ಕಲಬುರಗಿ | ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ ಬಂಧನಕ್ಕೆ ದಲಿತ ಮುಖಂಡರ ಆಗ್ರಹ

Date:

Advertisements

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಕುಟುಂಬವನ್ನು ಕೊಲೆ ಮಾಡಲು ಬಿಜೆಪಿ ಮುಖಂಡರು ಸಂಚು ನಡೆಸಿದ್ದು, ತಪ್ಪಿತಸ್ಥರನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಕಲಬುರಗಿಯ ದಲಿತ ಮುಖಂಡರು ಆಗ್ರಹಿಸಿದ್ದಾರೆ.

ಹಲವು ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವ ಚಿತ್ತಾಪುರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್‌ ಅವರದ್ದು ಎನ್ನಲಾದ ಆಡಿಯೋ ವೈರಲ್ ಆಗಿದ್ದು, ಅದರಲ್ಲಿ “ಖರ್ಗೆ ಮತ್ತು ಅವರ ಹೆಂಡ್ತಿನಾ, ಇಡೀ ಕುಟುಂಬವನ್ನು ಸಾಫ್ ಮಾಡ್ತೀನಿ” ಅನ್ನುವುದು ದಾಖಲಾಗಿದೆ.

ರವಿ ಎಂಬ ಬಿಜೆಪಿ ಕಾರ್ಯಕರ್ತನೊಬ್ಬ ಮಣಿಕಂಠ ರಾಠೋಡ್‌ಗೆ ಫೋನ್ ಕರೆ ಮಾಡಿ ʼನಿಮ್ಮ ಮೇಲೆ 40 ಕೇಸುಗಳಿವೆ ಅನ್ನುತ್ತಾರೆ. ಈ ಕುರಿತು ಖರ್ಗೆಯವರನ್ನು ಪ್ರಶ್ನೆ ಮಾಡ್ತೀನಿ ಅವರ ನಂಬರ್ ಕೊಡಿ ಅಣ್ಣʼ ಎಂದು ಕೇಳುತ್ತಾನೆ. ಇದಕ್ಕೆ ಉತ್ತರಿಸುವ ಮಣಿಕಂಠ ರಾಥೋಡ್‌, “ನನ್ನ ಬಳಿ ಅವರ ಫೋನ್ ನಂಬರ್ ಇದ್ರೆ ಅವರ ಹೆಂಡ್ರು, ಮಕ್ಕಳು ಎಲ್ಲರನ್ನು ಸಾಫ್ ಮಾಡ್ತೀನಿ. ಅದಕ್ಕೆ ನನ್ನ ಬಳಿ ನಂಬರ್ ಇಲ್ಲ” ಎನ್ನುವ ಮಾತುಗಳು ಆಡಿಯೋದಲ್ಲಿವೆ.

Advertisements

ದಲಿತ ಮುಖಂಡರು ಈ ಕುರಿತು ಕಲಬುರಗಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯನ್ನು ಭೇಟಿಯಾಗಿದ್ದು, “ಉಡಾಫೆ ಮಾತಗಳನ್ನು ಆಡುತ್ತಾ ಇಂದು ಕೊಲೆ ಬೆದರಿಕೆ ಹಾಕುವ ಮಟ್ಟಕ್ಕೆ ರೌಡಿಶೀಟರ್‌ನನ್ನು ಬೀದಿಗೆ ಬಿಟ್ಟಿದ್ದಾರೆ. ಕೂಡಲೇ ಅವನ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಇಲ್ಲದಿದ್ದಲ್ಲಿ ಬೃಹತ್ ಹೋರಾಟ ಮಾಡಲಾಗುವುದು” ಎಂದು ದಲಿತ ಮುಖಂಡರು ಎಚ್ಚರಿಕೆ ನೀಡಿದ್ದಾರೆ.‌

ಈ ಸುದ್ದಿ ಓದಿದ್ದೀರಾ? ಬಿಜೆಪಿ ಲೂಟಿಯಿಂದ ಕರ್ನಾಟಕ ರಕ್ಷಿಸಲು ಕಾಂಗ್ರೆಸ್‌ಗೆ ಮತ ನೀಡಿ : ಸೋನಿಯಾ ಗಾಂಧಿ

ರೌಡಿಶೀಟರ್ ಮಣಿಕಂಠನ ಮೇಲೆ ಈಗಾಗಲೆ ಎಫ್‌ಐಆರ್ ದಾಖಲಾಗಿದೆ. ಈ ಕುರಿತು ಕೂಡಲೇ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕಲಬುರಗಿ ಎಸ್‌ಪಿ ಆಶ್ವಾಸನೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಹಣಮಂತ ಯಳಸಂಗಿ, ಬಸಣ್ಣ ಸಿಂಗೆ, ಅಶ್ವಿನಿ ಮದನಕರ, ಲಕ್ಷ್ಮೀಕಾಂತ ಹುಬ್ಳಿ, ದತ್ತತ್ರೆಯ ಇಕ್ಕಳಕಿ, ಸಂತೋಷ ಮೆಲ್ಮನಿ, ದಿಲೀಪ್ ಕಾಯಂಕರ್ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X