ಸಾಂಬಾರ ಪದಾರ್ಥಗಳ ಮೇಲೆ ಮಾನಹಾನಿ ವಿಡಿಯೋ ತೆರವಿಗೆ ಗೂಗಲ್‌ಗೆ ದೆಹಲಿ ಹೈಕೋರ್ಟ್‌ ನಿರ್ದೇಶನ

Date:

Advertisements
  • ದೆಹಲಿ ಹೈಕೋರ್ಟ್‌ ನ್ಯಾಯಮೂರ್ತಿ ಸಂಜೀವ್ ನರುಲಾ ಪೀಠ ವಿಚಾರಣೆ
  • ಸಾಂಬಾರ್‌ ಪದಾರ್ಥಗಳು ಹಸುವಿನ ಮೂತ್ರ, ಸಗಣಿ ಹೊಂದಿವೆ ಎಂದು ವಿಡಿಯೋ

ಭಾರತೀಯ ಸಾಂಬಾರ್‌ ಪದಾರ್ಥಗಳು ಹಸುವಿನ ಮೂತ್ರ ಹಾಗೂ ಸಗಣಿಯನ್ನು ಒಳಗೊಂಡಿವೆ ಎಂದು ಆರೋಪಿಸಿದ ಮಾನಹಾನಿಕರ ವಿಡಿಯೋಗಳನ್ನು ಯೂಟ್ಯೂಬ್‌ನಿಂದ ತೆರವು ಅಥವಾ ನಿರ್ಬಂಧಿಸುವಂತೆ ದೆಹಲಿ ಹೈಕೋರ್ಟ್‌ ಗೂಗಲ್‌ ಸಂಸ್ಥೆಗೆ ಶುಕ್ರವಾರ (ಮೇ 5) ನಿರ್ದೇಶನ ನೀಡಿದೆ.

ಸಾಂಬಾರ್‌ ಪದಾರ್ಥಗಳು ಮೂತ್ರ ಹಾಗೂ ಸಗಣಿ ಹೊಂದಿವೆ ಎಂದು ‘ಕ್ಯಾಚ್‌’ ಸೇರಿದಂತೆ ಪ್ರಮುಖ ಬ್ರ್ಯಾಂಡ್‌ಗಳನ್ನು ಗುರಿಯಾಗಿಸಿ ವಿಡಿಯೋಗಳನ್ನು ಯೂಟ್ಯೂಬ್‌ನಲ್ಲಿ ಪ್ರಸಾರ ಮಾಡಲಾಗಿತ್ತು.

ಈ ವಿಡಿಯೋಗಳು ಮಾನಹಾನಿಕರ ಸ್ವರೂಪದ್ದಾಗಿವೆ ಎಂದು ಆರೋಪಿಸಲಾಗಿದೆ.

Advertisements

ದೆಹಲಿ ಹೈಕೋರ್ಟ್‌ ನ್ಯಾಯಮೂರ್ತಿ ಸಂಜೀವ್ ನರುಲಾ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

‘ಕ್ಯಾಚ್’ ಬ್ರಾಂಡ್ ಹೆಸರಿನಡಿಯಲ್ಲಿ ಉತ್ಪನ್ನಗಳನ್ನು ಹೊಂದಿರುವ ಸಂಘಟಿತ ಧರಂಪಾಲ್ ಸತ್ಯಪಾಲ್ ಸನ್ಸ್ ಪ್ರೈವೇಟ್ ಲಿಮಿಟೆಡ್‌ ಕಂಪನಿಯ ಮಾನಹಾನಿ ಮೂಲಕ ಹಕ್ಕುಸ್ವಾಮ್ಯವನ್ನು ಉಲ್ಲಂಘಿಸದಂತೆ ಎರಡು ಯೂಟ್ಯೂಬ್ ವಾಹಿನಿಗಳನ್ನು ನಿರ್ಬಂಧಿಸಿ ಪೀಠ ಆದೇಶಿಸಿದೆ.

