ಮೋದಿ ರೋಡ್‌ ಶೋ ವೇಳೆ ಸಾರ್ವಜನಿಕರು ಮನೆಯ ಬಾಲ್ಕನಿ/ಟೆರೇಸ್ ಮೇಲೆ ನಿಂತು ನೋಡುವುದನ್ನು ನಿಷೇಧಿಸಲಾಗಿದೆ

Date:

Advertisements
  • ರ‍್ಯಾಲಿಯನ್ನು ವೀಕ್ಷಿಸಲು ನಿಗದಿ ಮಾಡಿದ ಸ್ಥಳಕ್ಕೆ ಬನ್ನಿ
  • ಬೆಂಗಳೂರಿನಲ್ಲಿ ಒಟ್ಟು 36 ಕಿ.ಮೀ ದೂರದ ರೋಡ್‌ ಶೋ

2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನೆಲೆ, ಪ್ರಧಾನಿ ನರೇಂದ್ರ ಮೋದಿ ಅವರು ‘ನಮ್ಮ ಕರ್ನಾಟಕ ಯಾತ್ರೆ’ ಹೆಸರಿನಡಿ ರಾಜ್ಯದ ತುಂಬಾ ಅಬ್ಬರದ ಪ್ರಚಾರ ನಡೆಸಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಒಟ್ಟು 36 ಕಿ.ಮೀ ದೂರದ ರೋಡ್‌ ಶೋ ನಡೆಸಲಿದ್ದಾರೆ. ಈ ವೇಳೆ ಪ್ರಧಾನಿಗಳ ಭದ್ರತೆ ದೃಷ್ಟಿಯಿಂದ ನಗರದ ಪುಟ್ಟೇನಹಳ್ಳಿ ಠಾಣೆಯ ಪೊಲೀಸರು ಕೆಲವು ಸೂಚನೆಗಳನ್ನು ಜಾರಿಗೆ ತಂದಿದ್ದಾರೆ.

ಮೇ 6 ಮತ್ತು 7ರಂದು ರೋಡ್‌ ಶೋ ನಡೆಯಲಿದೆ. ಈ ವೇಳೆ, ಸುರಕ್ಷತಾ ಮತ್ತು ಶಿಷ್ಟಾಚಾರ ಪಾಲನೆಗಾಗಿ ಮೇ 4ರಂದು ಪುಟ್ಟೇನಹಳ್ಳಿ ಠಾಣೆ ಪೊಲೀಸರು ಸೂಚನೆಗಳನ್ನು ಬಿಡುಗಡೆ ಮಾಡಿದ್ದು, ಅವು ಇಂತಿವೆ.

  1. ಪ್ರಧಾನಿ ಮೋದಿ ರೋಡ್‌ ಶೋ ನಡೆಯುವ ವೇಳೆ ಮನೆಯ ಬಾಲ್ಕನಿ/ಟೆರೇಸ್ ಮೇಲೆ ನಿಂತು ರ‍್ಯಾಲಿಯನ್ನು ವೀಕ್ಷಿಸುವುದು ನಿಷೇಧಿಸಲಾಗಿದೆ.
  2. ಮೋದಿ ರೋಡ್‌ ಶೋ ಪೂರ್ಣಗೊಳ್ಳುವವರೆಗೂ ವಾಹನ ಸಂಚಾರವನ್ನು ಸಂಪೂರ್ಣ ನಿಷೇಧಿಸಲಾಗಿದೆ. ಹಾಗಾಗಿ ಪರ್ಯಾಯ ಮಾರ್ಗ ಬಳಸಲು ಪೊಲೀಸ್‌ ಇಲಾಖೆ ಸಾರ್ವಜನಿಕರಲ್ಲಿ ವಿನಂತಿಸಿದೆ.
  3. ಕಟ್ಟಡದ ಪ್ರವೇಶ ಮತ್ತು ನಿರ್ಗಮನಗಳನ್ನು ಸಂಪೂರ್ಣವಾಗಿ ಮುಚ್ಚಲಾಗುವುದು. ಕಟ್ಟಡದ ಆವರಣದಲ್ಲಿ ಅನಧಿಕೃತ ವ್ಯಕ್ತಿಗಳನ್ನು ಅನುಮತಿಸಬಾರದು.
  4. ರ‍್ಯಾಲಿಯನ್ನು ವೀಕ್ಷಿಸಲು ಬಯಸುವವರು ಗೊತ್ತು ಮಾಡಿದ ನಿಗದಿತ ಸ್ಥಳಕ್ಕೆ ಬರಬೇಕು.
  5. ಯಾವುದೇ ಹೆಚ್ಚಿನ ಸೂಚನೆಗಳಿಗಾಗಿ ಪೊಲೀಸ್/ಭದ್ರತಾ ಸಿಬ್ಬಂದಿಯೊಂದಿಗೆ ಸಹಕರಿಸಲು ಸಾರ್ವಜನಿಕರಲ್ಲಿ ವಿನಂತಿಸಲಾಗಿದೆ.

ಪುಟ್ಟೆನಹಳ್ಳಿ

“ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಬರುತ್ತಿರುವ ಹಿನ್ನೆಲೆ, ಸುರಕ್ಷತಾ ಕ್ರಮ ಕೈಗೊಂಡಿದ್ದೇವೆ. ಮೇ 6ರಂದು ಪುಟ್ಟೇನಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಧಾನಿ ಅವರು ಬರಲಿದ್ದಾರೆ. ಅವರ ಭದ್ರತೆ ದೃಷ್ಟಿಯಿಂದ ಕೆಲವು ಸೂಚನೆಗಳನ್ನು ಬಿಡುಗಡೆ ಮಾಡಿದ್ದೇವೆ” ಎಂದು ಈ ದಿನ.ಕಾಮ್‌ಗೆ ಪುಟ್ಟೇನಹಳ್ಳಿ ಠಾಣೆಯ ಪೊಲೀಸರು ತಿಳಿಸಿದರು.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X