ಬಾಗಲಕೋಟ | ಮುಧೋಳ ನಗರದ ಸರ್ವಾಂಗೀಣ ಅಭಿವೃದ್ಧಿಗೆ ಸದಾ ಬದ್ಧನಾಗಿರುವೆ: ಸಚಿವ ತಿಮ್ಮಾಪುರ

Date:

Advertisements

ಮುಧೋಳ ನಗರದ ಸರ್ವಾಂಗೀಣ ಅಭಿವೃದ್ಧಿಗೆ ಸದಾ ಬದ್ಧನಾಗಿರುವೆ. ಬಾಗಲಕೋಟ ಜಿಲ್ಲೆಯ ಮುಧೋಳ ನಗರಕ್ಕೆ ಹೈಟೆಕ್ ಶೌಚಾಲಯ ನಿರ್ಮಿಸಲು ಸಚಿವ ಆರ್.ಬಿ. ತಿಮ್ಮಾಪುರ ಘೋಷಣೆ ಮಾಡಿದ್ದಾರೆ.

ನಗರದ ಡಾ. ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ಗಾಂಧೀಜಿ ಜಯಂತಿಯಲ್ಲಿ ಪಾಲ್ಗೊಂಡು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಧೋಳ ನಗರದ ವಿವಿಧ ವಾರ್ಡ್‌ಗಳಲ್ಲಿ 39 ಹೈಟೆಕ್ ಶೌಚಾಲಯಗಳನ್ನು ನಿರ್ಮಿಸುವ ಯೋಜನೆ ಮಾಡಲಾಗಿದೆ. ಸ್ಥಳ ಪರಿಶೀಲನೆ ಮಾಡಿ ಅಂದಾಜು 7 ಕೋಟಿ 31 ಲಕ್ಷ ವೆಚ್ಚದಲ್ಲಿ ನೈರ್ಮಲ್ಯ ಸೌಲಭ್ಯಗಳನ್ನು ಸುಧಾರಿಸಲು ಮತ್ತು ನಗರದ ನಿವಾಸಿಗಳಿಗೆ ಸ್ವಚ್ಛ, ಆರೋಗ್ಯಕರ ಪರಿಸರಕ್ಕೆ ಸದಾ ಬದ್ದನಾಗಿರುವೆ ಎಂದರು.

ಮಹಾತ್ಮಾ ಗಾಂಧೀಜಿಯವರ ಪರಂಪರೆ ಇಂದಿಗೂ ಭಾರತೀಯರಿಗೆ ಸ್ಫೂರ್ತಿ ನೀಡುತ್ತಿದೆ. 1924 ರಲ್ಲಿ ಬೆಳಗಾವಿಯಲ್ಲಿ ನಡೆದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆಯ ಶತಮಾನೋತ್ಸವದ ಆಚರಣೆಯು ಸಾಕ್ಷಿಯಾಗಿದೆ.  ಗಾಂಧಿಯವರ ಅಧ್ಯಕ್ಷತೆಯಲ್ಲಿ ನಡೆದ ಈ ಐತಿಹಾಸಿಕ ಅಧಿವೇಶನವು ಬೆಳಗಾವಿಯೊಂದಿಗಿನ ಅವರ ಸಂಪರ್ಕಕ್ಕೆ ನಾಂದಿ ಹಾಡಿತು. ಅವರ ಸ್ಮರಣೆಯನ್ನು ಗೌರವಿಸಲು, ಅಹಿಂಸಾತ್ಮಕ ಪ್ರತಿರೋಧದ ಶಕ್ತಿಯ ಬಗ್ಗೆ ಅಮೂಲ್ಯವಾದ ಪಾಠಗಳನ್ನು ಯುವ ಪೀಳಿಗೆ ಕಲಿಯಬೇಕಿದೆ.

Advertisements

ಇಂದಿನ ಪೀಳಿಗೆಗೆ ವಿಶೇಷವಾಗಿ ಯುವಕರ ನಡುವಿನ ಧರ್ಮ ಧರ್ಮಗಳ ಮಧ್ಯೆ, ಜಾತಿ ವಿಷಬೀಜ ಬಿತ್ತಿವ ಮೂಲಕ ದ್ವೇಷ ಮತ್ತು ಒಡಕಗಳ ನಿವಾರಣೆಗೆ ಗಾಂಧಿಯವರ ಮಾರ್ಗದರ್ಶನದ ಅವಶ್ಯಕತೆ ಇದೆ. ಗಾಂಧಿಯವರ ಮೌಲ್ಯಗಳನ್ನು ಉತ್ತೇಜಿಸುವಲ್ಲಿ ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.

ನಗರದ ಅಭಿವೃದ್ಧಿಗಾಗಿ ಯಾವುದೇ ರಾಜಕೀಯ ಮಾಡದೆ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧನಾಗಿದ್ದೇನೆ. ನಗರದ ನಿವಾಸಿಗಳಿಗೆ ಯಾವುದೇ ಅಡೆತಡೆ ಆಗದಂತೆ ವ್ಯಾಪಾರಕ್ಕೆ ಸರಳಿತವಾಗಿ ಅಲ್ಲಲ್ಲಿ ಪಾರ್ಕಿಂಗ್ ವ್ಯವಸ್ಥೆ, ನಾಲ್ಕು ದಿಕ್ಕುಗಳ ಕಡೆ ಸ್ಮಶಾನದ ವ್ಯವಸ್ಥೆಮಾಡಲು  ಸ್ಥಳ ಹುಡುಕಾಟದಲ್ಲಿ ಅಧಿಕಾರಗಳಿಗೆ ಸೂಚಿಸಿದ್ದೇನೆ. ಆದಷ್ಟು ಬೇಗ ಜನತೆಗೆ ಅನುಕೂಲವಾಗುವಂತೆ ಎಲ್ಲ ವ್ಯವಸ್ಥೆಯನ್ನು ಮಾಡುವುದಾಗಿ ಸಚಿವ ತಿಮ್ಮಾಪೂರ  ಭರವಸೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X