“ಪ್ರತಿವಾದಿಗಳು ಅಂತಹ ವಿಡಿಯೋಗಳನ್ನು ರಚಿಸುವುದು ಮತ್ತು ಅಪ್‌ಲೋಡ್ ಮಾಡುವುದು ‘ಕ್ಯಾಚ್‌’ ಕಂಪನಿ ಗುರುತು ಹೊಂದಿರುವ ಫಿರ್ಯಾದಿಯ ಸರಕುಗಳನ್ನು ಮಾನಹಾನಿ ಮತ್ತು ಅವಹೇಳನ ಮಾಡುವ ಉದ್ದೇಶಪೂರ್ವಕ ಪ್ರಯತ್ನವಾಗಿದೆ” ಎಂದು ಪೀಠ ಅಭಿಪ್ರಾಯಪಟ್ಟಿದೆ.

“ಯೂಟ್ಯೂಬ್‌ಗೆ ಸುಲಭ ಮತ್ತು ಅನಿಯಂತ್ರಿತ ಪ್ರವೇಶದ ಹಿನ್ನೆಲೆ ಮಾನಹಾನಿಕರ ವಿಡಿಯೋಗಳನ್ನು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷಿಸುವ ಅಥವಾ ಹಂಚಿಕೊಳ್ಳುವ ಸಂಭವನೀಯತೆ ಹೆಚ್ಚಿದೆ” ಎಂದು ಪೀಠ ಉಲ್ಲೇಖಿಸಿದೆ.

ಪ್ರಕರಣದಲ್ಲಿ ವಿಡಿಯೋ ಅಪ್‌ಲೋಡ್ ಮಾಡಿದ ಆರೋಪಿಗಳಿಬ್ಬರು ವಿಚಾರಣೆಗೆ ಹಾಜರಾಗದ ಕಾರಣ ತಾತ್ಕಾಲಿಕ ಆದೇಶ ನೀಡಲಾಗಿದ್ದು ಆರೋಪಿಗಳ ಔಪಚಾರಿಕ ವಿಚಾರಣೆ ಬಾಕಿ ಇದೆ ಎಂದು ಪೀಠ ಹೇಳಿದೆ.

ದೆಹಲಿ ಹೈಕೋರ್ಟ್‌ ಹಿಂದಿನ ನಿರ್ದೇಶನಗಳನ್ನು ಅನುಸರಿಸಿ ಕ್ರಮ ತೆಗೆದುಕೊಳ್ಳಲಾಗಿದೆ. ಮೂರು ವಿಡಿಯೋಗಳು ಇನ್ನು ಮುಂದೆ ವೀಕ್ಷಣೆಗೆ ಲಭ್ಯವಿಲ್ಲ ಎಂದು ಗೂಗಲ್‌ನ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು.

ಎರಡು ಪ್ರತಿವಾದಿ ವಾಹಿನಿಗಳಾದ ಟಿವೈಆರ್ ಮತ್ತು ವ್ಯೂಸ್ ಎನ್‌ನ್ಯೂಸ್, ಭಾರತೀಯ ಸಾಂಬಾರ್‌ ಪದಾರ್ಥಗಳ ವಿರುದ್ಧ ಅವಹೇಳನಕಾರಿ ಮತ್ತು ಸುಳ್ಳು ಟೀಕೆಗಳನ್ನು ಹೊಂದಿರುವ ವಿಡಿಯೋಗಳನ್ನು ದುರುದ್ದೇಶಪೂರಿತವಾಗಿ ಅಪ್‌ಲೋಡ್ ಮಾಡಿವೆ.

ಈ ಸುದ್ದಿ ಓದಿದ್ದೀರಾ? ಮಣಿಪುರ ಹಿಂಸಾಚಾರ | ಪರಿಸ್ಥಿತಿ ನಿಯಂತ್ರಣ; ರೈಲುಗಳ ಸಂಚಾರ ಸ್ಥಗಿತ

ವಿಶೇಷವಾಗಿ ‘ಕ್ಯಾಚ್’ ಬ್ರ್ಯಾಂಡ್‌ನ ಅಡಿಯಲ್ಲಿ ಮಾರಾಟವಾಗಿದೆ ಎಂದು ಕಂಪನಿ ಆರೋಪಿಸಿತ್ತು.

ಯೂಟ್ಯೂಬ್ ವಾಹಿನಿಗಳಲ್ಲಿ ಆಕ್ಷೇಪಾರ್ಹ ವಿಡಿಯೋಗಳನ್ನು ಪತ್ತೆಹಚ್ಚಿದ ನಂತರ ಕಂಪನಿಯು ಮೊಕದ್ದಮೆ ಹೂಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X