ದಲಿತ ದೌರ್ಜನ್ಯ | ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ದೂರು ದಾಖಲಿಸಿದ್ದ ಕುಟುಂಬದ ನಾಲ್ವರ ಹತ್ಯೆ

Date:

Advertisements

ಸರ್ಕಾರಿ ಶಾಲೆಯ ಶಿಕ್ಷಕ, ಅವರ ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಗುಂಡಿಕ್ಕಿ ಕೊಂದಿರುವ ದುರ್ಘಟನೆ ಉತ್ತರ ಪ್ರದೇಶದ ಅಮೇಥಿಯಲ್ಲಿ ನಡೆದಿದೆ. ಶಿಕ್ಷಕ ಸುನೀಲ್, ಅವರ ಪತ್ನಿ ಪೂನಂ (32), ದೃಷ್ಟಿ (6) ಮತ್ತು ಅವರ ಒಂದು ವರ್ಷದ ಮಗಳನ್ನು ಹತ್ಯೆಗೈಯಲಾಗಿದೆ. ಒಂದು ತಿಂಗಳ ಹಿಂದೆ ಸುನೀಲ್ ಅವರ ಬಲಿಷ್ಠ ಜಾತಿಯ ವ್ಯಕ್ತಿಯೊಬ್ಬನ ವರುದ್ಧ ದಲಿತ ದೌರ್ಜನ್ಯದ ಆರೋಪದ ಮೇಲೆ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ದೂರು ದಾಖಲಿಸಿತ್ತು. ಆ ಕಾರಣಕ್ಕಾಗಿಯೇ, ಅವರ ಕುಟುಂಬವನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

ಮೃತ ಶಿಕ್ಷಕ ಸುನೀಲ್ ಅವರು ರಾಯ್‌ ಬರೇಲಿ ಮೂಲದವರಾಗಿದ್ದು, ಅಮೇಥಿಯ ಪನ್ಹೌನಾದ ಸರ್ಕಾರಿ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ತಮ್ಮ ಪತ್ನಿ ಪೂನಂ ಅವರಿಗೆ ರಾಯ್ ಬರೇಲಿಯಲ್ಲಿ ಚಂದನ್ ವರ್ಮಾ ಎಂಬಾತ ‘ಈವ್ ಟೀಸಿಂಗ್’ ಮಾಡಿದ್ದಾನೆಂದು ಆರೋಪಿಸಿ, ಆಗಸ್ಟ್‌ 18ರಂದು ಸುನೀಲ್ ದೂರು ದಾಖಲಿಸಿದ್ದರು. ಪ್ರಕರಣದ ದಾಖಲಾದ ಬಳಿಕ ತಮ್ಮ ಮೇಲೆ ಯಾವುದೇ ಅಹಿತಕರ ಘಟನೆ, ದಾಳಿಗಳು ನಡೆದರೆ, ಅದಕ್ಕೆ ಚಂದನ್ ವರ್ಮಾನೇ ಜವಾಬ್ದಾರನೆಂದೂ ದೂರಿನಲ್ಲಿ ಉಲ್ಲೇಖಿಸಿದ್ದರು.

ಶುಕ್ರವಾರ ರಾತ್ರಿ, ಅಮೇಥಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಸುನೀಲ್ ಅವರ ನಿವಾಸಕ್ಕೆ ನುಗ್ಗಿರುವ ದುಷ್ಕರ್ಮಿಗಳು ಸುನೀಲ್, ಅವರ ಪತ್ನಿ ಹಾಗೂ ಮಕ್ಕಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ನಾಲ್ವರನ್ನೂ ಹತ್ಯೆಗೈದಿದ್ದಾರೆ.

Advertisements

ದುರ್ಘಟನೆ ನಡೆದಿರುವ ಸ್ಥಳಕ್ಕೆ ಅಮೇಥಿ ಜಿಲ್ಲಾಧಿಕಾರಿ ನಿಶಾ ಅನಂತ್‌, ಪೊಲೀಸ್ ವರಿಷ್ಠಾಧಿಕಾರಿ ಅನೂಪ್‌ ಸಿಂಗ್‌ ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ನೆರೆಹೊರೆಯವರು ಹೇಳುವಂತೆ, ರಾತ್ರಿ ಭಾರೀ ಗುಂಡಿನ ಸದ್ದು ಕೇಳಿಬಂದಿದೆ. ಎಲ್ಲರೂ ಹೊರ ಬಂದು ನೋಡುವ ವೇಳೆಗೆ, ಕುಟುಂಬದ ನಾಲ್ವರೂ ಮೃತಪಟ್ಟಿದ್ದರು. ಅವರ ಮೃತದೇಹಗಳು ಮನೆಯ ಹಿಂಭಾಗ ಬಿದ್ದಿದ್ದವು.

ಪ್ರಕರಣದ ಬಗ್ಗೆ ತನಿಖೆ ನಡೆಸಲು ಪೊಲೀಸರು ತಂಡಗಳನ್ನು ರಚಿಸಿದ್ದಾರೆ. ತನಿಖೆಗೆ ಸಹಾಯ ಮಾಡಲು ಸ್ಥಳೀಯ ಗುಪ್ತಚರ ಘಟಕ ಮತ್ತು ವಿಶೇಷ ಕಾರ್ಯಾಚರಣೆ ತಂಡಗಳನ್ನೂ ಕೂಡ ಕೇಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಾಳಿಕೋರರನ್ನು ಗುರುತಿಸುವ ಪ್ರಯತ್ನದ ಭಾಗವಾಗಿ ನಾವು ಆ ಪ್ರದೇಶದಲ್ಲಿನ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಸ್ಕ್ಯಾನ್ ಮಾಡುತ್ತಿದ್ದೇವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X