ಧಾರವಾಡ | ಹಿಂಗಾರಿನಲ್ಲಿ ಕಡಲೆ, ಜೋಳ, ಗೋಧಿ, ಕುಸುಬೆ ಬಿತ್ತನೆ‌ ಮಾಡಿ: ರೈತರಿಗೆ ಕೃಷಿ‌ ಇಲಾಖೆ ಸಲಹೆ

Date:

Advertisements

ಧಾರವಾಡ ಜಿಲ್ಲೆಯಲ್ಲಿ ಹಿಂಗಾರು ಪ್ರಾರಂಭವಾಗುವ ಹಂತದಲ್ಲಿದ್ದು, ಮುಖ್ಯ ಬೆಳೆಗಳಾದ ಕಡಲೆ, ಜೋಳ, ಗೋಧಿ ಹಾಗೂ ಕುಸುಬೆ ಬಿತ್ತಲು ರೈತರು ಸೂಕ್ತ ಕ್ರಮ ವಹಿಸುವುದು ಉತ್ತಮವಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಡಲೆ: ಪ್ರತಿ ಕಿ.ಗ್ರಾಂ ಬೀಜಕ್ಕೆ 4 ಮಿ. ಲೀ ರೈಝೋಬಿಯಂ ಎಸ್.ಬಿ 120 ಮತ್ತು 4 ಮಿ. ಲೀ ರಂಜಕ ಕರಗಿಸುವ ಜೈವಿಕ ಗೊಬ್ಬರ ಬಿತ್ತನೆ ಮಾಡುವಾಗ ಬೀಜಕ್ಕೆ ಉಪಚರಿಸುವುದು. ಬಿತ್ತನೆಗೆ ಮೊದಲು ಬರ ನಿರೋಧಕತೆ ಹೆಚ್ಚಿಸಲು ಬೀಜವನ್ನು ಶೇ. 2 ಕ್ಯಾಲ್ಸಿಯಂ ಕ್ಲೋರೈಡ್ ದ್ರಾವಣದಲ್ಲಿ 30 ನಿಮಿಷ ಅಥವಾ ಶೇ. 25 ರ ಗೋಮೂತ್ರದಲ್ಲಿ 8 ಗಂಟೆಗಳ ಕಾಲ ನೆನೆಸಿ, ಕನಿಷ್ಠ 7 ಘಂಟೆ ನೆರಳಿನಲ್ಲಿ ಒಣಗಿಸಿ ಬೀಜವನ್ನು ಕಠಿಣಗೊಳಿಸಿ ನಂತರ ರೈಜೋಬಿಯಂ ಹಾಗೂ ರಂಜಕ ಕರಗಿಸುವ ಅಣುಜೀವಿಯಿಂದ ಉಪಚರಿಸಬೇಕು. ಅಲ್ಲದೇ, ಬಿತ್ತನೆಯ ಸಮಯದಲ್ಲಿ ಎಕರೆಗೆ 8 ಕಿ. ಗ್ರಾಂ ಮೈಕೊರೈಜಾ ಜೈವಿಕಗೊಬ್ಬರವನ್ನು 200 ಕಿ.ಗ್ರಾಂ ಎರೆಹುಳು ಗೊಬ್ಬರದ ಜೊತೆಗೆ ಮಿಶ್ರಣ ಮಾಡಿ ಬಿತ್ತನೆಯ ಸಾಲಿನ ಮಣ್ಣಿನಲ್ಲಿ ಹಾಕಿ ಬೆರೆಸಬೇಕು.

ಕಡಲೆಯಲ್ಲಿ ನಟೆ ರೋಗ, ಸಿಡಿ ರೋಗ, ಸೊರಗು ರೋಗ ತಡೆಗಟ್ಟಲು ಪ್ರತಿ ಕಿ.ಗ್ರಾಂ ಬೀಜಕ್ಕೆ 2 ಗ್ರಾಂ ಕ್ಯಾಪ್ಟಾನ್ 80 ಡಬ್ಲೂ.ಪಿ ಅಥವಾ ಥೈರಾಮ್ 75 ಡಬ್ಲೂ.ಪಿ ಅಥವಾ ಮೆಂಕೋಜೆಬ್ 75 ಡಬ್ಲೂ.ಪಿ ಅಥವಾ 3.5 ಗ್ರಾಂ (ಕಾರ್ಬನಡೈಜಿಮ್ + ಮ್ಯಾಂಕೋಜೆಬ್) ಅಥವಾ 4 ಗ್ರಾಂ ಟ್ರೈಕೋಡರ್ಮಾ ಜೈವಿಕ ಶಿಲೀಂಧ್ರದಿಂದ ಬೀಜೋಪಚಾರ ಮಾಡಬೇಕು.

