ತಾವು ತೊಂದರೆಗೆ ಸಿಗದಿರಲಿ ಅಂತ ಸಿದ್ದರಾಮಯ್ಯ ಪರ ಜಿ ಟಿ ದೇವೇಗೌಡ ಬ್ಯಾಟ್‌ : ಕುಮಾರಸ್ವಾಮಿ

Date:

Advertisements

ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸುತ್ತಿರುವ ಎಚ್ ಡಿ ಕುಮಾರಸ್ವಾಮಿ ಸೇರಿದಂತೆ ಬಿಜೆಪಿ-ಜೆಡಿಸ್ ಮುಖಂಡರ ವಿರುದ್ಧ ಜೆಡಿಎಸ್ ಶಾಸಕ ಜಿ ಟಿ ದೇವೇಗೌಡ ಮೈಸೂರು ದಸರಾ ವೇದಿಕೆಯಲ್ಲೇ ತಿರುಗೇಟು ನೀಡಿದ್ದಾರೆ.

ಸ್ವಪಕ್ಷದ ನಾಯಕರ ವಿರುದ್ಧವೇ ವಾಗ್ದಾಳಿ ನಡೆಸಿರುವ ಜಿ ಟಿ ದೇವೇಗೌಡ ನಡೆಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, “ಜಿ ಟಿ ದೇವೇಗೌಡ ಅವರು ಮೈಸೂರಿನವರು. ಅವರು ತೊಂದರೆಗೆ ಸಿಗದೇ ಇರಲಿ ಅಂತ ಹೀಗೆ ಹೇಳಿರಬೇಕು” ಎಂದರು.

“ನನ್ನ ವಿರುದ್ಧ ಯಾರು ಏನೇ ಷಡ್ಯಂತ್ರ ಮಾಡಲಿ. ಏನೂ ಮಾಡಲು ಆಗುವುದಿಲ್ಲ. ನಾನು ಎಂದೂ ಸಿಎಂ ಸಿದ್ದರಾಮಯ್ಯ‌ ಅವರು ರಾಜೀನಾಮೆ ನೀಡಿ ಎಂದು ಆಗ್ರಹಿಸಿಲ್ಲ. ಅವರ ನಿತ್ಯದ ಹೇಳಿಕೆ ನೋಡಿ ರಾಜೀನಾಮೆ ನೀಡಿದರೆ ಒಳ್ಳೆಯದು ಎಂದಿರುವೆ” ಎಂದು ಹೇಳಿದರು.

Advertisements

“ಎಫ್‌ಐಆರ್‌ ದಾಖಲಾದವರೆಲ್ಲ ರಾಜೀನಾಮೆ ನೀಡಬೇಕು ಅಂತ ನಾನು ಯಾವಾಗ ಹೇಳಿರುವೆ? ತಮ್ಮನ್ನು ರಕ್ಷಿಸಿಕೊಳ್ಳಲು ಜಿ ಟಿ ದೇವೇಗೌಡ ಅವರು ಸಿದ್ದರಾಮಯ್ಯ ಅವರನ್ನು ಸಮರ್ಥಿಸಿಕೊಂಡಿದ್ದಾರೆ” ಎಂದು ದೂರಿದರು.

ಜಿ ಟಿ ದೇವೇಗೌಡ ಹೇಳಿದ್ದೇನು?

ನಾಡಹಬ್ಬ ದಸರಾ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ‌ ವಹಿಸಿ ಮಾತನಾಡಿದ ಅವರು, “ಮುಡಾ ಪ್ರಕರಣದಲ್ಲಿ ಯಾರೆಲ್ಲರ‌ ವಿರುದ್ಧ ಎಫ್‌ಐಆರ್ ದಾಖಲಾಗಿದೆಯೋ‌ ಎಲ್ಲರೂ ರಾಜೀನಾಮೆ‌ ಕೊಡಲಿ. ಕುಮಾರಸ್ವಾಮಿ ಕೂಡ ರಾಜೀನಾಮೆ ನೀಡಲಿ” ಎಂದಿದ್ದರು.

“ಅವರೆಲ್ಲರಿಗೂ ದೇವಿ ಚಾಮುಂಡೇಶ್ವರಿ ಒಳ್ಳೆ ಬುದ್ಧಿ ಕೊಡಲಿ. ಮುಡಾ ಹಗರಣದಲ್ಲಿ ಸಿಎಂ ರಾಜೀನಾಮೆ ನೀಡಬೇಕೆಂದು ವಾದಿಸುತ್ತಾ ಹೋದರೆ ರಾಜ್ಯದಲ್ಲಿ ಎಲ್ಲ ರಾಜಕೀಯ ನಾಯಕರೂ ರಾಜೀನಾಮೆ ನೀಡಬೇಕಾದೀತು. ಹಾಗೆ ಮಾಡಲು ಸಾಧ್ಯವೇ” ಎಂದು ಪ್ರಶ್ನಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

Download Eedina App Android / iOS

X