ಗದಗ | ಅನಾಥ ವಯೋವೃದ್ಧ ಸಾವು: ಅಂತಿಮ ಸಂಸ್ಕಾರ ನಡೆಸಿದ ಯುವಕರು

Date:

Advertisements

ವಯೋವೃದ್ಧ ಸಾವಿಗೆ ಯುವಕರು ಸೇರಿ ಅಂತ್ಯಕ್ರಿಯೆ ನೆರೆವೇರಿಸಿದ್ದು, ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ನಡೆದಿದೆ.

ಸ್ನೇಹ ಸಂಜೀವಿನಿ ವಿವಿಧೋದ್ದೇಶಗಳ ಸಂಸ್ಥೆಯ ವೈಭವ ನಿರ್ಗತಿಕರ ಆಶ್ರಮದಲ್ಲಿ ನಿರ್ಗತಿಕ ವಯೋವೃದ್ಧ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಸಂಸ್ಥೆಯ ಸಿಬ್ಬಂದಿ ವರ್ಗದ ಹಾಗೂ ನರಗುಂದ ನಗರದ ಸಮಾಜಮುಖಿ ಯುವಕರು ಸೇರಿಕೊಂಡು ವಿಧಿ ವಿಧಾನದ ಮೂಲಕ ಮೃತರ ಅಂತ್ಯಕ್ರಿಯೆಯನ್ನು ನೆರವೇರಿಸಿದ್ದಾರೆ.

ಈ ಸಂದರ್ಭದಲ್ಲಿ ಯುವಕರು ಮಾತನಾಡಿ, ವಯೋವೃದ್ಧ ತಂದೆ ತಾಯಿಗಳನ್ನು ಮನೆಯಿಂದ ಹೊರಹಾಕಿ ನಿರ್ಗತಿಕರನ್ನಾಗಿ ಮಾಡುವುದನ್ನು ನಿಲ್ಲಿಸಬೇಕು. ಹಿರಿಯರಿಗೆ ಮನೆಯಲ್ಲಿರಿಸಿಕೊಂಡು ಅವರ ಆರೋಗ್ಯದ ಕಡೆಗೆ ಖಾಳಜಿ ವಹಿಸಬೇಕು. ಹಿರಿಯರನ್ನು ಅನಾಥ ಆಶ್ರಮಗಳಿಗೆ ಕಳಿಸುವುದನ್ನು ತಡೆಯಬೇಕು. ನಿರ್ಗತಿಕರಲ್ಲಿ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಬೇಕು ಎಂದರು.

Advertisements

ಇತ್ತೀಚಿನ ದಿನಮಾನಗಳಲ್ಲಿ ಹಿರಿಯ ಜೀವಿಗಳು ಅನೇಕ ಮಾರಣಾಂತಿಕ ಕಾಯಿಲೆಗಳಿಗೆ ಒಳಗಾಗುತ್ತಿದ್ದಾರೆ. ಅವರ ಕುಟುಂಬಸ್ಥರು ಅವರ ಆರೋಗ್ಯವನ್ನು ವಿಚಾರಿಸಬೇಕು. ಅವರನ್ನು ನೋಡಿಕೊಳ್ಳಬೇಕು. ಇಲ್ಲವಾದರೆ ನಿರ್ಗತಿಕರಾಗಿ ತಮ್ಮ ಜೀವನವನ್ನು ಕಳೆದುಕೊಳ್ಳುತ್ತಾರೆ. ಇಂಥ ಘಟನೆಗಳು ನಡೆಯದಂತೆ  ಸರಕಾರ ಎಚ್ಚರವಹಿಸಬೇಕು.

ನಿರ್ಗತಿಕ ವ್ಯವಸ್ಥೆಗೆ ಒಳಗಾದವರಿಗೆ ಸರಿಯಾದ ತಿಳುವಳಿಕೆಯನ್ನು ಒದಗಿಸಬೇಕು. ಮತ್ತು ಯಾರೂ ಹೆತ್ತವರನ್ನು ನಿರ್ಗತಿಕರನ್ನಾಗಿ ಮಾಡಬಾರದು ಎಂದು ಯುವಕರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡರು.

ಇದನ್ನೂ ಓದಿ ಗದಗ | ಗೋವಿಂದ ಪೈ ಜಯಂತಿ ಸರ್ಕಾರದಿಂದ ಆಚರಿಸಲು ಮನೋಹರ್ ಮೆರವಾಡೆ ಒತ್ತಾಯ

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರು. ಆಡಳಿತ ಮಂಡಳಿಥ ಹಾಗೂ ಸಿಬ್ಬಂದಿ ಮತ್ತು ನರಗುಂದದ ಸಮಾಜಮುಖಿ ಯುವಕರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

Download Eedina App Android / iOS

X