ರಾಯಚೂರು | ಹಳೆಯ ಪಿಂಚಣಿ ವ್ಯವಸ್ಥೆ ಮರು ಜಾರಿ ಮಾಡಲು ಒತ್ತಾಯಿಸಿ ಮನವಿ

Date:

Advertisements

ಕೇಂದ್ರ ಸರಕಾರ ಎನ್.ಪಿ.ಎಸ್ ಹಾಗೂ ಯು.ಪಿ.ಎಸ್ ಅನ್ನು ಹಿಂಪಡೆದು ಒಪಿಎಸ್ ಅನ್ನು ಜಾರಿಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ಎನ್.ಪಿ.ಎಸ್ ನೌಕರರ ಸಂಘದಿಂದ ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ರಾಷ್ಟ್ರೀಯ ಸಂಘದ ನಿರ್ದೇಶನದಂತೆ ಕೇಂದ್ರ ಸರ್ಕಾರ ಎನ್.ಪಿ.ಎಸ್ ಹಾಗೂ ಯು.ಪಿ.ಎಸ್ ಅನ್ನು ಜಾರಿಗೆ ತರಲು ಉದ್ದೇಶಿಸಿರುವ ಕ್ರಮವನ್ನು ಹಿಂಪಡೆಯಬೇಕು ಮತ್ತು ಒ.ಪಿ.ಎಸ್ ಜಾರಿಗೊಳಿಸಬೇಕು ಎಂದು ಪ್ರತಿಭಟಿಸಿದರು.

ಸುಮಾರು ವರ್ಷಗಳಿಂದ ಹಳೆ ಪಿಂಚಣಿ ವ್ಯವಸ್ಥೆ ಮರು ಸ್ಥಾಪಿಸುವಂತೆ ನಿರಂತರ ಹೋರಾಟ ಮಾಡಿದರು. ಕೇಂದ್ರ ಹಾಗೂ ರಾಜ್ಯ ನಿರ್ಲಕ್ಷ್ಯ ತೋರುತ್ತಿದೆ ಎಂದು ಅಸಮಾಧಾನ ಹೊರಹಾಕಿದರು.

ಕೇಂದ್ರ ಸರ್ಕಾರವು ಎನ್.ಪಿ.ಎಸ್ ಯೋಜನೆಯನ್ನು ಬದಲಾಯಿಸಿ, ಏಕೀಕೃತ ಪಿಂಚಣಿ ಯೋಜನೆಯನ್ನು ಯು.ಪಿ.ಎಸ್ ಜಾರಿಗೆ ತರಲು ತೀರ್ಮಾನಿಸಿದೆ. ಸದರಿ ಯೋಜನೆಯು ಸಹ ಷೇರು ಮಾರುಕಟ್ಟೆ ಆಧಾರಿತವಾಗಿದ್ದು, ಸರ್ಕಾರಿ ನೌಕರರ ಸಂಧ್ಯಾಕಾಲದ ಬದುಕಿಗೆ ಯಾವುದೇ ಭದ್ರತೆಯನ್ನು ಒದಗಿಸುವ ಅಂಶಗಳನ್ನು ಹೊಂದಿರುವುದಿಲ್ಲ ಎಂದು ದೂರಿದರು.

ಈ ಕೂಡಲೇ ಎನ್.ಪಿ.ಎಸ್ ಹಾಗೂ ಯು.ಪಿ.ಎಸ್ ಹಿಂಪಡೆದು, ಹಳೆಯ ಪಿಂಚಣಿ ಜಾರಿಗೊಳಿಸುವಂತೆ ಆಗ್ರಹಿಸಿದರು. ಇಲ್ಲವಾದಲ್ಲಿ ಸಂಘಟನೆ ಮೂಲಕ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಇದನ್ನು ಓದಿದ್ದೀರಾ? ರಾಯಚೂರು | ಸ್ನಾತಕೋತ್ತರ ಪದವಿ ಪ್ರವೇಶ ಶುಲ್ಕ ಕಡಿತಗೊಳಿಸಲು ಆಗ್ರಹಿಸಿ ವಿದ್ಯಾರ್ಥಿಗಳಿಂದ ಮನವಿ

ಈ ಸಂದರ್ಭದಲ್ಲಿ ರಾಯಚೂರು ಎನ್.ಪಿ.ಎಸ್ ಜಿಲ್ಲಾ ಘಟಕದ ಅಧ್ಯಕ್ಷ ಆನಂದಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿಲೀಪ್ ಐನೋರಹಳ್ಳಿ, ತಾಲೂಕು ಅಧ್ಯಕ್ಷ ಮುಜೀಬ್ ರೆಹಮಾನ್, ತಾಲೂಕು ಕಾರ್ಯದರ್ಶಿ ಮಡಿವಾಳಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಚಂದ್ರಶೇಖರ್ ರೆಡ್ಡಿ, ತಾಲೂಕು ಅಧ್ಯಕ್ಷ ಮಲ್ಲೇಶ್ ನಾಯಕ್, ಭಿಮೇಶ್ ನಾಯಕ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಬಾಲಯ್ಯ ಕ್ಷಿರಲಿಂಗಪ್ಪ, ಸತ್ಯಪ್ಪ ಉಪಾಧ್ಯಕ್ಷ ಸುರೇಶ್, ಕೆಪಿಟಿಸಿಎಲ್ ಶರೀಫ್ , ಪುಷ್ಪಾ, ಭೀಮಾ ನಾಯಕ, ಶಿವರಾಜ, ವೀರೇಶ್, ಕೃಷ್ಣ, ಸಿದ್ಧಲಿಂಗೇಶ, ಚಂದ್ರು ಹಾಗೂ ವಿವಿಧ ಇಲಾಖೆಗಳ ಎನ್.ಪಿ.ಎಸ್ ನೌಕರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ...

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

Download Eedina App Android / iOS

X