ಖರ್ಗೆ ಕೊಲೆಗೆ ಸಂಚು | ಆಡಿಯೋ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ: ಸಿಎಂ ಬೊಮ್ಮಾಯಿ

Date:

Advertisements
  • ಆಡಿಯೋ ಅಸಲಿಯತ್ತು ಪರಿಶೀಲನೆ ಸಲುವಾಗಿ ಪ್ರಕರಣ ದಾಖಲು
  • ತನಿಖಾ ವರದಿ ಬಂದ ಬಳಿಕ ಮುಂದಿನ ಕ್ರಮದ ಭರವಸೆ ನೀಡಿದ ಸಿಎಂ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬಸ್ಥರ ಕೊಲೆ ಸಂಚು ಕುರಿತಂತೆ ಮಾತನಾಡಿರುವ ಆಡಿಯೋ ಬಗ್ಗೆ ಪ್ರಕರಣ ದಾಖಲಿಸುವುದಾಗಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಈ ಕುರಿತು ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಣಿಕಂಠ ರಾಠೋಡ್ ಮಾತಾಡಿದ ಫೋನ್‌ ಧ್ವನಿ ಮುದ್ರಿಕೆ ವಿಚಾರದಲ್ಲಿ ಪ್ರಕರಣ ದಾಖಲಿಸಿ ಸತ್ಯಾಸತ್ಯತೆ ಬಗ್ಗೆ ತನಿಖೆ ನಡೆಸುತ್ತೇವೆ ಎಂದಿದ್ದಾರೆ.

ಮುಂದುವರೆದು ಮಾತನಾಡಿದ ಅವರು ಧ್ವನಿ ಮುದ್ರಿಕೆ ವಿಚಾರದಲ್ಲಿ ಅನುಮಾನವಿದೆ. ಅದನ್ನು ತಿರುಚಲಾಗಿದೆಯೋ ಏನು ಎಂಬುವುದನ್ನು ನೋಡಬೇಕು. ಆ ಬಳಿಕ ಇದರ ಬಗ್ಗೆ ಪ್ರತಿಕ್ರಿಯೆ ನೀಡುವುದಾಗಿ ಬೊಮ್ಮಾಯಿ ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ?:ಬಿಜೆಪಿಯಿಂದ ಖರ್ಗೆ ಕುಟುಂಬ ಹತ್ಯೆಗೆ ಸಂಚು, ಮೋದಿ ಮೌನಕ್ಕೆ ಶರಣು : ಸುರ್ಜೇವಾಲ ಗಂಭೀರ ಆರೋಪ

ಇದೇ ವೇಳೆ ಕಾಂಗ್ರೆಸ್ ಪರ ನಟ ಶಿವರಾಜ್ ಕುಮಾರ್ ಪ್ರಚಾರ ಕುರಿತು ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ಶಿವರಾಜ್ ಕುಮಾರ್ ಪ್ರಚಾರದ ಬಗ್ಗೆ ನನಗೇನು ಅಭ್ಯಂತರವಿಲ್ಲ ಎಂದರು.

ರಾಜ್ಯದಲ್ಲಿ ಮೋದಿ ಅಲೆ ಮೊದಲಿಗಿಂತಲೂ ಈಗ ಜಾಸ್ತಿಯಾಗಿದೆ. ಹೀಗಾಗಿ ನಮಗೇನೂ ಆತಂಕವಿಲ್ಲ. ಅವರವರ ಪಕ್ಷದವರು ಅವರಿಗೆ ಬೇಕಾದವರನ್ನು ಕರೆಯಿಸಿಕೊಂಡು ಪ್ರಚಾರ ನಡೆಸಿಕೊಳ್ಳಲಿ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X