ಮಹಾರಾಷ್ಟ್ರ ಚುನಾವಣೆ | ಟಿಕೆಟ್‌ ಆಕಾಂಕ್ಷಿಗಳಿಗೆ ಕಾಂಗ್ರೆಸ್‌ ಸಂದರ್ಶನ; ಪಾಸಾದವರಿಗೆ ‘ಬಿ ಫಾರ್ಮ್‌’

Date:

Advertisements

ಈ ವರ್ಷದ ಅಂತ್ಯದಲ್ಲಿ (ನವೆಂಬರ್/ಡಿಸೆಂಬರ್) ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ನಡೆಯಲಿದೆ. ಚುನಾವಣೆಗೆ ಬಿಜೆಪಿ, ಕಾಂಗ್ರೆಸ್‌ ಹಾಗೂ ಶಿವಸೇನೆ-ಎನ್‌ಸಿಪಿ ಎರಡೆರಡು ಬಣಗಳು ಸಿದ್ದತೆ ನಡೆಸುತ್ತಿವೆ. ಮಹಾರಾಷ್ಟ್ರದಲ್ಲಿ ತನ್ನ ನೆಲೆಯನ್ನು ಮರಳಿ ಗಟ್ಟಿ ಮಾಡಿಕೊಳ್ಳಲು ಕಾಂಗ್ರೆಸ್‌ ಮುಂದಾಗಿದೆ. ಉತ್ತಮ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಮೂಲಕ, ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕೆಂಬ ಗುರಿ ಮುಂದಿಟ್ಟುಕೊಂಡಿದೆ.

ಮಹಾರಾಷ್ಟ್ರದಲ್ಲಿ ಎನ್‌ಸಿಪಿ (ಶರದ್ ಪವಾರ್ ಬಣ) ಮತ್ತು ಶಿವಸೇನೆ (ಉದ್ದವ್ ಬಣ)ದೊಂದಿಗೆ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್‌, ವಿಧಾನಸಭಾ ಚುನಾವಣೆಗೆ ಇನ್ನೂ ಸೀಟು ಹಂಚಿಕೆಯ ಮಾತುಕತೆ ಆರಂಭಿಸಿಲ್ಲ. ಅದಾಗ್ಯೂ, ಮಹಾರಾಷ್ಟ್ರದ 288 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಟಿಕೆಟ್‌ ಪಡೆಯುವ ಆಕಾಂಕ್ಷಿಗಳನ್ನು ಗುರುತಿಸಲು ಕಾಂಗ್ರೆಸ್‌ ಮುಂದಾಗಿದೆ. ಅವರೆಲ್ಲರನ್ನೂ ಸಂದರ್ಶನ ಮಾಡಿ, ವರದಿ ಪಡೆದು, ಅರ್ಹರನ್ನು ಆಯ್ಕೆ ಮಾಡಲಿದೆ. ಮೈತ್ರಿ ಪಕ್ಷಗಳೊಂದಿಗೆ ಸೀಟು ಹಂಚಿಕೆಯ ಮಾತುಕತೆ ಮುಗಿದ ಬಳಿಕ, ಯಾರಿಗೆ ಟಿಕೆಟ್ ನೀಡಬೇಕೆಂದು ನಿರ್ಧರಿಸಲಿದೆ ಎಂದು ತಿಳಿದುಬಂದಿದೆ.

ಆ ರಾಜ್ಯದ 288 ಸ್ಥಾನಗಳಿಗೆ ಬರೋಬ್ಬರಿ 1,688 ಟಿಕಟ್ ಆಕಾಂಕ್ಷಿಗಳು ಕಾಂಗ್ರೆಸ್‌ನಲ್ಲಿದ್ದಾರೆ ಎಂದು ಗುರುತಿಸಲಾಗಿದೆ. ಹೀಗಾಗಿ, ಎಲ್ಲರನ್ನೂ ಒಳಗೊಳ್ಳಲು, ಯಾರೂ ಬಂಡಾಯ ಏಳದಂತೆ ನೋಡಿಕೊಳ್ಳಲು ಕಾಂಗ್ರೆಸ್‌ ಸಂದರ್ಶನದ ತಂತ್ರ ಪ್ರಯೋಗಿಸಿದೆ. ರಾಜ್ಯ ನಾಯಕರು ಮತ್ತು ಉಸ್ತುವಾರಿಗಳು ಆಕಾಂಕ್ಷಿಗಳನ್ನು ಸಂದರ್ಶಿಸಿ, ವರದಿಯನ್ನು ಹೈಕಮಾಂಡ್‌ಗೆ ಕಳಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Advertisements

ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ ಟಿಕೆಟ್ ಆಕಾಂಕ್ಷಿಗಳ ಸಂದರ್ಶನವು ಅಕ್ಟೋಬರ್ 1ರಿಂದ 8ರವರೆಗೆ ನಡೆಯಲಿದ್ದು, ಅಕ್ಟೋಬರ್ 10ರಂದು ವರದಿ ಸಲ್ಲಿಸುವ ಸಾಧ್ಯತೆ ಇದೆ. ಸಂದರ್ಶನದಲ್ಲಿ ಆಕಾಂಕ್ಷಿಗಳು ತಮ್ಮ ಇಚ್ಛೆ, ಉದ್ದೇಶ, ನಿಲುವುಗಳನ್ನು ವ್ಯಕ್ತಪಡಿಸಲಿದ್ದಾರೆ. ಅದರ ಆಧಾರದ ಮೇಲೆ ಮುಂದಿನ ಚುನಾವಣೆಗೆ ಟಿಕೆಟ್ ಯಾರಿಗೆ ಎಂಬುದು ನಿರ್ಧಾರವಾಗಲಿದೆ ಎಂದು ವರದಿಯಾಗಿದೆ.

ಈ ವರದಿ ಓದಿದ್ದೀರಾ?: ತಿರುಪತಿ ಲಡ್ಡು ವಿವಾದ | ಪ್ರಾಣಿ ಕೊಬ್ಬು ಬಳಕೆ ಬಗ್ಗೆ ಸಾರ್ವಜನಿಕ ಹೇಳಿಕೆ; ಆಂಧ್ರ ಸಿಎಂಗೆ ಸುಪ್ರೀಂ ಚಾಟಿ

ಆಕಾಂಕ್ಷಿಗಳ ಸಂದರ್ಶನಕ್ಕಾಗಿ 6 ತಂಡಗಳನ್ನು ಕಾಂಗ್ರೆಸ್‌ ರಚಿಸಿದೆ. ಪೃಥ್ವಿರಾಜ್ ಚೌಹಾಣ್, ನಸೀಮ್ ಖಾನ್, ಸಂಸದ ಚಂದ್ರಕಾಂತ್ ಹಂದೋರೆ, ಪ್ರಣಿತಿ ಶಿಂಧೆ, ಸತೇಜ್ ಪಾಟೀಲ್, ಅಮಿತ್ ದೇಶಮುಖ್, ನಿತಿನ್ ರಾವುತ್ ಮತ್ತು ಯಶೋಮತಿ ಠಾಕೂರ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ತಂಡಗಳ ಭಾಗವಾಗಿದ್ದಾರೆ.

ಇತ್ತೀಚೆಗೆ, ಚುನಾವಣೆಯಲ್ಲಿ ಸ್ಪರ್ಧಿಸಲು ಇಚ್ಛೆಯುಳ್ಳ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಿತ್ತು. ಅದರಂತೆ 1,688 ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ವರದಿಯಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

Download Eedina App Android / iOS

X