ಕನ್ನಡ-ತಮಿಳು ಸೌಹಾರ್ದತೆಗೆ ಧಕ್ಕೆ ತರುವ ಕಾಂಗ್ರೆಸ್ ಅಭ್ಯರ್ಥಿ ಪ್ರಚಾರ ಅಸಹ್ಯ: ಮೋಹನ್ ದಾಸರಿ

Date:

Advertisements
  • ಭಾಷೆ ಹೆಸರು ಹೇಳಿ ಮತ ಕೇಳುತ್ತಿರುವುದು ಅಸಾಂವಿಧಾನಿಕ
  • ಸಿ ವಿ ರಾಮನ್ ನಗರ ಸರ್ವಧರ್ಮೀಯರ ಶಾಂತಿಯ ಪ್ರದೇಶ

“ಸಿ.ವಿ ರಾಮನ್ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದ್ ಕುಮಾರ್ ತಮಿಳು ಭಾಷೆಗರು ಹೆಚ್ಚಿನ ಸಂಖ್ಯೆಯಲ್ಲಿರುವ ಪ್ರದೇಶಗಳಲ್ಲಿ ‘ನಾನು ತಮಿಳಿಗ, ನನಗೆ ವೋಟ ನೀಡಿ, ತಮಿಳಿಗರು ಯಾರು ವಿಧಾನಸಭೆಯನ್ನು ಪ್ರವೇಶಿಸಿಲ್ಲ, ನನ್ನನ್ನು ಗೆಲ್ಲಿಸಿ’ ಎಂದು ಮತ ಕೇಳುತ್ತಿರುವುದು ಅಸಾಂವಿಧಾನಿಕ ಹಾಗೂ ಭಾಷಾ ಭಾತೃತ್ವಕ್ಕೆ ಧಕ್ಕೆ ಉಂಟು ಮಾಡುತ್ತದೆ ಎಂದು ಕ್ಷೇತ್ರದ ಆಮ್‌ ಆದ್ಮಿ ಪಕ್ಷದ (ಎಎಪಿ) ಅಭ್ಯರ್ಥಿ ಮೋಹನ್ ದಾಸರಿ ಆರೋಪಿಸಿದರು.

ಎಎಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮೋಹನ್ ದಾಸರಿ, “ಆನಂದ್ ಕುಮಾರ್ ಅವರಿಗೆ ತಾಕತ್ತಿದ್ದರೆ ತಾವು ಇದುವರೆಗೂ ಮರ್ಫಿ ಟೌನ್ ವಾರ್ಡ್‌ನಲ್ಲಿ ಮಾಡಿರುವಂತಹ ಸ್ಕೂಲ್, ಆಸ್ಪತ್ರೆಗಳು, ರಸ್ತೆಗಳು, ಒಳಚರಂಡಿಗಳ ಬಗ್ಗೆ ಮಾತನಾಡಬೇಕು. ಅದನ್ನು ಬಿಟ್ಟು ಈ ರೀತಿಯ ಭಾಷಾ ರಾಜಕಾರಣಕ್ಕೆ ಇಳಿದಿರುವುದು ಅವರು ಖಂಡಿತ ಸೋಲುತ್ತಾರೆಂಬ ಭೀತಿಯ ಹೊರತು ಮತ್ತೇನಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು ಹಾಗೂ ಮೈಸೂರಿನ ಹಲವೆಡೆ ಐಟಿ ದಾಳಿ: ₹15 ಕೋಟಿ ವಶ

Advertisements

“ಸಿ.ವಿ ರಾಮನ್ ನಗರ ಕ್ಷೇತ್ರ ಸರ್ವ ಭಾಷೆಗರ ಸರ್ವಧರ್ಮೀಯರ ಶಾಂತಿಯ ಪ್ರದೇಶ. ಕಾವೇರಿ ಗಲಾಟೆಯನ್ನು ಸೇರಿಸಿದಂತೆ ಯಾವುದೇ ರೀತಿಯ ತಮಿಳು ಮತ್ತು ಕನ್ನಡಿಗರ ಭಾತೃತ್ವಕ್ಕೆ ಧಕ್ಕೆಯಾಗದಂತೆ ಯಾವುದೇ ರೀತಿಯ ಸಣ್ಣ ಗಲಭೆಗಳು ಸಹ ಈ ಕ್ಷೇತ್ರದಲ್ಲಿ ಆಗಿಲ್ಲ. ಆನಂದ್ ಕುಮಾರ್ ಅವರ ತಮಿಳು ಭಾಷಾ ಪ್ರಚಾರದ ವೈಖರಿ ನಿಜಕ್ಕೂ ಅಸಹ್ಯ ತರಿಸುವಂತಿದೆ” ಎಂದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

Download Eedina App Android / iOS

X