ಗ್ರಾಮ ಲೆಕ್ಕಾಧಿಕಾರಿ ಪರೀಕ್ಷೆ | ಬೆಳಿಗ್ಗೆ-ಮಧ್ಯಾಹ್ನ-ಸಂಜೆಯ ಅರಿವಿಲ್ಲದ ಕೆಇಎ ಎಡವಟ್ಟು!

Date:

Advertisements

ಗ್ರಾಮ ಲೆಕ್ಕಾಧಿಕಾರಿಗಳ ನೇಮಕಕ್ಕೆ ಭಾನುವಾರ ಸ್ಪರ್ಧಾ ಪರೀಕ್ಷೆ ನಡೆದಿದೆ. 1,000 ಗ್ರಾಮ ಲೆಕ್ಕಾಧಿಕಾರಿ (ವಿಎ) ಹುದ್ದೆಗಳು ಮತ್ತು 98 ಜಿಟಿಟಿಸಿ ಹುದ್ದೆಗಳಿಗೆ 5.75 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಆದರೆ, ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಎಡವಟ್ಟು ಮಾಡಿದೆ. ನೆಟ್ಟಿಗರ ಆಕ್ರೋಶ ಮತ್ತು ಟ್ರೋಲ್‌ಗೆ ಕೆಇಎ ಗುರಿಯಾಗಿದೆ.

ಕಡ್ಡಾಯ ಕನ್ನಡ ಭಾಷಾ ಪ್ರಶ್ನೆಪತ್ರಿಕೆಯ ಮುಖಪುಟದಲ್ಲಿ ಹಲವು ದೋಷಗಳು ಕಂಡುಬಂದಿವೆ. ಪರೀಕ್ಷಾ ಸಮಯಕ್ಕೆ ಸಂಬಂಧಿಸಿತ ಸೂಚನೆಗಳಲ್ಲಿ ತಪ್ಪುಗಳಿದ್ದು, ಅಭ್ಯರ್ಥಿಗಳೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪರೀಕ್ಷ ಸಮಯದ ಬಗ್ಗೆ ವಿವರಿಸಲಾಗಿರುವ ಮಾರ್ಗಸೂಚಿಗಳಲ್ಲಿ ಬೆಳಿಗ್ಗೆಯ ಬದಲಿಗೆ ಮಧ್ಯಾಹ್ನ, ಮಧ್ಯಾಹ್ನದ ಬದಲಿಗೆ ಸಂಜೆ ಎಂದು ಉಲ್ಲೇಖಿಸಿರುವುದು ಕಂಡುಬಂದಿದೆ.

ಪರೀಕ್ಷಾ ಸೂಚನೆಗಳಲ್ಲಿ ‘ಪ್ರಶ್ನೆ ಪತ್ರಿಕೆಯನ್ನು ನಿಮಗೆ ಬೆಳಿಗ್ಗೆ 10:25ರ ನಂತರ ಕೊಡಲಾಗುತ್ತದೆ’ ಎಂದು ಮುದ್ರಿಸುವ ಬದಲು ‘ಮಧ್ಯಾಹ್ನ 10:25ರ ನಂತರ ಕೊಡಲಾಗುತ್ತದೆ’ ಎಂದು ಮುದ್ರಿಸಲಾಗಿದೆ. ಅಲ್ಲದೆ, ‘ಪ್ರಶ್ನೆ ಪತ್ರಿಕೆ ಕೊಟ್ಟ ನಂತರ ಮೂರನೇ ಬೆಲ್ ಬೆಳಿಗ್ಗೆ 10:30ಕ್ಕೆ ಆಗುತ್ತದೆ’ ಎಂದು ಉಲ್ಲೇಖಿಸುವ ಬದಲು ‘ಮಧ್ಯಾಹ್ನ 10:30ಕ್ಕೆ ಆಗುತ್ತದೆ’ ಎಂದು ಬರೆಯಲಾಗಿದೆ.

Advertisements
WhatsApp Image 2024 09 30 at 12.45.02 PM

ಇನ್ನು, ಪರೀಕ್ಷೆ ಬರೆಯುವುದನ್ನು ನಿಲ್ಲಿಸುವ ಸೂಚನೆಯಲ್ಲಿ, ‘ಕೊನೆಯ ಬೆಲ್ ಮಧ್ಯಾಹ್ನ 12:30ಕ್ಕೆ ಆದ ನಂತರ ಉತ್ತರಿಸುವುದನ್ನು ನಿಲ್ಲಿಸಿ’ ಎಂದು ಉಲ್ಲೇಖಿಸದೆ, ‘ಸಂಜೆ 12:30ಕ್ಕೆ’ ಎಂದು ಮುದ್ರಿಸಲಾಗಿದೆ.

ಇದೆಲ್ಲದೆ, ಓಎಂಆರ್ ಶೀಟ್‌ನ ಕನ್ನಡ ಅಕ್ಷರಗಳಲ್ಲೂ ದೋಷಗಳು ಕಂಡುಬಂದಿವೆ. ಮಾಡಬೇಕು ಎಂಬುದರ ಬದಲಿಗೆ, ‘ಮಾಡಬೇಡು’ ಎಂದು, ಕಪ್ಪು ಎಂಬುದನ್ನು ‘ಕಷ್ಟು’, ಎಂದೂ, ಮೊದಲು ಎನ್ನುವುದನ್ನು ‘ಮೊದಲಾ’ ಎಂದು ತಪ್ಪಾಗಿ ಬರೆಯಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

Download Eedina App Android / iOS

X