ಮದ್ದೂರು | ಕುಲಾಂತರಿ ತಳಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ: ಎನ್ ಪಿ ಶಂಕರಯ್ಯ ಕರೆ

Date:

Advertisements

ಕುಲಾಂತರಿ ತಳಿ, ಬೀಜ ಮತ್ತು ಆಹಾರಗಳನ್ನು ತಿರಸ್ಕರಿಸುವ ನಿಟ್ಟಿನಲ್ಲಿ ದೊಡ್ಡಹೊಸೂರು ಸತ್ಯಾಗ್ರಹದಲ್ಲಿ ಭಾಗವಹಿಸಲು ಬಯಲುಸೀಮೆ ಬೆಳೆಗಾರರ ಸಂಘದ ಸಂಸ್ಥಾಪಕ‌ ಅಧ್ಯಕ್ಷ ಎನ್ ಪಿ ಶಂಕರಯ್ಯ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕುಲಾಂತರಿ ಆಹಾರಗಳು ದೇಶ ಪ್ರವೇಶಿಸುವುದನ್ನ ತಿರಸ್ಕರಿಸುವ ಸತ್ಯಾಗ್ರಹದಲ್ಲಿ ಎಲ್ಲ ವಿಚಾರವಂತರು, ಪ್ರಗತಿಪರರು, ರೈತರು, ವಿದ್ಯಾರ್ಥಿಗಳು, ಸಂಘ ಸಂಸ್ಥೆಯವರು ಭಾಗವಹಿಸಿ, ಕುಲಾಂತರಿ ಆಹಾರ ತಿರಸ್ಕರಿಸಬೇಕು. ಆ ಮೂಲಕ ಸುಸ್ಥಿರ, ಸಮರ್ಥನೀಯವಾದ ಹಾಗೂ ಹವಾಮಾನ ವೈಪರೀತ್ಯಗಳಿಗೆ ಹೊಂದಿಕೊಳ್ಳುವ ಗುಣವುಳ್ಳ ಸಹಜ ಬೇಸಾಯ, ಸಾವಯವ ಕೃಷಿ ಪದ್ದತಿಗಳ ಮೂಲಕ ನಮ್ಮ ಭವಿಷ್ಯದ ಮರು ಹುಟ್ಟು ಪಡೆಯಬಹುದಾಗಿದೆ ಎಂದು ತಿಳಿಸಿದ್ದಾರೆ.

ತುಮಕೂರಿನ ಹೊನ್ನುಡುಕೆ ಹ್ಯಾಂಡ್ ಪೊಸ್ಟ್ ಬಳಿ ಇರುವ ಗಾಂಧಿ ಸಹಜ ಬೇಸಾಯ ಆಶ್ರಮ ದೊಡ್ಡಹೊಸೂರು ಗ್ರಾಮದಲ್ಲಿ ವಿಚಾರ ಸಂಕಿರಣ ಸೆಪ್ಟೆಂಬರ್ 29ರಿಂದ ಆಕ್ಟೊಬರ್ 2ರವರೆಗೆ ನಾಲ್ಕು ದಿನಗಳ ಕಾಲ ನಡೆಯಲಿದೆ. ಈ ವಿಚಾರ ಸಂಕಿರಣದಲ್ಲಿ ಮಾನವನ ಆರೋಗ್ಯ ಮತ್ತು ಪರಿಸರದ ಮೇಲೆ ಜಿಎಮ್ ಆಹಾರಗಳ ಪ್ರತಿಕೂಲ ಪರಿಣಾಮಗಳ ಕುರಿತು ಮತ್ತು ಪಂಚಾಯಿತಿ ಮಟ್ಟದಲ್ಲಿ ನೈಸರ್ಗಿಕ ಕೃಷಿಯನ್ನು ಮುಂದುವರೆಸುವ ಕಾರ್ಯತಂತ್ರಗಳ ಕುರಿತು ಗೋಷ್ಠಿಗಳು ನಡೆಯಲಿದ್ದು, ರಾಜ್ಯಾದ್ಯಂತ ಕುಲಾಂತರಿ ತಳಿ ವಿರೋಧಿಸಲು ಪ್ರಗತಿಪರರು ಸುಸ್ಥಿರ ಕೃಷಿ ಬಯಸುವವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

Advertisements

ಇದನ್ನು ಓದಿದ್ದೀರಾ? ಯಾದಗಿರಿ | ವಸತಿ ನಿಲಯದ ಮೇಲ್ವಿಚಾರಕನನ್ನು ಅಮಾನತುಗೊಳಿಸಲು ಆಗ್ರಹಿಸಿ ಪ್ರತಿಭಟನೆ

ಮದ್ದೂರು ತಾಲೂಕಿನಿಂದಲೂ ಸೆಪ್ಟಂಬರ್ 29ರಂದು ಭಾನುವಾರ ಬಯಲುಸೀಮೆ ಬೆಳೆಗಾರರ ಸಂಘದ ನೇತೃತ್ವದಲ್ಲಿ ದೊಡ್ಡ ಹೊಸೂರು ಸತ್ಯಾಗ್ರಹದಲ್ಲಿ ಭಾಗವಹಿಸುತ್ತಿದ್ದೇವೆ ಎಂದಿರುವ ಎನ್ ಪಿ ಶಂಕರಯ್ಯ, ಮಂಡ್ಯ ಜಿಲ್ಲೆಯಾದ್ಯಂತ ರೈತರು, ಪ್ರಗತಿಪರರು ಭಾಗವಹಿಸಲು ಮನವಿ ಮಾಡಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X