ಮೈಸೂರು | ಎಐಡಿಎಸ್ಒ ಸಂಘಟನೆಯಿಂದ ಕ್ರಾಂತಿಕಾರಿ ಭಗತ್ ಸಿಂಗ್ ಜನ್ಮದಿನಾಚರಣೆ

Date:

Advertisements

ಮಹಾನ್ ಕ್ರಾಂತಿಕಾರಿ ಭಗತ್ ಸಿಂಗ್ ಅವರ 117ನೇ ಜನ್ಮದಿನಾಚರಣೆ ಅಂಗವಾಗಿ ಎಐಡಿಎಸ್‌ಒ ವತಿಯಿಂದ ಮೈಸೂರಿನ ಮಹಾರಾಜ ಕಾಲೇಜು, ಯುವರಾಜ ಕಾಲೇಜು, ಕುಕ್ಕರಹಳ್ಳಿ ಪಾರ್ಕ್, ಮಹಾರಾಣಿ ಪದವಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಭಗತ್ ಸಿಂಗ್ ವಿಚಾರ ತಿಳಿಸುವುದರ ಮೂಲಕ ಜನ್ಮದಿನಾಚರಣೆ ಮಾಡಿದರು.

“ಭಗತ್ ಸಿಂಗ್ ಕ್ರಾಂತಿ ಮತ್ತು ಸ್ವಾತಂತ್ರ್ಯದ ಬಗೆಗಿನ ತಮ್ಮ ವಿಚಾರವನ್ನು ಎಷ್ಟು ಪ್ರಖರವಾಗಿ ಹರಡಿದ್ದರೆಂದರೆ ಸಾವಿರಾರು ಜನ ವಿಚಾರಗಳನ್ನು ಈಡೇರಿಸಲು ಪ್ರಾಣತ್ಯಾಗಕ್ಕೆ ಸಿದ್ಧರಾಗಿ ಬೀದಿಗಿಳಿದರು. ಭಗತ್ ಸಿಂಗ್ ಅವರ ಪ್ರಕಾರ ಸ್ವಾತಂತ್ರ್ಯದ ಪರಿಕಲ್ಪನೆ ಹೀಗಿತ್ತು “ಕೇವಲ ಸ್ವಾತಂತ್ರ್ಯ ಪಡೆಯುವುದು ನಮ್ಮ ಉದ್ದೇಶವಲ್ಲ, ಬ್ರಿಟೀಷರಿಂದ ಪಡೆದ ಸ್ವಾತಂತ್ರ್ಯ ನಮ್ಮ ದೇಶದ ಕೆಲವೇ ಕೆಲವು ಶ್ರೀಮಂತ ವರ್ಗಕ್ಕೆ ವರ್ಗಾವಣೆಯಾದರೆ, ಅದು ನಿಜವಾದ ಸ್ವಾತಂತ್ರ್ಯವಾದೀತೆ? ಹೀಗೆ ಸಿಗುವ ಸ್ವಾತಂತ್ರ್ಯ ನಮ್ಮ ದೇಶದ ಸಾಮಾನ್ಯ ಜನರ ಬದುಕಿನಲ್ಲಿ ಏನಾದರೂ ಬದಲಾವಣೆಯನ್ನು ತರಲು ಸಾಧ್ಯವೇ? ದೇಶದ ರೈತರ, ಬಡ ಕೂಲಿ-ಕಾರ್ಮಿಕರ ಜೀವನ ಉತ್ತಮವಾಗುವುದೇ? ಎಂದು ಭಗತ್‌ ಸಿಂಗ್‌ ಪ್ರಶ್ನಿಸುತ್ತಿದ್ದರು” ಎಂದು ಸಾರ್ವಜನಿಕರಿಗೆ ತಿಳಿಸಿದರು.

“ಭಗತ್‌ ಸಿಂಗ್‌ ಅವರು, ʼಸ್ವಾತಂತ್ರ್ಯ ಪಡೆಯುವುದು ಮಾತ್ರವೇ ನಮ್ಮ ಉದ್ದೇಶವಲ್ಲ, ಅದು ಮೊದಲ ಹೆಜ್ಜೆ ಮಾತ್ರ! ನಮ್ಮ ಗುರಿಯಿರುವುದು ಒಂದು ಉನ್ನತವಾದ ರಾಷ್ಟ್ರವನ್ನು ನಿರ್ಮಾಣ ಮಾಡುವುದು. ಯಾವ ರಾಷ್ಟ್ರ ತನ್ನೆಲ್ಲ ಜನರಿಗೆ ಸಮಾನವಾಗಿ ಬದುಕುವ ಹಕ್ಕನ್ನು ನೀಡುತ್ತದೆಯೋ, ಯಾವ ರಾಷ್ಟ್ರ ಧರ್ಮದ ಹೆಸರಿನಲ್ಲಿ ಜನರನ್ನು ಒಡೆಯುವುದಿಲ್ಲವೋ, ಯಾವ ರಾಷ್ಟ್ರ ಮನುಷ್ಯನಿಂದ ಮನುಷ್ಯನ ಶೋಷಣೆಯನ್ನು ಕೊನೆಗಾಣಿಸುವುದೋ ಅಂತಹ ರಾಷ್ಟ್ರ ಸ್ವಾತಂತ್ರ್ಯ ರಾಷ್ಟ್ರʼವೆಂದು ಹೇಳುತ್ತಿದ್ದರು” ಎಂದರು.

