ಆಸ್ಟ್ರೇಲಿಯ | ಸಿಡ್ನಿ ಹಿಂದೂ ದೇವಾಲಯ ವಿರೂಪಗೊಳಿಸಿದ ಖಲಿಸ್ತಾನಿ ಉಗ್ರರು

Date:

Advertisements
  • ಖಲಿಸ್ತಾನಿ ಉಗ್ರರಿಂದ ದೇವಾಲಯದ ಮೇಲೆ ಭಾರತ ವಿರೋಧಿ ಬರಹ
  • ಆಸ್ಟ್ರೇಲಿಯದ ರೋಸ್‌ಹಿಲ್ ಪ್ರದೇಶದ ಶ್ರೀ ಸ್ವಾಮಿ ನಾರಾಯಣ ದೇಗುಲ

ಖಲಿಸ್ತಾನಿ ಉಗ್ರರು ಆಸ್ಟ್ರೇಲಿಯದ ಸಿಡ್ನಿಯಲ್ಲಿ ಹಿಂದೂ ದೇವಾಲಯವನ್ನು ಶುಕ್ರವಾರ (ಮೇ 5) ವಿರೂಪಗೊಳಿಸಿದ್ದಾರೆ.

ಸಿಡ್ನಿಯ ರೋಸ್‌ಹಿಲ್‌ ಪ್ರದೇಶದಲ್ಲಿರುವ ಶ್ರೀ ಸ್ವಾಮಿ ನಾರಾಯಣ ದೇವಾಲಯದ ದ್ವಾರದ ಮೇಲೆ ಖಲಿಸ್ತಾನಿ ಉಗ್ರರು ತಮ್ಮ ಧ್ವಜ ಕಟ್ಟಿದ್ದಾರೆ. ದೇಗುಲದ ಗೋಡೆ ಮೇಲೆ ಭಾರತ ವಿರೋಧಿ ಬರಹಗಳನ್ನು ಗೀಚಲಾಗಿದೆ.

ಖಲಿಸ್ತಾನಿ ಉಗ್ರರು ಭಾರತೀಯರ ಭಾವನೆಗಳಿಗೆ ಘಾಸಿ ಮಾಡಿದ್ದಾರೆ ಎಂದು ಪ್ರದೇಶದಲ್ಲಿರುವ ಭಾರತೀಯರು ಆತಂಕಕ್ಕೊಳಗಾಗಿದ್ದಾರೆ.

Advertisements

ಮೇ 24ರಂದು ಆಸ್ಟ್ರೇಲಿಯದ ಮೆಲ್ಬರ್ನ್‌ನಲ್ಲಿ ನಡೆಯಲಿರುವ ಕ್ವಾಡ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ. ಅದಕ್ಕೂ ಮುನ್ನ ಈ ಘಟನೆ ನಡೆದಿದೆ.

ಇಂತಹ ಕೃತ್ಯದಿಂದ ಇಲ್ಲಿ ನೆಲೆಸಿರುವ ಭಾರತೀಯರ ಭಾವನೆಗಳಿಗೆ ಘಾಸಿ ಉಂಟಾಗಿದೆ. ಈ ಕುರಿತು ನ್ಯೂ ಸೌಥ್ ವೇಲ್ಸ್ ಪೊಲೀಸರಿಗೆ ಮಾಹಿತಿ ನೀಡಲಾಗಿದೆ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.

23 ವರ್ಷಗಳ ಹಿಂದೆ ಈ ಶ್ರೀ ಸ್ವಾಮಿ ನಾರಾಯಣ ದೇವಾಲಯ ನಿರ್ಮಿಸಲಾಗಿದೆ. ಆಸ್ಟ್ರೇಲಿಯದ ಭಾರತೀಯರಲ್ಲಿ ಶಾಂತಿ, ಸಾಮರಸ್ಯ ಬೆಳೆಸಿ, ಹಿಂದೂ ಧರ್ಮದ ಮೌಲ್ಯಗಳನ್ನು ಬಿತ್ತಲು ದೇವಾಲಯ ಆದ್ಯತೆ ನೀಡುತ್ತಿದೆ ಎಂದು ಆಡಳಿತ ಮಂಡಳಿ ಹೇಳಿದೆ.

ದೇವಾಲಯದ ಮೇಲೆ ಖಲಿಸ್ತಾನಿ ಉಗ್ರರ ದಾಳಿಯ ನಂತರ ದೇಶದ ನಾನಾ ಕಡೆ ಇರುವ ಹಿಂದೂ ದೇವಾಲಯಗಳ ಮೇಲೆ ದಾಳಿ ನಡೆಯುವ ಅಪಾಯ ಹೆಚ್ಚಾಗಿದೆ ಎಂದು ಕಳವಳ ವ್ಯಕ್ತವಾಗಿದೆ.

