ಸಿದ್ದರಾಮಯ್ಯರಿಗೂ ತಗುಲಿದ ಮೋದಿ ರೋಡ್ ಶೋ ಬಿಸಿ

Date:

Advertisements
  • ಸರಣಿ ಟ್ವೀಟ್ ಮಾಡಿ ಬಿಜೆಪಿ ನಾಯಕರ ವಿರುದ್ಧ ಸಿದ್ದರಾಮಯ್ಯ ಕಿಡಿ
  • ರೋಡ್‌ ಶೋನಿಂದ ಜನಸಾಮಾನ್ಯರ ಜೊತೆಗೆ ಸಿದ್ದರಾಮಯ್ಯಗೂ ತೊಂದರೆ

ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರಿನ ರೋಡ್ ಶೋ ಬಿಸಿ ಜನಸಾಮಾನ್ಯರಿಗೆ ಅಷ್ಟೇ ಅಲ್ಲ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೂ ತಗುಲಿದೆ.

ರಾಜ್ಯ ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೋದಿ ಅವರು ಬೆಂಗಳೂರಿನಲ್ಲಿ ರೋಡ್ ಶೋ ನಡೆಸಿದ್ದಾರೆ. ಭಾನುವಾರವೂ ಸಹ ಮೋದಿ ರೋಡ್ ಶೋ ನಡೆಯಲಿದ್ದು, ಸಿದ್ದರಾಮಯ್ಯ ಅವರು ಸರಣಿ ಟ್ವೀಟ್ ಮಾಡಿ ಕಿಡಿಕಾರಿದ್ದಾರೆ.

“ಪ್ರಧಾನಿ ಮೋದಿ ಅವರ ರೋಡ್‌ ಶೋ ಕಾರಣಕ್ಕೆ ನನ್ನ ಸಂಚಾರಕ್ಕೂ ಪೊಲೀಸರು ನಿರ್ಬಂಧ ಹಾಕಿದ್ದರು. ಮೋದಿ ಅವರು ಹೊಸಪೇಟೆಗೆ ಹೋಗುತ್ತಿದ್ದರು, ನಾನು ಗಂಗಾವತಿಗೆ ಹೊರಟಿದ್ದೆ, ಮೋದಿ ಅವರು ಹೋಗುತ್ತಿರುವ ಕಾರಣಕ್ಕೆ ನನಗೆ ಗಂಗಾವತಿ ಹೋಗಲು ಅನುಮತಿಯನ್ನೇ ನೀಡಿಲ್ಲ. ವಿಧವಿಧವಾಗಿ ನಾನು ಮನವಿ ಮಾಡಿದೆ, ಆದರೂ ಅನುಮತಿ ಕೊಡಲಿಲ್ಲ” ಎಂದು ತಿಳಿಸಿದ್ದಾರೆ.

Advertisements

“ಒಬ್ಬ ವಿರೋಧ ಪಕ್ಷದ ನಾಯಕನಿಗೆ ಹೀಗಾದರೆ, ಸಾಮಾನ್ಯ ಜನರ ಗತಿಯೇನು” ಎಂದು ಬಿಜೆಪಿಯನ್ನು ಪ್ರಶ್ನಿಸಿದ್ದಾರೆ.

“ನೀಟ್ ಪರೀಕ್ಷಾರ್ಥಿಗಳು ಮತ್ತು ಬೆಂಗಳೂರಿನ ಜನರ ವಿರೋಧವನ್ನು ಧಿಕ್ಕರಿಸಿ ಪ್ರಧಾನಿ ಮೋದಿ ಅವರು ನಾಳೆ ಬೆಂಗಳೂರಿನಲ್ಲಿ ನಡೆಸಲಿರುವ ರೋಡ್ ಶೋ ಅತ್ಯಂತ ಬೇಜವಾಬ್ದಾರಿತನದ ನಡೆ. ಮೋದಿ ಅವರು ಪ್ರಚಾರ ಮಾಡಲಿ ನಮ್ಮ ತಕರಾರು ಇಲ್ಲ. ಆದರೆ ವಿದ್ಯಾರ್ಥಿಗಳಿಗೆ ಆಗುವ ತೊಂದರೆಗೆ ಯಾರು ಹೊಣೆ?” ಎಂದು ಸಿದ್ದರಾಮಯ್ಯ ಕೇಳಿದ್ದಾರೆ.

“ಮೋದಿ ಅವರ ರೋಡ್ ಶೋವನ್ನು ಒಂದು ದಿನ ಮುಂದಕ್ಕೆ ಹಾಕಬಹುದು. ಆದರೆ ವಿದ್ಯಾರ್ಥಿಗಳು ಪರೀಕ್ಷೆ ನಾಳೆ ಬರೆಯುತ್ತೇನೆ ಎಂದರೆ ಆಗುತ್ತಾ? ವಿನಾಶಕಾಲೇ ವಿಪರೀತ ಬುದ್ಧಿ ಎನ್ನುವ ಹಾಗಿದೆ ಬಿಜೆಪಿಯ ಹಠಮಾರಿತನ” ಎಂದು ಕಿಡಿಕಾರಿದ್ದಾರೆ.

“ರೋಡ್ ಶೋದಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುವುದಿದ್ದರೆ ಅವರು ಮುಂಚಿತವಾಗಿ ಹೋಗಿ ಉಳಿದುಕೊಳ್ಳಲಿ ಎಂಬ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ ಅತ್ಯಂತ ಹೊಣೆಗೇಡಿತನ ಮತ್ತು ದುರಹಂಕಾರದ್ದು. ಬಡ ವಿದ್ಯಾರ್ಥಿಗಳಿಗೆ ಇದು ಆಗುತ್ತಾ” ಎಂದು ಪ್ರಶ್ನಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ದೂರು

“ವಿದ್ಯಾರ್ಥಿಗಳು ಅನುಭವಿಸಬೇಕಾಗಿರುವ ಕಷ್ಟಗಳನ್ನು ಪ್ರಧಾನಿ ಮೋದಿ ಅವರ ಗಮನಕ್ಕೆ ತಂದು ರೋಡ್ ಶೋ ರದ್ದು ಮಾಡಬೇಕಾಗಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ರೋಡ್ ಶೋವನ್ನು ಸಮರ್ಥಿಸುತ್ತಿರುವುದು ಬಿಜೆಪಿ ಸಚಿವರ ಗುಲಾಮಗಿರಿ ಮನಸ್ಥಿತಿಗೆ ಒಂದು ಉದಾಹರಣೆ” ಎಂದು ಟ್ವೀಟ್ ಮಾಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X