ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ದೂರು

Date:

Advertisements
  • ಭಯೋತ್ಪಾದಕರ ಪರ ಕಾಂಗ್ರೆಸ್ ಎಂದಿದ್ದ ಪ್ರಧಾನಿ ಮೋದಿ
  • ಬಳ್ಳಾರಿಯಲ್ಲಿ ಕಾಂಗ್ರೆಸ್ ವಿರುದ್ಧ ಮೋದಿ ಗಂಭೀರ ಆರೋಪ

ಕಾಂಗ್ರೆಸ್ ಭಯೋತ್ಪಾದನೆಯನ್ನು ಪೋಷಿಸಿದೆ ಎಂದು ಹೇಳಿಕೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ದೂರು ದಾಖಲಿಸಿದೆ.

ಬಳ್ಳಾರಿಯಲ್ಲಿ ಮಾತನಾಡಿದ್ದ ಪ್ರಧಾನಿ ಮೋದಿ, “ಕಾಂಗ್ರೆಸ್ ಭಯೋತ್ಪಾದಕರ ವಿರುದ್ಧ ಮಾತನಾಡುವುದಿಲ್ಲ. ಭಯೋತ್ಪಾದಕರ ಕುರಿತು ಮೃದು ದೋರಣೆ ಹೊಂದಿದೆ” ಎಂದು ಹೇಳಿದ್ದಾರೆ.

ಈ ಕುರಿತಾಗಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ನಾಯಕರು ದೂರು ದಾಖಲಿಸಿದ್ದಾರೆ. “ಮೋದಿ ಮತದಾರರನ್ನು ತಪ್ಪು ದಾರಿಗೆ ಎಳೆಯುವ ಉದ್ದೇಶದಿಂದ ಇಂತಹ ಹೇಳಿಕೆ ನೀಡಿದ್ದಾರೆ. ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಪಕ್ಷವನ್ನು ಮೋದಿ ಭಯೋತ್ಪಾದಕರಿಗೆ ಬೆಂಬಲಿಸಿದೆ ಎಂದು ಆರೋಪಿಸಿದ್ದಾರೆ” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Advertisements

“140 ವರ್ಷಗಳಷ್ಟು ಹಳೆಯದಾದ ಮತ್ತು ಸಾರ್ವಜನಿಕರ ಸೇವೆ ಮಾಡಿಕೊಂಡ ಪಕ್ಷಕ್ಕೆ ಮೋದಿ ಕಳಂಕ ತರಲು ಯತ್ನಿಸಿದ್ದಾರೆ. ತಮ್ಮ ರಾಜಕೀಯ ಲಾಭಕ್ಕಾಗಿ ಮೋದಿ ಸೂಕ್ಷ್ಮತೆ ಇಲ್ಲದೆ ಮಾತನಾಡಿದ್ದಾರೆ” ಎಂದು ದೂರಲಾಗಿದೆ.

“ಮೋದಿ ಅವರು ತಮ್ಮ ಭಾಷಣದ ಮೂಲಕ 1951ರ ಜನತಾ ಪ್ರಾತಿನಿಧ್ಯ ಕಾಯಿದೆ, 1951ರ ಸೆಕ್ಷನ್ 123 (2), 123 (3A), 123 (4) ಮತ್ತು ಭಾರತೀಯ ದಂಡ ಸಂಹಿತೆ, 1860ರ ಸೆಕ್ಷನ್ 153ಎ, 153ಬಿ, 171ಸಿ, 171ಜಿ, 499, 500, 504, 505 (2) ಉಲ್ಲಂಘಿಸಿದ್ದಾರೆ” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರಿಗೆ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿದ ಜೆಡಿಎಸ್

ಮೋದಿ ಭಾಷಣ

ಬಳ್ಳಾರಿಯ ಬೃಹತ್ ಸಮಾವೇಶದಲ್ಲಿ ಮಾತನಾಡಿರುವ ಪ್ರಧಾನಿ ಮೋದಿ, “ಕಾಂಗ್ರೆಸ್ ತನ್ನ ವೋಟ್ ಬ್ಯಾಂಕ್‌ಗಾಗಿ ಭಯೋತ್ಪಾದನೆಯನ್ನು ರಕ್ಷಿಸಿದೆ” ಎಂದು ಆರೋಪಿಸಿದ್ದಾರೆ.

“ಭಯೋತ್ಪಾದಕರ ಬೆಂಬಲಕ್ಕೆ ಕಾಂಗ್ರೆಸ್ ನಿಂತಿರುವ ಪ್ರವೃತ್ತಿ ದೇಶದ ದುರಂತ. ಕಾಂಗ್ರೆಸ್ ತನ್ನ ಲಾಭಕ್ಕಾಗಿ ಹಿಂಬಾಗಿಲಿನಿಂದ ಭಯೋತ್ಪಾದನೆಗೆ ಸಹಕಾರ ನೀಡಿದೆ” ಎಂದು ಗಂಭೀರ ಆರೋಪ ಮಾಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X