’45 ದಿನಗಳ ಕಾಲ ನಿದ್ರೆ ಇಲ್ಲ’; ಕೆಲಸದ ಒತ್ತಡದಿಂದ ಬಜಾಜ್ ಕಂಪನಿ ಸಿಬ್ಬಂದಿ ಆತ್ಮಹತ್ಯೆ

Date:

Advertisements

ಬಜಾಜ್ ಫೈನಾನ್ಸ್‌ನಲ್ಲಿ ಕೆಲಸ ಮಾಡುತ್ತಿದ್ದ 42 ವರ್ಷದ ವ್ಯಕ್ತಿಯೊಬ್ಬರು ‘ಕೆಲಸದ ಒತ್ತಡ’ದಿಂದ ಬಳಲಿರುವುದಾಗಿ ಹೇಳಿಕೊಂಡಿದ್ದು, ಆತ್ಮಹತ್ಯೆಗೆ ಶರಣಾಗಿದ್ದಾರೆ.

ಉತ್ತರ ಪ್ರದೇಶದ ಝಾನ್ಸಿಯಲ್ಲಿ ‘ಏರಿಯಾ ಮ್ಯಾನೇಜರ್’ ಆಗಿ ಕೆಲಸ ಮಾಡುತ್ತಿದ್ದ ತರುಣ್ ಸಕ್ಸೇನಾ ಆತ್ಮಹತ್ಯೆ ಮಾಡಿಕೊಂಡಿದ್ದರೆ. “ತಮ್ಮ ಹಿರಿಯ ಅಧಿಕಾರಿಗಳು ಕಳೆದ ಎರಡು ತಿಂಗಳ ಕೆಲಸದ ಗುರಿಯನ್ನು ಪೂರೈಸುವಂತೆ ಒತ್ತಡ ಹೇರುತ್ತಿದ್ದಾರೆ. ಸಂಬಳ ಕಡಿತಗೊಳಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಕಳೆದ 45 ದಿನಗಳಿಂದ ನಿದ್ರೆಯೂ ಇಲ್ಲ” ಎಂದು ತಮ್ಮ ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ. ಆರೋಪಗಳ ಬಗ್ಗೆ ಬಜಾಜ್ ಕಂಪನಿ ಈವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ತರುಣ್ ಅವರು ಝಾನ್ಸಿ ಪ್ರದೇಶದಲ್ಲಿ ಬಜಾಜ್ ಫೈನಾನ್ಸ್ ಲೋನ್‌ಗಳ EMIಗಳನ್ನು ಸಂಗ್ರಹಿಸುವ ಕೆಲಸಕ್ಕೆ ನೇಮಿಸಲಾಗಿತ್ತು. ಆದರೆ, ಹಲವಾರು ಕಾರಣಗಳಿಂದಾಗಿ ಅವರು ತಮಗೆ ನೀಡಲಾಗಿದ್ದ ಗುರಿ (ಟಾರ್ಗೆಟ್‌)ಅನ್ನು ಪೂರೈಸಲಾಗಿರಲಿಲ್ಲ. ಇದರಿಂದ, ಅವರು ತಮ್ಮ ಕೆಲಸವನ್ನು ಕಳೆದುಕೊಳ್ಳುವ ಆತಂಕದಲ್ಲಿದ್ದರು ಎಂದು ತಿಳಿದುಬಂದಿದೆ

Advertisements

“ಕಂಪನಿಯಲ್ಲಿ ಹಿರಿಯರು ಪದೇ ಪದೇ ಅವಮಾನ ಮಾಡಿದ್ದಾರೆ. ನಾನು ಭವಿಷ್ಯದ ಬಗ್ಗೆ ತುಂಬಾ ಚಿಂತಿತನಾಗಿದ್ದೇನೆ. ನಾನು ಯೋಚಿಸುವ ಸಾಮರ್ಥ್ಯವನ್ನು ಕಳೆದುಕೊಂಡಿದ್ದೇನೆ” ಎಂದು ತರುಣ್ ಹೇಳಿದ್ದಾರೆ.

