುಮಂತನಾಥ ಸ್ವಾಮೀಜಿ, ಶ್ರವಣಬೆಳಗೊಳ ಶ್ರೀ ಚೌಡೇಶ್ವರಿದೇವಿ ಮಹಾಸಂಸ್ಥಾನ ಮಠದ ಅಧ್ಯಕ್ಷ ಶ್ರೀ ಬಸವೇಶ್ವರ ಚೈತನ್ಯ ಸ್ವಾಮೀಜಿ, ಅಮೃತೂರು ವೇದವ್ಯಾಸ ಮಠದ ಅಧ್ಯಕ್ಷ ಶ್ರೀ ಬಸವನಂದ ಸ್ವಾಮೀಜಿ, ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಶ್ರೀಗಳ ಪುತ್ಥಳಿಗೆ ವಿವಿಧ ಬಗೆಯ ಅಭಿಷೇಕ, ಹೋಮ, ಹವನ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಆಶೀರ್ವಚನ ನೀಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಸರ್ಕಾರಿ ಭೂಮಿ ಕಬಳಿಸಿ, ಬಿಜೆಪಿ ಮುಖಂಡನಿಂದ ಅಕ್ರಮ ಮಾರಾಟ: ಮಹಾವೀರ್ ಆರೋಪ

ಕಾರ್ಯಕ್ರಮದಲ್ಲಿ ಸಮಾಜ ಸೇವಕ ಆರ್‌ಟಿಒ ಮಲ್ಲಿಕಾರ್ಜುನ್, ಮನ್ಮುಲ್ ನಿರ್ದೇಶಕ ಡಾಲು ರವಿ, ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಬಂಡಿಹೊಳೆ ಅಶೋಕ್, ಕಸಪಾ ಮಾಜಿ ಅಧ್ಯಕ್ಷ ಹರಿಚರಣ್ ತಿಲಕ್, ಪುರಸಭೆ ಮಾಜಿ ಸದಸ್ಯ ಕೆ ಆರ್ ನೀಲಕಂಠ, ಹಿರಿಯ ಮುಖಂಡ ಬಂಡಿಹೊಳೆ ರಾಮೇಗೌಡ, ನಾಟನಹಳ್ಳಿ ನಿಂಗೇಗೌಡ, ಪ್ರತಾಪ್, ಗಂಜಿಗೆರೆ ಮಹೇಶ್, ಶೀಳನೆರೆ ಅಜಯ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X