ಬೀದರ್‌ | ಎಡಿಜಿಪಿ ಎಂ.ಚಂದ್ರಶೇಖರ್‌ ಅಮಾನತಿಗೆ ಆಗ್ರಹಿಸಿ ಜೆಡಿಎಸ್‌ ಪ್ರತಿಭಟನೆ

Date:

Advertisements

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಕೀಳುಮಟ್ಟದ ಭಾಷೆ ಬಳಸಿರುವ ಕರ್ನಾಟಕ ಲೋಕಾಯುಕ್ತ ವಿಶೇಷ ತನಿಖಾ ಅಮಾದಳದ ಮುಖ್ಯಸ್ಥ ಎಡಿಜಿಪಿ ಎಮ್.ಚಂದ್ರಶೇಖರ್ ಅವರನ್ನು ಕೂಡಲೇ ಸೇವೆಯಿಂದ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ ಬೀದರ್‌ ಜಿಲ್ಲಾ ಜೆಡಿಎಸ್ ಘಟಕದಿಂದ ಪ್ರತಿಭಟನೆ ನಡೆಸಲಾಯಿತು.

ಬೀದರ್ ನಗರದಲ್ಲಿ ಬುಧವಾರ ಜೆಡಿಎಸ್ ಜಿಲ್ಲಾ ಕಚೇರಿಯಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಮೂಲಕ ತೆರಳಿ ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ಅಪರ ಜಿಲ್ಲಾಧಿಕಾರಿ ಶಿವಕುಮಾರ್‌ ಶೀಲವಂತ ಅವರಿಗೆ ಸಲ್ಲಿಸಿದರು.

WhatsApp Image 2024 10 03 at 2.37.18 PM
ಅಪರ ಜಿಲ್ಲಾಧಿಕಾರಿ ಶಿವಕುಮಾರ್‌ ಶೀಲವಂತ ಅವರಿಗೆ ಮನವಿ ಸಲ್ಲಿಸಿದರು.

ಭ್ರಷ್ಟಾಚಾರ, ದುರ್ನಡತೆ, ಸುಲಿಗೆ ಸೇರಿದಂತೆ ಇತರೆ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿರುವ ಲೋಕಾಯುಕ್ತ ಎಸ್ಐಟಿ ಎಡಿಜಿಪಿ ಎಮ್.ಚಂದ್ರಶೇಖರ್‌ ಅವರನ್ನು ತಕ್ಷಣವೇ ಸೇವೆಯಿಂದ ಅಮಾನತ್ತುಗೊಳಿಸಿ ಅವರ ವಿರುದ್ಧ ಶಿಸ್ತು ಕಾನೂನು ಕ್ರಮಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ತಾಲೂಕು, ಗ್ರಾಮೀಣ ಭಾಗದಲ್ಲಿ ಉಗ್ರವಾದ ಪ್ರತಿಭಟನೆ ನಡೆಸಬೇಕಾಗುತ್ತದೆʼ ಎಂದು ಎಚ್ಚರಿಕೆ ನೀಡಿದರು.

Advertisements

ಈ ಸುದ್ದಿ ಓದಿದ್ದೀರಾ? ರಾಯಚೂರು | ಧಾರಾಕಾರ ಮಳೆ : ಸಿಡಿಲಿಗೆ ಮಹಿಳೆ, ಎಮ್ಮೆ ಸಾವು

ಪ್ರತಿಭಟನೆಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ರಮೇಶ್ ಪಾಟೀಲ್ ಸೋಲಪುರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶೋಕ ಕೋಡಗೆ ಹಾಗೂ ಜೆಡಿಎಸ್‌ ಮುಖಂಡರಾದ ದೇವೇಂದ್ರ ಸೋನಿ, ರಾಜು ಕಡ್ಯಾಳ, ಐಲಿಂಜಾನ್ ಮಠಪತಿ, ಎಮ್.ಡಿ ಅಸೋದುದ್ದೀನ್, ಸಜ್ಜದ್ ಸಾಹೇಬ್, ರಾಜಶೇಖರ ಜವಳೆ, ಭೋಮಗೊಂಡ ಚಿಟ್ಟಾವಾಡಿ, ಲಲಿತಾ ಕರಂಜಿ, ಅಭಿ ಕಾಳೆ, ಬಸವರಾಜ ಹಾರೂರಗೇರಿ, ಮಕ್ಸೂದ್ ಅಲಿ, ಶಿವಪುತ್ರ ಮಾಳಗೆ, ಪ್ರಲ್ಹಾದ್ ಚಿಟ್ಟಾವಾಡಿ, ಸಂಗು ಚಿದ್ರಿ, ರಾಜು ಚಿಂತಾಮಣಿ, ಅರುಣಕುಮಾರ್ ಎಸ್ ಹೊಸಪೇಟೆ, ಬಸವರಾಜ್ ಶಾಪೂರ್, ರವಿಕುಮಾರ್ ಎಸ್.ಎನ್ ಸಿರ್ಸಿ, ಪ್ರಶಾಂತ ವಿಶ್ವಕರ್ಮ, ಮಹಮ್ಮದ್ ಸಲಿಂ, ಜಗದೇವಿ ಮೇತ್ರಿ, ಶಾಂತಮ್ಮ, ನಾಗಮ್ಮ, ಲಕ್ಷ್ಮಣ್ ಗಾದಗಿ, ಚಂದಪ್ಪ, ಹಿರಾಮಣಿ ಬುದೇರಾ, ಶಿವಾಜಿ ಬರೂರ, ಸಂಜು ಬರೂರ, ಶಿವರಾಜ ಬಗದಲ್, ಗುರುದಾಸ್ ಕೋಳಾರ, ಜಾನ್ಸನ್, ಅಂಬಾದಾಸ ಸೋನಿ ಸೇರಿದಂತೆ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

Download Eedina App Android / iOS

X