ಸಿಎಂ ಸಿದ್ದರಾಮಯ್ಯ ಅವರ ತೇಜೋವಧೆ ಖಂಡಿಸಿ,ಹುಬ್ಬಳಿಯಿಂದ ಬೆಂಗಳೂರಿಗೆ ಹೊರಟಿರುವ ಜಾಥಾ ಅಕ್ಟೋಬರ್ 4ರ ಗುರುವಾರ ತುಮಕೂರು ತಲುಪಲಿದ್ದು, ಅಕ್ಟೋಬರ್ 05ರ ಶುಕ್ರವಾರ ಬೆಂಗಳೂರಿನ ಫ್ರೀಡಂ ಪಾರ್ಕಿಗೆ ತೆರಳಿ, ಫ್ರೀಡಂ ಪಾರ್ಕಿನಿಂದ ವಿಧಾನಸೌಧದ ವರೆಗೆ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಕರ್ನಾಟಕ ಕುರುಬರ ಯುವ ವೇದಿಕೆ ಅಧ್ಯಕ್ಷ ಮಹಾಲಿಂಗಯ್ಯ ತಿಳಿಸಿದರು.
ತುಮಕೂರು ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಅಹಿಂದ ಸಂಘಟನೆಯ ಮುಖಂಡರಾದ ಮುತ್ತಣ್ಣ ಎಸ್.ಶಿವಳ್ಳಿ ಅವರ ನೇತೃತ್ವದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಅಹಿಂದ ಕಾರ್ಯಕರ್ತರು,ಮುಖಂಡರು ಅಕ್ಟೋಬರ್ 4ರ ಗುರುವಾರ ಬೆಳಗ್ಗೆ ಸಂವಿಧಾನ ಪೀಠಿಕೆ ಜ್ಞಾಪಕ ಜನ ಜಾತಾಯಾತ್ರೆ ಹೊರಡಲಿದ್ದು, ಗುರುವಾರ ಸಂಜೆ ತುಮಕೂರು ತಲುಪಿ ವಾಸ್ತವ್ಯ ಹೂಡಲಿದೆ.ಅಕ್ಟೋಬರ್ 05ರ ಶುಕ್ರವಾರ ತುಮಕೂರಿನಿಂದ ಹೊರಟು ಫ್ರೀಡಂ ಪಾರ್ಕಿಗೆ ತಲುಪಿ,ಅಲ್ಲಿಂದ ವಿಧಾನಸೌಧದವರೆಗೆ ಪಾದಯಾತ್ರೆ ನಡೆಯಲಿದೆ.ಇದು ಸಿದ್ದರಾಮಯ್ಯ ಅವರಿಗೆ ನೈತಿಕ ಬೆಂಬಲ ತುಂಬುವ ನಿಟ್ಟಿನಲ್ಲಿ ಅಹಿಂದ ವರ್ಗಗಳು ಸೇರಿದಂತೆ ಎಲ್ಲಾ ಶೋಷಿತ ಸಮುದಾಯಗಳು ಒಗ್ಗೂಡಿ ನಡೆಸುತ್ತಿರುವ ಜಾಥಾವಾಗಿದೆ ಎಂದರು.
