ಮಧ್ಯಪ್ರದೇಶ | ಭೀಕರ ಅಪಘಾತ; ಮಗು ಸೇರಿ 9 ಮಂದಿ ದಾರುಣ ಸಾವು

Date:

Advertisements

ಶನಿವಾರ ತಡರಾತ್ರಿ ಮಧ್ಯಪ್ರದೇಶದ ಮೈಹಾರ್ ಜಿಲ್ಲೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಮಗು ಸೇರಿದಂತೆ ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದು, 23 ಮಂದಿಗೆ ಗಾಯಗಳಾಗಿವೆ.

ಮೈಹಾರ್ ಜಿಲ್ಲೆಯ ದೇಹತ್ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 30ರಲ್ಲಿ ರಾತ್ರಿ 11.30ರ ಸುಮಾರಿಗೆ ಪ್ರಯಾಣಿಕರಿದ್ದ ಬಸ್‌ ಒಂದು ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.

ಬಸ್‌ನಲ್ಲಿ 45 ಪ್ರಯಾಣಿಕರಿದ್ದು, ಪ್ರಯಾಗ್‌ರಾಜ್‌ನಿಂದ ರೇವಾ ಮೂಲಕ ನಾಗ್ಪುರಕ್ಕೆ ತೆರಳುತ್ತಿತ್ತು. ಹೆದ್ದಾರಿಯಲ್ಲಿನ ಉಪಾಹಾರ ಗೃಹದ ಬಳಿ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ.

Advertisements

ಇದನ್ನು ಓದಿದ್ದೀರಾ? ಮಧ್ಯಪ್ರದೇಶ | ಒಂದೇ ಕುಟುಂಬದ ಮೂವರು ಮಹಿಳೆಯರು, ಓರ್ವ ಬಾಲಕಿ ಬಾವಿಯಲ್ಲಿ ಶವವಾಗಿ ಪತ್ತೆ

ಇನ್ನು ಗಾಯಾಳುಗಳನ್ನು ಸತ್ನಾ, ಅಮರಪತನ್ ಮತ್ತು ಮೈಹಾರ್ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ. ಗಾಯಾಳುಗಳನ್ನು ಮೊದಲು ಮೈಹರ್ ಮತ್ತು ಅಮರ್‌ಪತನ್ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದ್ದು ಬಳಿಕ ಅಮರಪತನ್‌ನಿಂದ ಮೂವರನ್ನು ಮತ್ತು ಮೈಹರ್‌ನಿಂದ ಐವರನ್ನು ಸತ್ನಾ ಜಿಲ್ಲಾ ಆಸ್ಪತ್ರೆಗೆ ವರ್ಗಾಯಿಸಲಾಗಿದೆ.

ಡಿಕ್ಕಿಯ ರಭಸಕ್ಕೆ ಬಸ್ ಸಂಪೂರ್ಣ ಜಖಂಗೊಂಡಿದೆ. ಹಲವಾರು ಪ್ರಯಾಣಿಕರು ಬಸ್ಸಿನೊಳಗೆ ಸಿಲುಕಿಕೊಂಡಿದ್ದರು. ಬಸ್‌ ಒಳಗೆ ಸಿಲುಕಿದ್ದ ಪ್ರಯಾಣಿಕರನ್ನು ಹೊರ ತೆಗೆಯಲು ಜೆಸಿಬಿ ಹಾಗೂ ಗ್ಯಾಸ್ ಕಟರ್ ಯಂತ್ರಗಳನ್ನು ಬಳಸಲಾಗಿದೆ.

ಇದನ್ನು ಓದಿದ್ದೀರಾ? ಮಧ್ಯಪ್ರದೇಶ । ಹಾಡಹಗಲೇ ಮಹಿಳೆ ಮೇಲೆ ಅತ್ಯಾಚಾರ; ಕಾಮುಕನ ಕೃತ್ಯ ನೋಡುತ್ತ ನಿಂತ ಜನ

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಮೈಹರ್‌ನ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಅಗರ್ವಾಲ್, “ಪ್ರಯಾಗ್‌ರಾಜ್‌ನಿಂದ ನಾಗ್ಪುರಕ್ಕೆ ಸ್ಲೀಪರ್ ಬಸ್ ಪ್ರಯಾಣಿಸುತ್ತಿತ್ತು. ದೇಹತ್ ಪೊಲೀಸ್ ಠಾಣೆ ಪ್ರದೇಶವನ್ನು ತಲುಪಿದಾಗ ಕಲ್ಲುಗಳನ್ನು ತುಂಬಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಪೊಲೀಸರು ತಕ್ಷಣವೇ ಘಟನಾ ಸ್ಥಳಕ್ಕೆ ಆಗಮಿಸಿದರು. ಮೊದಲು ಸುರಕ್ಷಿತವಾಗಿದ್ದವರನ್ನು ಸ್ಥಳಾಂತರಿಸಲಾಯಿತು” ಎಂದು ತಿಳಿಸಿದರು.

“ಅನೇಕರಿಗೆ ಗಾಯಗಳಾಗಿವೆ. ಬಸ್‌ನಲ್ಲೇ ಸಿಲುಕಿದ್ದ ಎಲ್ಲರನ್ನೂ ರಕ್ಷಿಸಲಾಗಿದೆ. ಆರು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಸುಮಾರು 23 ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ದುರದೃಷ್ಟವಶಾತ್, ಇನ್ನೂ ಮೂವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭಿಸಿದೆ” ಎಂದು ಮಾಹಿತಿ ನೀಡಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X