ಧಾರವಾಡ | ದಿವ್ಯ ಪ್ರಭು ಅವರಿಗೆ ‘ಅತ್ಯುತ್ತಮ ಜಿಲ್ಲಾಧಿಕಾರಿ’ ಪ್ರಶಸ್ತಿ

Date:

Advertisements

ರಾಜ್ಯ ಸರಕಾರದ ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮ ರೀತಿಯಲ್ಲಿ ತಲುಪಿಸಿರುವ ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಜಿ.ಆರ್.ಜೆ ಅವರಿಗೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ವರ್ಷದ ‘ಅತ್ಯುತ್ತಮ ಜಿಲ್ಲಾಧಿಕಾರಿ ಪ್ರಶಸ್ತಿ’ ನೀಡಿ ಗೌರವಿಸಿದರು.

ಬೆಂಗಳೂರಿನ ವಿಕಾಸ ಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ಅತ್ಯುತ್ತಮ ಜಿಲ್ಲಾಧಿಕಾರಿ ಪ್ರಶಸ್ತಿ’ಯನ್ನು ದಿವ್ಯ ಪ್ರಭು ಸ್ವೀಕರಿಸಿದರು.

ಚಿತ್ರದುರ್ಗ ಮತ್ತು ಧಾರವಾಡ ಜಿಲ್ಲೆಯ ಜಿಲ್ಲಾಧಿಕಾರಿಗಳಾಗಿ ಸೇವೆ ಸಲ್ಲಿಸಿರುವ ಅವರು, ತಮ್ಮ ಅಧಿಕಾರಾವಧಿಯಲ್ಲಿ ಉತ್ತಮವಾದ ಜನಸ್ನೇಹಿ ಹಾಗೂ ನಾಗರಿಕ ಸ್ನೇಹಿ ಸೇವೆಗಳನ್ನು ಸಲ್ಲಿಸಿದ್ದಾರೆ. ರಾಜ್ಯ ಸರಕಾರದ ಯೋಜನೆಗಳನ್ನು ಎಲ್ಲ ಫಲಾನುಭವಿಗಳಿಗೆ ತಲುಪಿಸುವಲ್ಲಿ ಯಶಸ್ವಿಯಾಗಿದ್ದಾರೆ.

Advertisements

ಇದನ್ನು ಓದಿದ್ದೀರಾ? ಧಾರವಾಡ | ಹಿಂಗಾರಿನಲ್ಲಿ ಕಡಲೆ, ಜೋಳ, ಗೋಧಿ, ಕುಸುಬೆ ಬಿತ್ತನೆ‌ ಮಾಡಿ: ರೈತರಿಗೆ ಕೃಷಿ‌ ಇಲಾಖೆ ಸಲಹೆ

ಧಾರವಾಡ ಜಿಲ್ಲೆಯ ಸರ್ವತೋಮುಖ ಅಭಿವೃದ್ದಿಗೆ ಹಲವಾರು ಯೋಜನೆಗಳನ್ನು ರೂಪಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ ಗಣಿ ಭಾದಿತ ಪ್ರದೇಶಗಳ ಪುನಃಶ್ಚೇತನಕ್ಕೆ ಅವರು ಹೆಚ್ಚಿನ ಒತ್ತು ನೀಡಿದ್ದರು. ಈ ಎಲ್ಲ ಕೊಡುಗೆಗಳನ್ನು ಆಧರಿಸಿ ಅವರಿಗೆ ರಾಜ್ಯ ಸರಕಾರದ ಕಂದಾಯ ಇಲಾಖೆಯಿಂದ 2023-24 ನೇ ಸಾಲಿಗೆ ‘ಉತ್ತಮ ಜಿಲ್ಲಾಧಿಕಾರಿ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X