ತಮ್ಮ 45 ವರ್ಷಗಳ ರಾಜಕೀಯ ಜೀವನದಲ್ಲಿ ಒಂದು ಕಪ್ಪುಚುಕ್ಕೆ ಇಲ್ಲದ ಸಿದ್ದರಾಮಯ್ಯ ವಿರುದ್ದ ಮುಡಾ ಮತ್ತು ಸಿದ್ದರಾಮಯ್ಯ ಅವರ ಪತ್ನಿ ಪಾವರ್ತಮ್ಮ ಅವರ ವಯುಕ್ತಿಕ ಭೂಮಿ ವಿವಾದವನ್ನು ಎಳೆದುತಂದು, ಅನಗತ್ಯ ಕಿರುಕುಳ ನೀಡುವ ಕೆಲಸವನ್ನು ವಿರೋಧಪಕ್ಷಗಳು ಕೇಂದ್ರ ಸರಕಾರದ ಬೆಂಬಲದೊಂದಿಗೆ ಮಾಡುತ್ತಿವೆ.ಹಾಗಾಗಿ ಸಿದ್ದರಾಮಯ್ಯ ಅವರ ಬೆಂಬಲಕ್ಕೆ ನಾವಿದ್ದೇವೆ ಎಂಬುದನ್ನು ಸಾರುವ ಉದ್ದೇಶದಿಂದ ಈ ಬೃಹತ್ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಸಿದ್ದರಾಮಯ್ಯ ಹಿತೈಷಿಗಳು,ಅಭಿಮಾನಿಗಳು ಅಹಿಂದ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಸಿದ್ದರಾಮಯ್ಯ ಅವರಿಗೆ ನೈತಿಕ ಸ್ಥೆöÊರ್ಯ ತುಂಬುವ ಕೆಲಸ ಮಾಡಬೇಕೆಂದು ಕೆ.ಮಹಾಲಿಂಗಯ್ಯ ಮನವಿ ಮಾಡಿದರು.
ಅಹಿಂದ ಮಹಿಳಾ ಘಟಕದ ಅಧ್ಯಕ್ಷೆ ಸುಕನ್ಯ ಮಾತನಾಡಿ,ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಜೀವಿತ ಅವಧಿಯಲ್ಲಿ ಎಂದಿಗೂ ಕಿಚನ್ ಕ್ಯಾಬಿನೆಟ್ಗೆ ಅವಕಾಶ ನೀಡಿದವರಲ್ಲ. ಇಂತಹ ವ್ಯಕ್ತಿಯ ವಿರುದ್ದ ಅರಿಸಿನ ಕುಂಕುಮಕ್ಕೆಂದು ಪತ್ನಿಗೆ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ ನೀಡಿದ್ದ ಭೂಮಿಯನ್ನು ವಿವಾದ ಮಾಡಿ, ಅವರ ನೈತಿಕ ಸ್ಥೖರ್ಯ ಕುಗ್ಗಿಸುವ ಕೆಲಸವನ್ನು ಬಿಜೆಪಿ-ಜೆಡಿಎಸ್ ಮಾಡುತ್ತಿದೆ.ಇದನ್ನು ಖಂಡಿಸಿ,ಸಿದ್ದರಾಮಯ್ಯ ಅವರ ಬೆನ್ನಿಗೆ ಅಹಿಂದ ಇದೆ ಎಂಬುದು ತೋರ್ಪಡಿಸುವ ಉದ್ದೇಶದಿಂದ ಈ ಜಾಥಾ ಹಮ್ಮಿಕೊಳ್ಳಲಾಗಿದೆ.ಗ್ಯಾರೆಂಟಿ ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಹೋರಾಟದಲ್ಲಿ ಹೆಚ್ಚಿನ ರೀತಿಯಲ್ಲಿ ಪಾಲ್ಗೊಳ್ಳಬೇಕಿದೆ.ಬೆಂಗಳೂರಿನಲ್ಲಿ ನಡೆಯುವ ಪಾದಯಾತ್ರೆಗೆ ತುಮಕೂರಿನಿಂದ ಅಹಿಂದ ಕಾರ್ಯಕರ್ತರು, ಮುಖಂಡರು ಹೊರಡಲು ಸರಕಾರಿ ಜೂನಿಯರ್ ಕಾಲೇಜು ಮೈದಾನದಿಂದ ಬಸ್ ವ್ಯವಸ್ಥೆ ಮಾಡಲಾಗಿದೆ.ಅಹಿಂದ ವರ್ಗದವರು, ಸಿದ್ದರಾಮಯ್ಯ ಹಿತೈಷಿಗಳು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಪಾದಯಾತ್ರೆ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಆದಿಲ್,ಅಹಿಂದ ರಾಷ್ಟ್ರೀಯ ಸಂಘಟನೆಯ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಸುನಿತಾ ನಟರಾಜ್, ನಿರ್ದೇಶಕರಾದ ಪ್ರೇಮ,ಲಕ್ಷಿö್ಮನಾರಾಯಣ ರಾಗಿ ಮಲ್ಲೇನಹಳ್ಳಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.