ಗದಗ | ಚಿಕ್ಕನರಗುಂದ ಗ್ರಾ ಪಂ ಪಿಡಿಒ ಎಚ್ ಕೆ ಅರಳಿಕಟ್ಟಿ ಅಮಾನತಿಗೆ ಆಗ್ರಹ

Date:

Advertisements

ಗದಗ ಜಿಲ್ಲೆಯ ಚಿಕ್ಕನರಗುಂದ ಗ್ರಾಮ ಪಂಚಾಯಿತಿ ಪಿಡಿಒ ಎಚ್ ಕೆ ಅರಳಿಕಟ್ಟಿ ಅಮಾನತಿಗೆ ಆಗ್ರಹಿಸಿ ಮನರೇಗಾ ಕೂಲಿ ಕಾರ್ಮಿಕರು ಗ್ರಾ ಪಂ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.

“ಗದಗ ಜಿಲ್ಲೆಯ ನರಗುಂದ ತಾಲೂಕಿನ ಚಿಕ್ಕನರಗುಂದ ಗ್ರಾಮ ಪಂಚಾಯಿತಿಯಲ್ಲಿ ಮನರೇಗಾ ಯೋಜನೆಯಡಿ ಬದು ನಿರ್ಮಾಣ ಕಾಮಗಾರಿ ಕೆಲಸ ಮಾಡಿರುವ ಕೂಲಿ ಕಾರ್ಮಿಕರಿಗೆ ಕಳೆದ ನಾಲ್ಕೈದು ತಿಂಗಳಿಂದ‌ ಕೂಲಿ ಮೊತ್ತ ಪಾವತಿಸದೆ ಪಿಡಿಒ ಎಚ್ ಕೆ ಅರಳಿಕಟ್ಟಿ ಹಾಗೂ ಜನಪ್ರತಿನಿಧಿಳು ಸತಾಯಿಸುತ್ತಿದ್ದಾರೆ” ಎಂದು ಆರೋಪಿಸಿ ಹಿಡಿಶಾಪ ಹಾಕಿದರು.

“ನಾಲ್ಕೈದು ತಿಂಗಳಿಂದ ಪ್ರತಿದಿನ ಪಂಚಾಯಿತಿ ಕಾರ್ಯಾಲಯಕ್ಕೆ ಎಡತಾಕುತ್ತಿದ್ದು, ಪಿಡಿಒ ಅರಳಿಕಟ್ಟಿಯವರು ದಿನಕ್ಕೊಂದು ಸುಳ್ಳು ಹೇಳುವ ಮೂಲಕ ಬೇಜವಾಬ್ದಾರಿ ಮೆರೆಯುತ್ತಿದ್ದಾರೆ. ಅವರ ನಿರ್ಲಕ್ಷ್ಯದಿಂದಾಗಿ ಕೂಲಿ ವೇತನ ಸಿಕ್ಕಿಲ್ಲ. ಜೀವನ ನಿರ್ವಹಣೆ ಕಷ್ಟವಾಗಿದೆ” ಎಂದು ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕ ಸಂತೋಷ ಪಾಟೀಲ ಬಳಿ ಅವಲತ್ತುಕೊಂಡರು.

Advertisements

“ಕೂಲಿ ಕೆಲಸ ಮಾಡಿಯಾದರೂ ಬದುಕು ಸಾಗಿಸಬೇಕೆಂಬ ಕೂಲಿ ಕಾರ್ಮಿಕರ ಆಸೆಗೆ ಚಿಕ್ಕನರಗುಂದ ಪಂಚಾಯಿತಿಯ ಅಧಿಕಾರಿ ಹಾಗೂ ಜನಪ್ರತಿನಿಧಿಗಳು ತಣ್ಣೀರು ಎರಚಿದ್ದಾರೆ. ನಾಲ್ಕು ದಿನದೊಳಗಾಗಿ ಕೆಲಸ ಮಾಡಿದ ಕೂಲಿ ಮೊತ್ತ ಪಾವತಿ ಮಾಡಬೇಕು. ಪಿಡಿಒ ಅರಳಿಕಟ್ಟಿ ಮೇಲೆ ಕ್ರಮ ಜರುಗಿಸಿ ಅಮಾನತು ಮಾಡಬೇಕು. ಇಲ್ಲದಿದ್ದರೆ ತಾಲೂಕು ಪಂಚಾಯಿತಿ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಿ ಬೀಗ ಜಡಿದು ಪ್ರತಿಭಟನೆ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ರಾಹುಲ್‌ ಗಾಂಧಿ ಮೀಸಲಾತಿ ವಿರೋಧಿಯೆಂದು ಬಿಂಬಿಸುತ್ತಿರುವ ಬಿಜೆಪಿ, ಜೆಡಿಎಸ್‌ ನಡೆ ಖಂಡನೀಯ; ದಸಂಸ ಪ್ರತಿಭಟನೆ

ಶಿವಪ್ಪ ಸಾತಣ್ಣವರ, ಶಿವಾನಂದ ಬುಳ್ಳನ್ನವರ, ಮೈಲಾರಿ ಚನ್ನಪ್ಪಗೌಡ್ರ, ಶ್ರೀಕಾಂತ್ ಕೋಣನ್ನವರ, ಮಂಜುನಾಥ ಹೊಸಗಾಣಿಗೇರ, ಕಲ್ಲಪ್ಪ ಹಾದಿಮನಿ, ಅಪ್ಪಣ್ಣ ಕುರಿ, ಸಂಗಮೇಶ ತೊರಗಲ್, ಮಲ್ಲಪ್ಪ ಚಲವಾದಿ, ದೇವಪ್ಪ ಚಲವಾದಿ ಸೇರಿದಂತೆ ಬಹುತೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X