ಮೋದಿ ರೋಡ್‌ ಶೋ | ಬೆಂಗಳೂರಿನ 34 ರಸ್ತೆಗಳು ಬಂದ್; ಎಲ್ಲೆಲ್ಲಿ… ಇಲ್ಲಿದೆ ನೋಡಿ

Date:

Advertisements
  • ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೂ ಸಂಚಾರ ನಿರ್ಬಂಧ
  • ಎರಡು ಹಂತಗಳಲ್ಲಿ ಸುಮಾರು 36 ಕಿ.ಮೀ ರೋಡ್​ ಶೋ ನಡೆಸಲಿರುವ ಪ್ರಧಾನಿ

ಕರ್ನಾಟಕ ವಿಧಾನಸಭೆ ಚುನಾವಣೆಯ ಪ್ರಚಾರದ ಭರಾಟೆ ಜೋರಾಗಿದೆ. ಮತದಾನದ ದಿನ ಸಮೀಪಿಸುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ ಅಬ್ಬರದ ಪ್ರಚಾರ ರಾಜ್ಯದೆಲ್ಲೆಡೆ ಜೋರಾಗಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಮೇ 6 ಮತ್ತು 7ರಂದು ರೋಡ್‌ ಶೋ ನಡೆಯಲಿದೆ. ಈ ಹಿನ್ನೆಲೆ, ನಗರದ ಒಟ್ಟು 34 ರಸ್ತೆಗಳಲ್ಲಿ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಅವರು ಎರಡು ಹಂತಗಳಲ್ಲಿ ಸುಮಾರು 36 ಕಿ.ಮೀ ರೋಡ್​ ಶೋ ನಡೆಸಲಿದ್ದಾರೆ. ಮೇ 6 ಹಾಗೂ 7ರಂದು ರೋಡ್ ಶೋ ಇರುವುದರಿಂದ ನಗರದ ಹಲವು ರಸ್ತೆಗಳಲ್ಲಿ ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೂ ಸಂಚಾರ ನಿರ್ಬಂಧವಿರಲಿದೆ ಎಂದು ನಗರ ಸಂಚಾರ ಪೊಲೀಸ್‌ ಇಲಾಖೆ ತಿಳಿಸಿದೆ.

ಪೊಲೀಸ್

ಮೇ 6ರಂದು ಎಲ್ಲೆಲ್ಲಿ ಸಂಚಾರ ನಿರ್ಬಂಧ?

Advertisements

ರಾಜ ಭವನ ರಸ್ತೆ, ರಮಣ ಮಹರ್ಷಿ ರಸ್ತೆ, ಮೇಖ್ರಿ ವೃತ್ತ, ಆರ್ ಬಿ ಐ ಲೇಔಟ್ ಜೆಪಿ ನಗರ,  ಶಿರ್ಸಿ ಸರ್ಕಲ್, ಜೆಜೆ ನಗರ, ಬಿನ್ನಿ ಮಿಲ್ ರಸ್ತೆ, ಶಾಲಿನಿ ಮೈದಾನ, ಸೌತ್ ಎಂಡ್ ಸರ್ಕಲ್, ಆಮುರ್ಗಂ ಸರ್ಕಲ್, ಬುಲ್  ಟೆಂಪಲ್ ರೋಡ್, ರಾಮಕೃಷ್ಣಾಶ್ರಮ, ಉಮಾ ಟಾಕೀಸ್, ಟಿಆರ್ ಮಿಲ್, ಚಾಮರಾಜಪೇಟೆ ಮುಖ್ಯ ರಸ್ತೆ, ಬಾಳೆಕಾಯಿ ಮಂಡಿ, ಕೆ ಪಿ ಅಗ್ರಹಾರ, ಮಾಗಡಿ ರೋಡ್, ಚೇಳೂರುಪಾಳ್ಯ ರೋಡ್, ಎಂಸಿ ಸರ್ಕಲ್, ವೆಸ್ಟ್ ಆಫ್ ಕಾರ್ಡ್ ರೋಡ್, ಎಂ ಸಿ ಲೇಔಟ್, ನಾಗರಭಾವಿ ಮುಖ್ಯರಸ್ತೆ, ಬಿಜಿಎಸ್ ಮೈದಾನ, ಹಾವನೂರು ಸರ್ಕಲ್, ಎಂಟನೇ ಮುಖ್ಯರಸ್ತೆ ಬಸವೇಶ್ವರ ನಗರ, ಬಸವೇಶ್ವರ ನಗರ ಹದಿನೈದನೇ ಮುಖ್ಯ ರಸ್ತೆ, ಶಂಕರ್ ಮಠ, ಮೋದಿ ಅಸ್ಪತ್ರೆ ರೋಡ್, ನವರಂಗ್ ರಸ್ತೆ, ಎಂ ಕೆಕೆ ರಸ್ತೆ, ಮಲ್ಲೇಶ್ವರಂ ಸರ್ಕಲ್, ಸಂಪಿಗೆ ರಸ್ತೆ, ಸ್ಯಾಂಕಿ ರಸ್ತೆಗಳನ್ನು ಬಳಸದೇ ಪರ್ಯಾಯ ಮಾರ್ಗಗಳನ್ನು ಬಳಸಿ ಎಂದು ನಗರ ಸಂಚಾರ ಪೊಲೀಸ್‌ ವಾಹನ ಸವಾರರಿಗೆ ಸೂಚನೆ ನೀಡಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X