ಸಂಸದ ಆಂಡ್ರ್ಯೂ ಚಾರ್ಲ್ಟನ್ ದೇವಾಲಯಕ್ಕೆ ಭೇಟಿ ನೀಡಿ ಪರಿಶೀಲಿಸಿ, ವಿರೂಪಗೊಂಡಿರುವ ದೇವಾಲಯದ ಗೋಡೆಗಳಿಗೆ ಬಣ್ಣ ಬಳಿಯುವಂತೆ ದೇವಾಲಯ ಆಡಳಿತ ಮಂಡಳಿಗೆ ಸೂಚಿಸಿದ್ದಾರೆ.

“ಈ ಘಟನೆ ಆಘಾತ ಉಂಟು ಮಾಡಿದೆ. ಇಂತಹ ಕೃತ್ಯಗಳನ್ನು ಎಲ್ಲರೂ ಖಂಡಿಸಬೇಕು. ಆಸ್ಟ್ರೇಲಿಯದಲ್ಲಿ ನೆಲೆಸಿರುವ ಎಲ್ಲ ಸಮುದಾಯ ಶಾಂತಿಯಿಂದ ತಮ್ಮ ಧಾರ್ಮಿಕ ಕಾರ್ಯ ನಡೆಸುವ ಹಕ್ಕು ಹೊಂದಿದ್ದಾರೆ” ಎಂದು ಆಂಡ್ರ್ಯೂ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ನನ್ನ ಮೇಲೆ ಅತ್ಯಾಚಾರವೆಸಗಿದ್ದ ಡೊನಾಲ್ಡ್ ಟ್ರಂಪ್; ಪತ್ರಕರ್ತೆ ಇ ಜೀನ್‌ ಕ್ಯಾರೊಲ್ ಗಂಭೀರ ಆರೋಪ

ಖಲಿಸ್ತಾನಿ ಉಗ್ರರು ಈ ವರ್ಷದ ಆರಂಭದಲ್ಲಿ ಮೆಲ್ಬರ್ನ್‌ನ ಮೂರು ಮತ್ತು ಬ್ರಿಸ್ಟೇನ್‌ನ ಎರಡು ಹಿಂದೂ ದೇಗುಲಗಳನ್ನು ವಿರೂಪಗೊಳಿಸಿದ್ದರು.

ಕಳೆದ ಮಾರ್ಚ್‌ನಲ್ಲಿ ಆಸ್ಟ್ರೇಲಿಯ ಪ್ರಧಾನಿ ಆ್ಯಂಟನಿ ಅಲ್ಬನೆಸ್ ಭಾರತಕ್ಕೆ ಭೇಟಿ ನೀಡಿದ ವೇಳೆ ಪ್ರಧಾನಿ ನರೇಂದ್ರ ಮೋದಿ ಈ ವಿಷಯದ ಕುರಿತು ಅವರೊಂದಿಗೆ ಚರ್ಚಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಝಾದಲ್ಲಿ ನರಮೇಧ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಮತ್ತು ಇಸ್ರೇಲ್ ರಾಯಭಾರಿ ನಡುವೆ ವಾಕ್ಸಮರ

ಗಾಝಾದಲ್ಲಿ 'ಅಲ್‌ಝಝೀರಾ' ಸಂಸ್ಥೆಯ ಪತ್ರಕರ್ತನನ್ನು ಇಸ್ರೇಲ್ ಹತ್ಯೆಗೈದಿದೆ. ಈ ಹತ್ಯೆಯನ್ನು ಕಾಂಗ್ರೆಸ್‌...

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

ಗಾಝಾದಲ್ಲಿ ಹತ್ಯೆಯಾದ ಯುವ ಪತ್ರಕರ್ತರೊಬ್ಬರ ಭಿನ್ನ ಉಯಿಲು !

ನಾನು ಸಾಯುವುದಾದರೆ, ನನ್ನ ಸಿದ್ಧಾಂತಗಳ ಮೇಲೆ ದೃಢವಾಗಿರುವೆ. ದೇವರ ಮುಂದೆ ನಾನು...

ಗಾಝಾದಲ್ಲಿ ಇಸ್ರೇಲ್ ದಾಳಿ: ಐವರು ಅಲ್‌ಜಝೀರಾ ಪತ್ರಕರ್ತರು ಹತ

ಭಾನುವಾರ ಗಾಝಾ ನಗರದಲ್ಲಿ ಅಲ್‌ಜಝೀರಾ ಟೆಂಟ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ...

Download Eedina App Android / iOS

X