Advertisements

ಜಿಲ್ಲಾ ಕಾರ್ಯದರ್ಶಿ ನಿತಿನ್ ಮಾತನಾಡಿ, “ಭಗತ್ ಸಿಂಗ್ ಅವರು ಮಾನವನ ಜೀವನವನ್ನು ಪ್ರೀತಿಸಿದರು ಮತ್ತು ಮಾನವನ ಘನತೆಯನ್ನು ಎತ್ತಿಹಿಡಿದರು. ಹೇಗೆ ಜಾತಿ ಪದ್ಧತಿಯು ಜನಗಳನ್ನು ಕತ್ತಲೆಯಲ್ಲಿಟ್ಟು ಶೋಷಕರನ್ನು ಪ್ರಶ್ನಿಸದಂತೆ ಹೆಣೆದಿರುವ ನೀಚ ಷಡ್ಯಂತ್ರ. ಶತಮಾನಗಳಿಂದ ಈ ಕೊಳಕು ಅಮಾನವೀಯ ಆಚರಣೆಗಳು ಪ್ರಶ್ನಾತೀತವಾಗಿ ಮುಂದುವರೆದುಕೊಂಡು ಬಂದಿವೆ” ಎಂದು ಟೀಕಿಸಿದರು.

ಉಪಾಧ್ಯಕ್ಷೆ ಸ್ವಾತಿ ಮಾತನಾಡಿ, “ಕ್ರಾಂತಿಯೆಂದರೆ ಪ್ರಸಕ್ತ ಸಾಮಾಜಿಕ ವ್ಯವಸ್ಥೆಯನ್ನು ಸಂಪೂರ್ಣವಾಗಿ ಕಿತ್ತೊಗೆದು ಸಮಾಜವಾದಿ ವ್ಯವಸ್ಥೆ ಸ್ಥಾಪನೆ ಮಾಡುವುದು ಕೋಮುವಾದಿಗಳ ಆರ್ಥಿಕ ಪರಿಸ್ಥಿತಿಯೊಂದಿಗೆ ಸಂಬಂಧ ಹೊಂದಿದೆ ಎಂಬುದನ್ನು ಭಗತ್ ಸಿಂಗ್ ಗಮನಿಸಿದರು ಮತ್ತು ಧರ್ಮವನ್ನು ರಾಜಕೀಯದಿಂದ ಹೊರಗಿಡಬೇಕೆಂದು ಹೇಳುತ್ತಿದ್ದರು” ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಹೊನ್ನಟಗಿ ಗ್ರಾಮವು ಹೆಸರಿಗೆ ಮಾತ್ರ ಆದರ್ಶ ಗ್ರಾಮ; ಅಭಿವೃದ್ಧಿ ಮರೀಚಿಕೆ

ಅಭಿಷೇಕ್ ಮಾತನಾಡಿ, “ಶಿಕ್ಷಣದ ವ್ಯಾಪಾರಿಕರಣ, ನಿರುದ್ಯೋಗ, ಹಸಿವು, ಬಡತನ, ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ಮುಂತಾದ ಸಮಸ್ಯೆಗಳ ವಿರುದ್ಧ ಹೋರಾಡಲು ಹಾಗೂ ಶಿಕ್ಷಣ, ಮಾನವತೆ ಸಂಸ್ಕೃತಿ ಉಳಿಸಲು ಭಗತ್ ಸಿಂಗ್ ಅವರ ವಿಚಾರಗಳಿಂದ ಸ್ಫೂರ್ತಿಪಡೆದು ಹೋರಾಟಕ್ಕೆ ಮುಂದೆ ಬರಬೇಕು” ಎಂದು ವಿದ್ಯಾರ್ಥಿಗಳಿಗೆ ಕರೆಕೊಟ್ಟರು.

ಪದಾಧಿಕಾರಿಗಳಾದ ಹೇಮಾ, ಚಂದ್ರಿಕಾ, ಅಂಜಲಿ, ದಿಶಾ, ಬೀರಪ್ಪ, ಮುತ್ತು, ನಂದೀಶ್, ಅಭಿಷೇಕ್ ಬಿಪಿನ್ ಹಾಗೂ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

Download Eedina App Android / iOS

X