ಬಸವಕಲ್ಯಾಣ | ವಿದ್ಯಾರ್ಥಿಗಳು ಶಿಸ್ತು, ತಾಳ್ಮೆ ಮೈಗೂಡಿಸಿಕೊಳ್ಳಿ

Date:

Advertisements

ವಿದ್ಯಾರ್ಥಿಗಳು ಎಂದಿಗೂ ಶಿಸ್ತು, ತಾಳ್ಮೆ ಹಾಗೂ ವಿನಯ ಕಳೆದುಕೊಳ್ಳಬಾರದು, ಕಾಲೇಜಿನಲ್ಲಿ ಹೆಚ್ಚಿನ ಓದಿನ ಕಡೆಗೆ ಗಮನಹರಿಸಿ ಜೀವನದಲ್ಲಿ ಯಶಸ್ಸು ಸಾಧಿಸಬೇಕೆಂದು ಬಸವಕಲ್ಯಾಣ ಇಂಜಿನಿಯರಿಂಗ್‌ ಕಾಲೇಜಿನ ಅಧ್ಯಕ್ಷ ದೀಲಿಪಕುಮಾರ ಎಸ್. ತಾಳಂಪಳ್ಳಿ ಹೇಳಿದರು.

ಬಸವಕಲ್ಯಾಣ ಇಂಜಿನಿಯರಿಂಗ್ ಕಾಲೇಜಿನಲ್ಲಿ, 2024-25ನೇ ಶೈಕ್ಷಣಿಕ ವರ್ಷದ ಬಿ.ಇ. ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಕಾಲೇಜಿನಿಂದ ಹಮ್ಮಿಕೊಂಡಿದ್ದ ಸ್ವಾಗತ ಸಮಾರಂಭ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ʼವಿದ್ಯಾರ್ಥಿಗಳು ಪ್ರತಿನಿತ್ಯ ತಪ್ಪದೇ ತರಗತಿಗಳಿಗೆ ಹಾಜರಾಗಬೇಕು. ಬೋಧಕರೊಂದಿಗೆ ವಿನಯದಿಂದ ವರ್ತಿಸಿ ಅರ್ಥವಾಗದ ವಿಷಯಗಳನ್ನು ತಿಳಿದುಕೊಳ್ಳಬೇಕು. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಹಾಗೂ ಎಲ್ಲ ರೀತಿಯ ಪುಸ್ತಕಗಳನ್ನು ಅಧ್ಯಯನ ನಡೆಸಿ ಪ್ರಜ್ಞಾವಂತ ನಾಗರಿಕರಾಗಿ ಬೆಳೆದು ನಮ್ಮ ಸಂಸ್ಥೆಗೆ ಕೀರ್ತಿ ತರಬೇಕುʼ ಎಂದು ಹಾರೈಸಿದರು.

Advertisements

ಕಾಲೇಜಿನ ಪ್ರಾಚಾರ್ಯ ಡಾ.ಅಶೋಕಕುಮಾರ ವಣಗೇರಿ ಮಾತನಾಡಿ, ʼಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ಜೀವನದ ಗುರಿ ತಲುಪಬೇಕು. ಉಜ್ವಲ ಭವಿಷ್ಯ ಕುರಿತು ಕಠಿಣ ಅಧ್ಯಯನದ ನಡೆಸಲು ಯೋಚಿಸಬೇಕು. ಜೀವನದಲ್ಲಿ ನಿರ್ದಿಷ್ಟ ಗುರಿ ಹೊಂದಿದ್ದರೆ ಮಾತ್ರ ಸಾಧನೆಯ ಶಿಖರ ತಲುಪಬಹುದುʼ ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಬಿಇಟಿ ಸಮೂಹ ಸಂಸ್ಥೆಯ ಬಸವಕಲ್ಯಾಣ ಇಂಜಿನೀಯರಿಂಗ್ ಕಾಲೇಜಿನ ಉಪಪ್ರಾಚಾರ್ಯರು ಡಾ.ಅರುಣಕುಮಾರ ಎಲಾಲ ಹಾಗೂ ಸಂಸ್ಥೆಯ ವಿವಿಧ ಕಾಲೇಜುಗಳ ಪ್ರಾಚಾರ್ಯರು ಉಪನ್ಯಾಸಕರಾದ ಡಾ.ನಾಗಯ್ಯಾ ಸ್ವಾಮಿ, ವಿಶ್ವನಾಥಯ್ಯಾ ಸ್ವಾಮಿ, ನೀಲಕಂಠ ಕೋಡ್ಲೆ, ಶಿವಕುಮಾರ ಸ್ವಾಮಿ ಹಾಗೂ ಕುಲಸಚಿವ ಪ್ರೇಮಸಾಗರ ಪಾಟೀಲ ಸೇರಿದಂತೆ ಸಿಬ್ಬಂದಿಗಳಾದ ವೃಷೀಕೇತ ಭೂಸಾರೆ, ಸುಭಾಷ ಚಂದ್ರಯ್ಯ ಮತ್ತು ಎಲ್ಲಾ ವಿಭಾಗ ಮುಖ್ಯಸ್ಥರು, ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಈ ಸುದ್ದಿ ಓದಿದ್ದೀರಾ? ಬೀದರ್ | ಹೃದಯಾಘಾತ : ಕರ್ತವ್ಯ ನಿರತ ಪೊಲೀಸ್ ಪೇದೆ ಸಾವು

ಕಾರ್ಯಕ್ರಮವನ್ನು ಡಾ.ಅರುಣಕುಮಾರ ಎಲಾಲ್ ಸ್ವಾಗತಿಸಿದರು, ವಿದ್ಯಾಸಾಗರ ನಿರೂಪಿಸಿದರು. ರೇವಣಸಿದ್ದಪ್ಪಾ ಡಿಗ್ಗಿಕರ್ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

Download Eedina App Android / iOS

X