2ನೇ ಟೆಸ್ಟ್ | ಮೊದಲ ದಿನ ಮಳೆಯ ಕಾಟ; 35 ಓವರ್‌ಗಳಿಗೆ ಮುಗಿದ ಆಟ: ಕುಂಬ್ಳೆ ದಾಖಲೆ ಮುರಿದ ಅಶ್ವಿನ್

Date:

Advertisements

ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆಯುತ್ತಿರುವ ಬಾಂಗ್ಲಾ ವಿರುದ್ಧದ ಎರಡನೇ ಹಾಗೂ ಅಂತಿಮ ಟೆಸ್ಟ್‌ ಪಂದ್ಯ ಬಹುತೇಕ ಮಳೆಯಲ್ಲೇ ಮುಕ್ತಾಯವಾಯಿತು. ಮಧ್ಯಾಹ್ನದವರೆಗೂ ಪಂದ್ಯ ನಡೆದು ಅತಿಥೇಯ ಬಾಂಗ್ಲಾದೇಶ 35 ಓವರ್‌ಗಳಿಗೆ 3 ವಿಕೆಟ್ ನಷ್ಟಕ್ಕೆ 107 ರನ್‌ ಕಲೆಹಾಕಿದರು. ಪದೇಪದೇ ವರುಣ ಆಗಮಿಸಿದ ಕಾರಣ ದಿನದಾಟವನ್ನು ಸ್ಥಗಿತಗೊಳಿಸಲಾಯಿತು.

ಒಂದು ಗಂಟೆ ತಡವಾಗಿ ಪಂದ್ಯ ಆರಂಭವಾದಾಗ ಟಾಸ್‌ ಗೆದ್ದ ಭಾರತದ ತಂಡದ ನಾಯಕ ರೋಹಿತ್‌ ಶರ್ಮಾ ಫೀಲ್ಡಿಂಗ್‌ ಆಯ್ಕೆ ಮಾಡಿಕೊಂಡರು. ಬಾಂಗ್ಲಾ 12 ಓವರ್‌ಗಳಲ್ಲಿಯೇ ವೇಗಿ ಆಕಾಶ್‌ದೀಪ್‌ ದಾಳಿಗೆ 2 ವಿಕೆಟ್ ಕಳೆದುಕೊಂಡು ಸಂಕಷ್ಟ ಅನುಭವಿಸಿತು. ಮೊಮಿನುಲ್‌ ಹಕ್‌ (40) ಹಾಗೂ ನಾಯಕ ಶಾಂಟೋ (31) ಒಂದಿಷ್ಟು ಜೊತೆಯಾಟವಾಡಿದರು.

ಇವರಿಬ್ಬರ ಜೋಡಿಯನ್ನು ಸ್ಪಿನ್ನರ್‌ ಆರ್‌ ಅಶ್ವಿನ್‌ ಮುರಿದರು. ಟೀ ವಿರಾಮದ ವೇಳೆಗೆ ಮೊಮಿನುಲ್‌ ಹಕ್‌ ಹಾಗೂ ಮುಶ್ಫಿಕರ್‌ ರಹೀಮ್‌ (6) ಅಜೇಯರಾಗಿ ಆಟವಾಡುತ್ತಿದ್ದಾಗ ಮಳೆ ಜೋರಾದಾಗ ಪಂದ್ಯವನ್ನು ನಿಲ್ಲಿಸಲಾಯಿತು.

Advertisements

ಈ ಸುದ್ದಿ ಓದಿದ್ದೀರಾ? ಟೆಸ್ಟ್ ಕ್ರಿಕೆಟ್ | ಐದನೇ ಶತಕ ಬಾರಿಸಿ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ ಶುಭ್‌ಮನ್ ಗಿಲ್

ಆಕಾಶ್ ದೀಪ್ 34/2 ಹಾಗೂ ಆರ್‌ ಅಶ್ವಿನ್‌ 22/1 ವಿಕೆಟ್‌ ಕಬಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಅಶ್ವಿನ್‌ ಅವರು ಟೀಂ ಇಂಡಿಯಾ ಹಿರಿಯ ಸ್ಪಿನ್ನರ್‌ ಅನಿಲ್‌ ಕುಂಬ್ಳೆ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಏಷ್ಯಾ ಖಂಡದಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಭಾರತೀಯ ಆಟಗಾರನ ಹಿರಿಮೆಗೆ ಪಾತ್ರರಾದರು. ಮುಶ್ಪಿಕರ್‌ ರಹೀಮ್‌ ಅವರನ್ನು ಎಲ್‌ಬಿ ಬಲೆಗೆ ಬೀಳಿಸುವುದರ ಮೂಲಕ ಅಶ್ವಿನ್‌ ಏಷ್ಯಾ ಖಂಡದಲ್ಲಿ 420 ವಿಕೆಟ್‌ ಪಡೆದು ಕುಂಬ್ಳೆ ಅವರ 419 ವಿಕೆಟ್ ದಾಖಲೆಯನ್ನು ಸರಿಗಟ್ಟಿದರು.

ಏಷ್ಯಾದಲ್ಲಿ ಅತೀ ಹೆಚ್ಚು ವಿಕೆಟ್‌ ಪಡೆದ ಮೊದಲ ಸ್ಥಾನದಲ್ಲಿ ಶ್ರೀಲಂಕಾದ ಮುತ್ತಯ್ಯ ಮುರುಳೀಥರನ್‌ ಇದ್ದು, 612 ವಿಕೆಟ್ ಕಬಳಿಸಿದ್ದಾರೆ. 300 ವಿಕೆಟ್ ಪಡೆದ ಹರ್‌ಭಜನ್‌ ಸಿಂಗ್‌ ಐದನೇ ಸ್ಥಾನದಲ್ಲಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X