ರಾಯಚೂರು | ಕೆರೆಗಳಿಗೆ ರಾಸಾಯನಿಕ ಮಿಶ್ರಣ ಶಂಕೆ; ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ

Date:

Advertisements

ರಾಯಚೂರು ತಾಲೂಕಿನ ಮಲಿಯಾಬಾದ್ ಗ್ರಾಮದ ಮಲ್ಲಾರ ಕೆರೆ ಮತ್ತು ಸಮುದ್ರದ ಕೆರೆಗಳಿಗೆ ವಿಷಪೂರಿತ ರಾಸಾಯಿನಿಕ ಮಿಶ್ರಣ ಮಾಡಿದ್ದು, ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ ಕಠಿಣ ಕ್ರಮಕ್ಕೆ ಮುಂದಾಗಬೇಕು ಹಾಗೂ ಕೆರೆಯನ್ನು ಸ್ವಚ್ಛಗೊಳಿಸಬೇಕು ಎಂದು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಬಶೀರುದ್ದೀನ್ ಅವರು ಜಿಲ್ಲಾಧಿಕಾರಿ ನಿತೀಶ್ ಕೆ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಮಲಿಯಾಬಾದ್ ಗ್ರಾಮದ ಮಲ್ಲಾರ ಕೆರೆ ಮತ್ತು ಸಮುದ್ರ ಎಂಬ ಎರಡು ಕೆರೆಗಳು ರೈತರ ಜೀವನ ಹಾಗೂ ದನಕರುಗಳಿಗೆ ಕುಡಿಯಲು ಆಧಾರವಾಗಿವೆ. ಯಾರೋ ದುಷ್ಕರ್ಮಿಗಳು ವಿಷ ಪೂರಿತ ರಾಸಾಯಿನಿಕ ಕೆರೆಗೆ ಹಾಕಿರುವುದರಿಂದ ನೀರು ಅಶುದ್ದವಾಗಿದೆ ಹಾಗೂ ನೀರಿನ ಬಣ್ಣ ಸಂಪೂರ್ಣ ಹಸಿರಾಗಿದ್ದು, ಇದರಿಂದಾಗಿ ಮಲಿಯಾಬಾದ್ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ರೈತರು ಭಯಭೀತರಾಗಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.

ಕೆರೆಯ ನೀರು ಹಸಿರು ಬಣ್ಣಕ್ಕೆ ತಿರುಗಿರುವುದನ್ನು ನೋಡಿ ದನಕರುಗಳು ಕುಡಿದರೆ ಸಾವು ಸಂಭವಿಸುವ ಸಾಧ್ಯತೆ ಇದೆ ಎಂದು ಗ್ರಾಮಸ್ಥರು ಶಂಕೆ ವ್ಯಕ್ತಪಡಿಸುತ್ತಿದ್ದಾರೆ. ಇದನ್ನು ಸ್ವಚ್ಛಗೊಳಿಸಿ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿದ್ದಾರೆ.

Advertisements

ಕೂಡಲೇ ಜಿಲ್ಲಾಧಿಕಾರಿಗಳು, ಸಣ್ಣ ನೀರಾವರಿ ಇಲಾಖೆ , ಪರಿಸರ ಮಾಲಿನ್ಯ ನಿಯಂತ್ರಣಾಧಿಕಾರಿಗಳು , ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಗಮನಹರಿಸಿ ಸ್ಥಳಕ್ಕೆ ಭೇಟಿ ನೀಡಬೇಕು. ನೀರಿನ ತಪಾಸಣೆ ಮಾಡಿ ದನಕರುಗಳಿಗೆ ಕುಡಿಯಲು ವ್ಯವಸ್ಥೆ ಮಾಡಬೇಕು ಎಂದು ಹೇಳಿದರು.

ಇದನ್ನು ಓದಿದ್ದೀರಾ? ತಮಿಳುನಾಡು | ಸದ್ಗುರು ಜಗ್ಗಿಯ ಇಶಾ ಫೌಂಡೇಶನ್‌ಗೆ 150 ಪೊಲೀಸರ ದಾಳಿ – ಪರಿಶೀಲನೆ

ಈ ಬಾರಿ ಮಳೆಗಾಲ ಹೆಚ್ಚಿನ ಪ್ರಮಾಣದಲ್ಲಿ ಆಗಿದ್ದರಿಂದ ಎರಡು ಕೆರೆಗಳು ತುಂಬಿ ತುಳುಕುತ್ತಿದೆ. ಆದರೆ ದುಷ್ಕರ್ಮಿಗಳು ನೀರಿಗೆ ವಿಷಪೂರಿತ ಕೆಮಿಕಲ್ ಸುರಿದಿರುಂತೆ ಕಂಡು ಬರುತ್ತಿದೆ. ಕೂಡಲೇ ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ಮನವಿಯಲ್ಲಿ ಒತ್ತಾಯಿಸಿದ್ದಾರೆ. ಅಲ್ಲದೇ, ಕೆರೆಯ ನೀರಿನ ಮಾದರಿ(ಸ್ಯಾಂಪಲ್‌) ಅನ್ನು ಕೂಡ ಜಿಲ್ಲಾಧಿಕಾರಿಗಳಿಗೆ ಇದೇ ವೇಳೆ ನೀಡಲಾಯಿತು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

Download Eedina App Android / iOS

X