ದಶಕ ಪೂರೈಸಿದ ‘ಮನ್ ಕಿ ಬಾತ್‌’ ಬಗ್ಗೆ ಪ್ರಧಾನಿ ಮೋದಿ ಮಾತು

Date:

Advertisements

ದೇಶದ ಜನರು ಸಕಾರಾತ್ಮಕ ವಿಚಾರಗಳು, ಸಾಧಕರ ಸ್ಪೂರ್ತಿದಾಯಕ ಕಥೆಗಳನ್ನು ಹೆಚ್ಚು ಇಷ್ಟಪಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಮಾಸಿಕ ರೇಡಿಯೊ ಕಾರ್ಯಕ್ರಮ ‘ಮನ್ ಕಿ ಬಾತ್’ನಲ್ಲಿ ಮಾತನಾಡಿದ ಅವರು, ‘ಸಾಮಾಜಿಕ ಸಮಸ್ಯೆಗಳ ಬಗ್ಗೆ, ದೇಶದ ವಿವಿಧ ಭಾಗಗಳ ಜನರ ಪ್ರಯತ್ನ ಸಾಧನೆಗಳನ್ನು ಶ್ಲಾಘಿಸುವುದರೊಂದಿಗೆ ರೇಡಿಯೊ ಕಾರ್ಯಕ್ರಮವು 10 ವರ್ಷಗಳನ್ನು ಪೂರೈಸಿದೆ’ಎಂದು ಹೇಳಿದರು.

ಜನರು ಯಾವಾಗಲೂ ನಕಾರಾತ್ಮಕ ಅಥವಾ ಅತಿರಂಜಿತ ವಿಷಯಗಳಿಗೆ ಮಾತ್ರ ಕಿವಿಯಾಗುತ್ತಾರೆ ಎಂಬ  ಭಾವನೆಯಿದೆ. ಆದರೆ ಮನ್ ಕಿ ಬಾತ್ ಕಾರ್ಯಕ್ರಮ ಅದನ್ನು ಸುಳ್ಳು ಮಾಡಿ ಜನರು ಸಕಾರಾತ್ಮಕ ವಿಷಯಗಳಿಗೂ ಆಸಕ್ತಿ ತೋರಿಸುತ್ತಾರೆ ಎನ್ನುವುದನ್ನು ತೋರಿಸಿಕೊಟ್ಟಿದೆ ಎಂದು ಪ್ರಧಾನಿ ಹೇಳಿದರು.

Advertisements

ಇತ್ತೀಚೆಗೆ ಅಮೆರಿಕಕ್ಕೆ ಭೇಟಿ ನೀಡಿದ್ದರ ಕುರಿತು ಮಾತನಾಡಿದ ಅವರು, ಸುಮಾರು 300 ಪುರಾತನ ವಸ್ತುಗಳನ್ನು ಭಾರತಕ್ಕೆ ಹಿಂದಿರುಗಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ. ಜನರು ತಮ್ಮ ಪರಂಪರೆಯ ಬಗ್ಗೆ ಹೆಮ್ಮೆಪಡಲು ಪ್ರಾರಂಭಿಸಿದಾಗ, ಜಗತ್ತು ಅವರ ಭಾವನೆಗಳನ್ನು ಗೌರವಿಸುತ್ತದೆ. ಸರ್ಕಾರ ಕಳೆದ 10 ವರ್ಷಗಳಲ್ಲಿ ವಿವಿಧ ದೇಶಗಳಿಂದ ಹೆಚ್ಚಿನ ಸಂಖ್ಯೆಯ ಪ್ರಾಚೀನ ಕಲಾಕೃತಿಗಳು ಭಾರತಕ್ಕೆ ಹಿಂತಿರುಗುವಂತೆ ಮಾಡಿದೆ ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಿಧಾನಸೌಧದಲ್ಲೇ ಅತ್ಯಾಚಾರ? ಇದು ಕೇವಲ ತನಿಖೆಯಿಂದ ಬಗೆಹರಿಯುವ ಸಂಗತಿಯಲ್ಲ

‘ಮೇಕ್ ಇನ್ ಇಂಡಿಯಾ’ ಕೂಡ 10 ವರ್ಷಗಳನ್ನು ಪೂರೈಸುತ್ತಿದೆ. ಪ್ರತಿ ವಲಯದಲ್ಲಿ ರಫ್ತು ಹೆಚ್ಚುತ್ತಿದೆ ಮತ್ತು ವಿದೇಶಿ ನೇರಹೂಡಿಕೆ (ಎಫ್‌ಡಿಐ) ಹೆಚ್ಚಳವು ಅದರ ಯಶಸ್ಸಿಗೆ ಸಾಕ್ಷಿಯಾಗಿದೆ. ಇದು ಸ್ಥಳೀಯ ಉತ್ಪಾದಕರಿಗೆ ಸಾಕಷ್ಟು ಸಹಾಯಮಾಡಿದೆ ಎಂದರು.

ಗಾಂಧಿ ಜಯಂತಿಯಂದು ಆರಂಭಿಸಿದ್ದ ‘ಸ್ವಚ್ಛ ಭಾರತ್’ಯೋಜನೆ ಸಹ 10 ವರ್ಷ ಪೂರೈಸಿದ್ದು, ಅಭೂತ ಪೂರ್ವ ಯಶಸ್ಸು ಕಂಡಿದೆ. ಇದು ಮಹಾತ್ಮಾ ಗಾಂಧಿ ಅವರಿಗೆ ಸಲ್ಲಿಸಿದ ನಮನವಾಗಿದೆ. ಈ ಮುಂಗಾರಿನ ಋತುವಿನಲ್ಲಿ ಭಾರತದಲ್ಲಿ ಸಮೃದ್ಧ ಮಳೆಯಾಗಿದೆ ಎಂದ ಅವರು, ನೀರನ್ನು ಸಂರಕ್ಷಿಸಲು ದೇಶದ ವಿವಿಧ ಭಾಗಗಳಲ್ಲಿ ಮಾಡುತ್ತಿರುವ ಪ್ರಯತ್ನಗಳ ಪ್ರಸ್ತಾಪಿಸಿ, ಶ್ಲಾಘಿಸಿದರು. ಜತೆಗೆ ನೀರನ್ನು ಮಿತವಾಗಿ ಬಳಸಿ, ಮರುಬಳಕೆ ಮಾಡಿ ಎಂದು ಕರೆ ನೀಡಿದರು

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X