ಕೊಡಗು | ಪೊಲೀಸ್ ಕಾರ್ಯಾಚರಣೆ; ಅಂತರಾಷ್ಟ್ರೀಯ ಗಾಂಜಾ ಆರೋಪಿಗಳ ಬಂಧನ

Date:

Advertisements

ಥೈಲ್ಯಾಂಡ್ ದೇಶದಿಂದ ದುಬೈ ಮತ್ತು ಕೇರಳಕ್ಕೆ ತನ್ನ ಸಹಚರರೊಂದಿಗೆ ಹೈಡ್ರೋ ಗಾಂಜಾವನ್ನು ಸಾಗಿಸುತ್ತಿದ್ದ ಪ್ರಮುಖ ಡ್ರಗ್ ಪೆಡ್ಲರ್‌(ಮಾದಕ ವಸ್ತುಗಳನ್ನು ಮಾರಾಟಗಾರ) ಬಂಧನದ ಜತೆಗೆ ಆತನ ಆರು ಮಂದಿ ಸಹಚರರನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ.

ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ರಾಮರಾಜನ್ ಪತ್ರಿಕಾಗೋಷ್ಠಿ ನಡೆಸಿ ಪ್ರಕರಣದ ಕುರಿತು ಸಂಪೂರ್ಣ ಮಾಹಿತಿ ನೀಡಿ ಮಾತನಾಡಿದರು.

“ನಾಪೋಕ್ಲು ವಿನ ಅಕಿನಾಸ್ ಎಂ ಎನ್, ರಿಯಾಜ್ ಪಿ ಎಂ, ವಿರಾಜಪೇಟೆ ವಾಜಿದ್ ಸಿ ಇ, ನಾಪೋಕ್ಲು ಯಾಹ್ಯ ಸಿ ಎಚ್, ವಿರಾಜಪೇಟೆ ನಾಸೂರುದ್ದೀನ್ ಎಂ ಯು, ರಾಹುಫ್ ಎಂ ಎ ಗಾಂಜಾ ಆರೋಪಿಗಳಾಗಿದ್ದು, ಕಾಸರಗೋಡು ಜಿಲ್ಲೆಯ ಮೆಹರೂಫ್ ಕೆ ಎ ಪ್ರಕರಣದ ಪ್ರಮುಖ ಆರೋಪಿ” ಎಂದು ಮಾಹಿತಿ ನೀಡಿರುತ್ತಾರೆ.

Advertisements

“ಪ್ರಕರಣದ ಹಿನ್ನೆಲೆ ಥೈಲ್ಯಾಂಡ್ ದೇಶದ ಬ್ಯಾಂಕಾಕ್‌ನಲ್ಲಿ ಕೇರಳದ ಕಾಸರಗೋಡು ಜಿಲ್ಲೆಯ ಮೆಹರೂಫ್ ಎಂಬಾತ ಕೆಫೆ ಇಟ್ಟುಕೊಂಡಿದ್ದು, ಆತನಿಂದ ವಿರಾಜಪೇಟೆಯ ರಾಹುಫ್ ಸೆಪ್ಟಂಬರ್‌ 23ರಂದು ವಿಮಾನದ ಮೂಲಕ ಥೈಲ್ಯಾಂಡ್‌ನಿಂದ ಬೆಂಗಳೂರಿಗೆ ಹೈಡ್ರೋ ಗಾಂಜಾವನ್ನು ತರಿಸಿ ತನ್ನ ಇತರ ಸಹಚಾರರೊಂದಿಗೆ ಮೈಸೂರು, ಗೋಣಿಕೊಪ್ಪ ಮಾರ್ಗವಾಗಿ ಬೆಳಗಿನ ಜಾವ ಆಗಮಿಸಿ, ಗೋಣಿಕೊಪ್ಪಲಿನ ಬೆಳ್ಳಿಯಪ್ಪ ರೆಸಿಡೆನ್ಸಿಯಲ್ಲಿ ಕೆಲವರು ತಂಗಿದ್ದರು” ಎಂದು ತಿಳಿಸಿದ್ದಾರೆ.

ಮಡಿಕೇರಿಯತ್ತ ಗಾಂಜಾ ಸಹಿತ ತೆರಳುತ್ತಿದ್ದ ಸಂದರ್ಭ ಖಚಿತ ಮಾಹಿತಿ ತಿಳಿದ ಡಿಸಿಆರ್‌ಬಿ ಪೊಲೀಸ್ ತಂಡ ಜಿಲ್ಲಾ ವರಿಷ್ಠಾಧಿಕಾರಿ ಮಾರ್ಗದರ್ಶನದಂತೆ ಇತರ ಸಹಚರನ್ನು ಬಂಧಿಸಿ ಪ್ರಕರಣವನ್ನು ಬಯಲಿಗೆಳೆದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಉಡುಪಿ | ಕಸ ಎಸೆಯುತ್ತಿದ್ದ ಜಾಗ ಇದೀಗ ಸೆಲ್ಫಿ ಪಾಯಿಂಟ್!

“ಪ್ರಕರಣದ ಮುಖ್ಯ ರೂವಾರಿ ಮೆಹರೂಫ್ ಕೊಚ್ಚಿನ್ ಮೂಲಕ ಬ್ಯಾಂಕಾಕಿಗೆ ವಿಮಾನದ ಮೂಲಕ ತಪ್ಪಿಸಿಕೊಂಡು ಹೋಗಲು ಯತ್ನಿಸಿದಾಗ, ಕೊಚ್ಚಿನ್ ವಿಮಾನ ನಿಲ್ದಾಣದಲ್ಲಿ ಅಲ್ಲಿನ ಪೊಲೀಸ್ ಕಮಿಷನರ್ ಸಹಕಾರದಲ್ಲಿ ಮಡಿಕೇರಿ ಗ್ರಾಮಾಂತರ ವೃತ್ತ ನಿರೀಕ್ಷಕ ಅನುಪ್ ಮೇದಪ್ಪ ಹಾಗೂ ತಂಡ ಸೆಪ್ಟೆಂಬರ್ 29 ರಾತ್ರಿ 10:30ಕ್ಕೆ ಬಂಧಿಸಿ ಕೊಡಗಿಗೆ ಕರೆ ತಂದಿದ್ದಾರೆ” ಎಂದು ಮಾಹಿತಿ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X