ಮೈಸೂರು ದಸರಾದಲ್ಲೂ ಕೋಮು ದ್ವೇಷ; ದೀಪಾಲಂಕಾರಕ್ಕೂ ಬಿಜೆಪಿ ಅಪಸ್ವರ

Date:

Advertisements

ಮೈಸೂರು ದಸರಾ ಸಮಯದಲ್ಲಿ ಬಿಜೆಪಿ ನಿರಂತರವಾಗಿ ವಿವಾದ ಹುಟ್ಟುಹಾಕುತ್ತಲೇ ಇದೆ. ಈ ಹಿಂದೆ, ಮಹಿಷ ದಸರಾ ಅಡ್ಡಿಪಡಿಸಿ, ರಗಳೆ, ರಾದ್ದಾಂತ ಎಬ್ಬಿಸುತ್ತಿದ್ದ ಬಿಜೆಪಿ, ಇದೀಗ, ಮೈಸೂರು ದಸರಾದ ದೀಪಾಲಂಕಾರದಲ್ಲೂ ಕ್ಯಾತೆ ತೆಗೆದಿದೆ. ದಸರಾದಲ್ಲೂ ಕೋಮು ರಾಜಕಾರಣ, ಕೋಮು ದ್ವೇಷ ಬಿತ್ತಲು ಮುಂದಾಗಿದೆ.

ದಸರಾ ಪ್ರಯುಕ್ತ ಮೈಸೂರಿನಾದ್ಯಂತ ದೀಪಾಲಂಕಾರ ಮಾಡಲಾಗಿದೆ. ನಗರದ ಬಹುತೇಕ ಭಾಗಗಳು ದೀಪಗಳಿಂದ ಕಂಗೊಳಿಸುತ್ತಿವೆ. ನಾನಾ ಬಗೆಯಲ್ಲಿ ದೀಪಾಲಂಕಾರ ಮಾಡಿಲಾಗಿದೆ. ಅದೇ ರೀತಿ, ಪ್ರಮುಖ ರಸ್ತೆಯೊಂದರಲ್ಲಿ ಗುಂಬಜ್ ಮಾದರಿಯಲ್ಲೂ ದೀಪಾಲಂಕಾರ ಮಾಡಲಾಗಿದೆ. ಅದಕ್ಕೆ, ಬಿಜೆಪಿ ಅಪಸ್ವರ ಎತ್ತಿದೆ.

ಮೈಸೂರಿನ ಸಯ್ಯಾಜಿರಾವ್ ರಸ್ತೆಯಲ್ಲಿ ಹಸಿರು ಚಪ್ಪರ ಹಾಕಿ, ಅದಕ್ಕೆ ದೀಪಾಲಂಕಾರ ಮಾಡಲಾಗಿದೆ. ಚಪ್ಪರವನ್ನು ಗುಂಬಜ್ ಮಾದರಿಯಲ್ಲಿ ನಿರ್ಮಿಸಲಾಗಿದೆ. ಅದಕ್ಕೂ ಬಿಜೆಪಿ ಕ್ಯಾತೆ ತೆಗೆದಿದೆ. ಮಾಜಿ ಸಂಸದ ಪ್ರತಾಪ್ ಸಿಂಹ, ಅದನ್ನು ಬದಲಾಯಿಸಬೇಕು ಎಂದಿದ್ದಾರೆ.

Advertisements

ಚಪ್ಪರದ ಚಿತ್ರವನ್ನು ‘ಎಕ್ಸ್‌‘ನಲ್ಲಿ ಹಂಚಿಕೊಂಡಿರುವ ಪ್ರತಾಪ್ ಸಿಂಹ, ‘ಇದನ್ನು ಬದಲಿಸಲು ಹೇಳಿದ್ದೇನೆ’ ಎಂದು ಬರೆದುಕೊಂಡಿದ್ದಾರೆ.

ಪ್ರತಿ ವರ್ಷ ಸಯ್ಯಾಜಿರಾವ್ ರಸ್ತೆಯಲ್ಲಿ ಚಾಂಮುಂಡೇಶ್ವರಿ ವಿದ್ಯುತ್ ಪ್ರಕರಣ ನಿಗಮ ನಿಯಮಿತ (ಚೆಸ್ಕಾಂ)ನಿಂದ ಹಸಿರು ಚಪ್ಪರ ಅಳವಡಿಸಲಾಗುತ್ತದೆ. ಅದೇ ರೀತಿ ಈ ವರ್ಷವೂ ಹಸಿರು ಚಪ್ಪರ ಹಾಕಿದೆ. ವಿಭಿನ್ನ ಮತ್ತು ವಿಶಿಷ್ಟವಾಗಿ ಈ ಬಾರಿ, ಗುಂಬಜ್ ಮಾದರಿಯಲ್ಲಿ ಚಪ್ಪರ ನಿರ್ಮಿಸಿದೆ. ಸಚಿವ ಕೆ.ಜೆ ಜಾರ್ಜ್‌ ಅವರು ಶುಕ್ರವಾರ ಇದೇ ಚಪ್ಪರದ ಬಳಿಯಿಂದಲೇ ದೀಪಾಲಂಕಾರ ಉದ್ಘಾಟನೆ ಮಾಡಲಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X