ಕಲಬುರಗಿ| ಕೌಟುಂಬಿಕ ಕಲಹ : ಪತ್ನಿಯನ್ನು ಕೊಂದು ಪೊಲೀಸರಿಗೆ ಶರಣಾದ ಪತಿ

Date:

Advertisements

ಕೌಟುಂಬಿಕ ಕಲಹದಿಂದಾಗಿ ಪತ್ನಿಯನ್ನು ಕೊಡಲಿಯಿಂದ ಕೊಲೆಗೈದ ಪತಿ ಪೊಲೀಸರಿಗೆ ಶರಣಾದ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಬಟಗೇರಾ (ಬಿ) ಗ್ರಾಮದಲ್ಲಿ ನಡೆದಿದೆ.

ನಾಗಮ್ಮ (42) ಎಂಬುವವರು ಕೊಲೆಯಾದ ಮಹಿಳೆ. ಶೇಖರ್ (45) ಕೊಲೆ ಮಾಡಿದ ಆರೋಪಿಯಾಗಿದ್ದು, ಸೇಡಂ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಾಗಮ್ಮ ಹಾಗೂ ಪತಿ ಶೇಖರ್ ದಾಂಪತ್ಯದಲ್ಲಿ ಬಿರುಕು ಬಿಟ್ಟಿತ್ತು. ನಿತ್ಯವೂ ಮನೆಯಲ್ಲಿ ಗಲಾಟೆ ನಡೆಯುತ್ತಿತ್ತು. ಇಬ್ಬರ ಮಧ್ಯೆ ಜಗಳವಾಗಿದ್ದರಿಂದ ಹೆಂಡತಿ ತವರು ಮನೆಗೆ ಹೋಗಿ ಶನಿವಾರ ವಾಪಸ್ ಗಂಡನ ಮನೆಗೆ ಬಂದಿದ್ದಳು. ಶನಿವಾರ ರಾತ್ರಿ ಕೋಪ ಮತ್ತೆ ವಿಪರೀತಕ್ಕೆ ತಿರುಗಿ ಜಗಳದಲ್ಲಿ ಸಿಟ್ಟಿಗೆದ್ದ ಶೇಖರ್ ಹೆಂಡತಿ ಕತ್ತಿಗೆ ಕೊಡಲಿಯಿಂದ ಹೊಡೆದಿದ್ದಾನೆ. ತೀವ್ರ ರಕ್ತಸ್ರಾವದಿಂದಾಗಿ ನಾಗಮ್ಮ ಮೃತಪಟ್ಟಿದ್ದಾಳೆ ಎನ್ನಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಿಧಾನಸೌಧದಲ್ಲೇ ಅತ್ಯಾಚಾರ? ಇದು ಕೇವಲ ತನಿಖೆಯಿಂದ ಬಗೆಹರಿಯುವ ಸಂಗತಿಯಲ್ಲ

ಸೇಡಂ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದ್ದು, ಸ್ಥಳಕ್ಕೆ ಸಿಪಿಐ ಮಹಾದೇವ ದಿಡ್ಡಿಮನಿ, ಪಿಎಸ್‌ಐ ಮಂಜುನಾಥ ರೆಡ್ಡಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X