Advertisements

ಗೋಧಿ: ಎಕರೆಗೆ ಬೇಕಾಗುವ ಬಿತ್ತನೆ ಬೀಜವನ್ನು ದ್ರವ ರೂಪದ 80 ಮಿ.ಲೀ ಅಝೋಸ್ಫಿರಿಲಂ ಹಾಗೂ 80 ಮಿ.ಲೀ ದ್ರವ ರೂಪದ ರಂಜಕ ಕರಗಿಸುವ ಜೈವಿಕ ಗೊಬ್ಬರದಿಂದ ಉಪಚರಿಸಿ. ಬಿತ್ತನೆ ಮಾಡುವ ಮೊದಲು ರಸಗೊಬ್ಬರಗಳೆಲ್ಲವನ್ನೂ 6-8 ಸೆಂ.ಮೀ ಆಳದ ಸಾಲುಗಳಲ್ಲಿ ಮಣ್ಣಿನಲ್ಲಿ ಬೆರೆಸಿ, 23 ಸೆಂ.ಮೀ ಅಂತರದ ಸಾಲಿನಲ್ಲಿ ಬಿತ್ತನೆ ಮಾಡಬೇಕು. ಅಲ್ಲದೇ, ಬಿತ್ತನೆಯ ಸಮಯದಲ್ಲಿ ಎಕರೆಗೆ 8 ಕಿ.ಗ್ರಾಂ ಮೈಕೋರೈಜಾ ಜೈವಿಕ ಗೊಬ್ಬರವನ್ನು 200 ಕಿ.ಗ್ರಾಂ ಎರೆಹುಳು ಗೊಬ್ಬರದ ಜೊತೆಗೆ ಮಿಶ್ರಣ ಮಾಡಿ ಬಿತ್ತನೆಯ ಸಾಲಿನ ಮಣ್ಣಿನಲ್ಲಿ ಹಾಕಿ ಬೆರೆಸಬೇಕು.

ಜೋಳ: ಪ್ರತಿ ಕಿ.ಗ್ರಾಂ ಬೀಜಕ್ಕೆ ಕನಿಷ್ಠ 4 ಮಿ.ಲೀ ಅಝೋಸ್ಫಿರಿಲಂ ಮತ್ತು 4 ಮಿ.ಲೀ ದ್ರವ ರೂಪದ ರಂಜಕ ಕರಗಿಸುವ ಜೈವಿಕ ಗೊಬ್ಬರ ಬಿತ್ತನೆ ಮಾಡುವಾಗ ಬೀಜಕ್ಕೆ ಉಪಚರಿಸಬೇಕು. ಬೀಜೋಪಚಾರದ ಪೂರ್ವದಲ್ಲಿ ಪ್ರತಿ ಕಿ.ಗ್ರಾಂ ಬೀಜವನ್ನು 1.5 ಲೀ ನೀರಿನಲ್ಲಿ 30 ಗ್ರಾಂ ಕ್ಯಾಲ್ಸಿಯಂ ಕ್ಲೋರೈಡ್ ಅಥವಾ 7.5 ಗ್ರಾಂ ಪೊಟ್ಯಾಷಿಯಂ ನೈಟ್ರೇಟ್ ಬೆರೆಸಿದ ಅಥವಾ ಗೋಮೂತ್ರ (ಶೇ. 25) ಬೆರೆಸಿದ ದ್ರಾವಣದಲ್ಲಿ 8 ಘಂಟೆಗಳ ಕಾಲ ನೆನೆಸಿ ನೆರಳಿನಲ್ಲಿ ಒಣಗಿಸಿ ಬಿತ್ತುವುದರಿಂದ ಬೀಜ ಮೊಳಕೆ ಹಾಗೂ ಸಸಿಗಳ ಬೆಳವಣಿಗೆ ಸುಧಾರಿಸುವುದು.

ಇದನ್ನು ಓದಿದ್ದೀರಾ? ಬೆಂಗಳೂರು | ಆನ್‌ಲೈನ್ ಉದ್ಯೋಗದ ಹೆಸರಲ್ಲಿ 6 ಕೋಟಿ ವಂಚನೆ: 10 ಮಂದಿ ಆರೋಪಿಗಳ ಬಂಧನ

ಕುಸುಬೆ: ಬಿತ್ತುವ ಪೂರ್ವದಲ್ಲಿ ಬೀಜವನ್ನು ಶೇ. 2 ರ ಕ್ಯಾಲ್ಸಿಯಂ ಕ್ಲೋರೈಡ್ ದ್ರಾವಣದಲ್ಲಿ (1.0 ಲೀ ನೀರಿನಲ್ಲಿ 20 ಗ್ರಾಮ ಕ್ಯಾಲ್ಸಿಯಂ ಕ್ಲೋರೈಡ್) 12 ಘಂಟೆಗಳ ಕಾಲ ನೆನೆಸಿ ನಂತರ ನೆರಳಿನಲ್ಲಿ ಒಣಗಿಸಿ ಬಿತ್ತುವುದರಿಂದ ಬೀಜ ಮೊಳಕೆ ಪ್ರಮಾಣ ಅಧಿಕವಾಗುವುದು. ನಂತರ ಪ್ರತಿ ಎಕರೆಗೆ ಬೇಕಾಗುವ ಬಿತ್ತನೆ ಬೀಜವನ್ನು 200 ಗ್ರಾಂ ಅಝೋಸ್ಫಿರಿಲಂ ಜೀವಾಣುವಿನಿಂದ ಉಪಚರಿಸಿ ಬಿತ್ತಬೇಕು. ಮತ್ತು ಸತುವಿನ ಸಲ್ಪೇಟ್ 6 ಕಿ.ಗ್ರಾಂ ಅನ್ನು ಬಿತ್ತುವಾಗ ಪುಡಿ ಮಾಡಿದ ಕೊಟ್ಟಿಗೆ ಗೊಬ್ಬರದ ಜೊತೆಗೆ ಸಮಪ್ರಮಾಣದಲ್ಲಿ ಬೆರೆಸಿ ಪ್ರತ್ಯೇಕವಾದ ಎಳೆಶಡ್ಡಿ ಮುಖಾಂತರ ಮಣ್ಣಿನಲ್ಲಿ ಬೆರೆಸಬೇಕು.

ಹೆಚ್ಚಿನ ಮಾಹಿತಿಗಾಗಿ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರು ಅಥವಾ ಸಮೀಪದ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X