“ನಾನು 45 ದಿನಗಳಿಂದ ನಿದ್ದೆ ಮಾಡಿಲ್ಲ. ನಾನು ಊಟ ಮಾಡುವುದಕ್ಕೂ ಕಷ್ಟಪಟ್ಟಿದ್ದೇನೆ. ನಾನು ಸಾಕಷ್ಟು ಒತ್ತಡದಲ್ಲಿದ್ದೇನೆ. ಏನೇ ಆದರೂ ನೀಡಿರುವ ಗುರಿಗಳನ್ನು ಪೂರೈಸಬೇಕು ಅಥವಾ ಕೆಲಸ ಬಿಡಬೇಕೆಂದು ಹಿರಿಯ ವ್ಯವಸ್ಥಾಪಕರು ನನಗೆ ಒತ್ತಡ ಹೇರುತ್ತಿದ್ದಾರೆ” ಎಂದು ತರುಣ್ ಡೆತ್‌ನೋಟ್‌ನಲ್ಲಿ ಆರೋಪಿಸಿದ್ದಾರೆ.

ಸಾಲ ವಸೂಲಾತಿ ಹೆಚ್ಚಿಸುವಂತೆ ತರುಣ್ ಅವರಿಗೆ ಕಂಪನಿಯು ಒತ್ತಡ ಹೇರುತ್ತಿತ್ತು ಎಂದು ತರುಣ್ ನಿವಾಸ ಸಮೀಪವೇ ವಾಸಿಸುತ್ತಿರುವ ಅವರ ಸಂಬಂಧಿ ಗೌರವ್ ಸಕ್ಸೇನಾ ಆರೋಪಿಸಿದ್ದರು. “ಇಂದು ಬೆಳಿಗ್ಗೆ 6 ಗಂಟೆಗೆ ವಿಡಿಯೋ ಕಾನ್ಫರೆನ್ಸ್‌ನಲ್ಲಿ, ಅವರ ಹಿರಿಯರು ಮಾನಸಿಕ ಒತ್ತಡವನ್ನು ಹೇಳಿದ್ದರು. ಅವರನ್ನು ವಜಾ ಮಾಡುವುದಾಗಿ ಬೆದರಿಕೆ ಹಾಕಿದ್ದರು” ಎಂದು ಹೇಳಿದ್ದಾರೆ.

“ಆತ್ಮಹತ್ಯೆ ಟಿಪ್ಪಣಿಯಲ್ಲಿ ಅವರ ಹಿರಿಯರು ಗುರಿ ಪೂರೈಸುವಂತೆ ಒತ್ತಡ ಹೇರುತ್ತಿದ್ದಾರೆಂದು ಆರೋಪಿಸಲಾಗಿದೆ. ಕುಟುಂಬದಿಂದ ನಮಗೆ ದೂರು ಬಂದರೆ ನಾವು ಕ್ರಮ ತೆಗೆದುಕೊಳ್ಳುತ್ತೇವೆ” ಎಂದು ಹಿರಿಯ ಪೊಲೀಸ್ ಅಧಿಕಾರಿ ವಿನೋದ್ ಕುಮಾರ್ ಗೌತಮ್ ಹೇಳಿದ್ದಾರೆ.

ಇತ್ತೀಚೆಗೆ, ಅರ್ನ್ಸ್ಟ್ ಅಂಡ್ ಯಂಗ್ ಇಂಡಿಯಾ ಉದ್ಯೋಗಿ, ಚಾರ್ಟರ್ಡ್ ಅಕೌಂಟೆಂಟ್ ಅನ್ನಾ ಸೆಬಾಸ್ಟಿಯನ್ ಪೆರೈಲ್ (26 ವರ್ಷ) ಕೂಡ ಕೆಲಸ ಒತ್ತಡದಿಂದಾಗಿ ಆತ್ಮಹತ್ಯೆಗೆ ಶರಣಾಗಿದ್ದರು. ತಮ್ಮ ಸಾವಿಗೆ ಹಿರಿಯ ವ್ಯವಸ್ಥಾಪಕರೇ ಕಾರಣವೆಂದು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದರು.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X