ವಿಜಯಪುರ | ಅ.6ರಂದು ಜನಕಲ ಸಾಂಸ್ಕೃತಿಕ ಮೇಳ

Date:

Advertisements

ಕವಿ ಪ್ರಕಾಶನದ ಮೇ ಬಳಗ ಹಾಗೂ ಲಡಾಯಿ ಪ್ರಕಾಶನದ ಚಿತ್ತಾರ ಕಲಾ ಬಳಗ ಸಂಯುಕ್ತ ಆಶ್ರಯದಲ್ಲಿ ವಿಜಯಪುರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಅಕ್ಟೋಬರ್‌ 6ರಂದು ಜನಕಲ ಸಾಂಸ್ಕೃತಿಕ ಮೇಳ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ಪತ್ರಕರ್ತ ಅನಿಲ್ ಹೊಸಮನಿ ಹೇಳಿದರು.

ವಿಜಯಪುರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಮೊದಲ ಬಾರಿಗೆ ಕ್ರಾಂತಿಗೀತೆಗಳ ಮೇಳ ನಡೆಯಲಿದೆ. ಕಲಾತಂಡಗಳು, ಕಲಾವಿದರು ಸೇರಿದಂತೆ ಬೇರೆ ಬೇರೆ ಜಿಲ್ಲೆಗಳಿಂದ ಕಲಾತಂಡಗಳು ಭಾಗವಹಿಸಲಿವೆ. ಈ ಮೇಳಕ್ಕೆ ಸರ್ಕಾರದಿಂದಾಗಲಿ ಅಥವಾ ರಾಜಕಾರಣಿಗಳಿಂದಾಗಲಿ ಯಾವುದೇ ತರಹದ ಸಹಾಯ ಪಡೆಯುತ್ತಿಲ್ಲ. ಬೇರೆ ಬೇರೆ 14 ವೇದಿಕೆ ಒಕ್ಕೂಟಗಳ ಸಹಯೋಗ ಇರಲಿದ್ದು, ಮೇಳದಲ್ಲಿ ಒಂಬತ್ತು ಕಲಾ ತಂಡಗಳು ಭಾಗವಹಿಸಲಿವೆ. 10:30ಕ್ಕೆ ಕಾರ್ಯಕ್ರಮ ಉದ್ಘಾಟನೆ ಯಾಗಲಿದ್ದು, ಕ್ರಾಂತಿಕಾರಿ ಸಂದೇಶ ಸಾರುವ ಹಾಡುವ ಮಹಿಳೆಯರನ್ನು ಕಾರ್ಯಕ್ರಮಕ್ಕೆ ಉದ್ಘಾಟನೆಗೆ ಆಹ್ವಾನಿಸಲಾಗಿದೆ. ಸಂಜೆ 6:15ಕ್ಕೆ ಸಮಾರೋಪ ಸಮಾರಂಭ ನಡೆಯುತ್ತದೆ. ಸಂಜೆ 6:45ಕ್ಕೆ ಎಂಎಂ ಕಲ್ಬುರ್ಗಿಯವರ ರಕ್ತ ವಿಲಾಪ ನಾಟಕವನ್ನು ರಾಯಚೂರು ಸಮುದಾಯ ತಂಡದವರು ಪ್ರದರ್ಶನಗೊಳಿಸಲಿದ್ದಾರೆ” ಎಂದರು.

ಲಡಾಯಿ ಪ್ರಕಾಶನದ ಮುಖ್ಯಸ್ಥ ಬಸವರಾಜ್ ಸುಳಿಭಾವಿ ಮಾತನಾಡಿ, “ಜನಕಲ ಸಾಂಸ್ಕೃತಿಕ ಮೇಳವನ್ನು ಜನಮುಖಿಯಾಗಿಸುವ ಪ್ರಯತ್ನ ನಡೆಯುತ್ತಿದೆ. ಮೊದಲಿಗೆ ಮಹಾರಾಷ್ಟ್ರದಲ್ಲಿ ಹುಟ್ಟಿಕೊಂಡಂತೆ ಈಗ ರಾಜ್ಯದಲ್ಲಿ ದಲಿತ ಸಂಘಟನೆ, ಬಂಡಾಯ ಸಾಹಿತ್ಯ ಸಂಘಟನೆ ಹುಟ್ಟಿಕೊಂಡಿದೆ. ಜನಮುಖಿಯಾದಂತಹ ಸಾಹಿತ್ಯವನ್ನು ಜನಗಳಿಗೆ ತಲುಪಿಸುವ ಹಾಡುಗಾರಿಕೆಯನ್ನು ಆರಂಭಿಸಲಾಗಿದೆ. ಕಳೆದ ಹತ್ತು ವರ್ಷಗಳಿಂದ ಮೇ ಬಳಗ ಈ ಕೆಲಸ ಮಾಡುತ್ತಿದೆ” ಎಂದು ತಿಳಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಸಿಎಂ ಸಿದ್ದರಾಮಯ್ಯನವರ ರಾಜೀನಾಮೆಗೆ ಒತ್ತಾಯ; ಬಿಜೆಪಿ, ಜೆಡಿಎಸ್ ನಡೆ ಖಂಡಿಸಿ ಅಹಿಂದ ಪ್ರತಿಭಟನೆಗೆ ಸಿದ್ಧತೆ

“ಸಾಮಾನ್ಯ ಜನರಿಗೆ ಸಾಹಿತ್ಯವನ್ನು ತಲುಪಿಸುವುದು ಮತ್ತು ಬೇರೆ ಬೇರೆ ರಾಜ್ಯಗಳಿಗೆ ಸಾಹಿತ್ಯವನ್ನು ಪರಿಚಯಿಸುವ ಕೆಲಸ ಇದರಿಂದಾಗುತ್ತದೆ. ಈಗಾಗಲೇ ದಲಿತ ಚಳವಳಿಗೆ 50 ವರ್ಷ ತುಂಬಿದ್ದರಿಂದ ಇಡೀ ಚಳವಳಿಯ ಹಿನ್ನೋಟ ಗಮನಿಸುವ ಅವಲೋಕನ ಕಾರ್ಯ ನಡೆಯಲಿದೆ. ರಾಜ್ಯಾದ್ಯಂತ ತಿರುಗಾಡಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ಅನಕ್ಷರಸ್ಥರ ಎದೆಯೊಳಗೆ ಅಂಬೇಡ್ಕರ್ ಅವರ ಹೋರಾಟವನ್ನು ಹಾಡುಗಳ ಮೂಲಕ ಪರಿಚಯಿಸುವ ಕೆಲಸ ನಡೆಯಲಿದೆ” ಎಂದರು.

ಬಸವಾದಿ ಶರಣರ ವಚನ ತಿದ್ದುಪಡಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು,” ವಚನಕಾಲ, ಶರಣಕಾಲ, ಬಸವಣ್ಣನವರ ವಚನಗಳ ತೆರೆಸುವ ಕೆಲಸ ಆಗಬಾರದು. ಲಿಂಗಾಯತರು ಪ್ರಜ್ಞಾವಂತರು ಇದರ ವಿರುದ್ಧ ಪ್ರತಿದ್ವನಿಸಬೇಕು” ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಪ್ರಭುಗೌಡ ಪಾಟೀಲ, ನಾಗರಾಜ್ ಲಂಬು, ಚನ್ನು ಕಟ್ಟಿಮನಿ, ರಾಜೇಶ್ವರಿ ಯರನಾಳ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X