ಮೈಸೂರು | ಮಹಿಳೆಯರು ಮೂಢನಂಬಿಕೆಗೆ ಒಳಗಾಗದೆ, ವೈಚಾರಿಕ ಮನೋಭಾವ ಬೆಳಿಸಿಕೊಳ್ಳಬೇಕು: ಸಚಿವ ಹೆಚ್‌ ಸಿ ಮಹದೇವಪ್ಪ

Date:

Advertisements

ಮಹಿಳೆಯರು ಮೂಢನಂಬಿಕೆಗೆ ಒಳಗಾಗದೆ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಸಮಾಜ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಸಿ ಮಹದೇವಪ್ಪ ಸಲಹೆ ನೀಡಿದರು.

ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಮಹಿಳಾ ಮತ್ತು ಮಕ್ಕಳ ದಸರಾ ಉಪಸಮಿತಿಯಿಂದ ನಗರದ ಜೆ ಕೆ ಮೈದಾನದಲ್ಲಿ ಆಯೋಜಿಸಿದ್ದ ಮಹಿಳಾ ದಸರಾ ಉದ್ಘಾಟಿಸಿ ಮಾತನಾಡಿ, “ಆಧುನಿಕ ಜಗತ್ತಿನಲ್ಲಿ ಬದುಕು ಕಂಡುಕೊಂಡಿದ್ದರೂ ಕೂಡ ಮಹಿಳೆಯರು ಹೆಚ್ಚಾಗಿ ಮೂಢನಂಬಿಕೆಗೆ ಮಾರುಹೋಗುತಿದ್ದು, ಮಾನಸಿಕ ದೃಢತೆ ಮಹಿಳೆಯರಲ್ಲಿ ಕ್ಷೀಣವಾಗುತ್ತಿದೆ. ಹಾಗಾಗದೆ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು” ಎಂದು ಹೇಳಿದರು.

ಮಹಿಳಾ ದಸರಾ 1

“ಇಂದು ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಆಗಮಿಸಿ ಮಹಿಳಾ ಹಬ್ಬಕ್ಕೆ ಕಳೆ ತಂದಿರುವುದು ಸಂತಸವಾಗಿದೆ. ಮಹಿಳೆಯರು ಯಾರಮೇಲೂ ಅವಲಂಬಿತರಾಗದೆ ಸರ್ಕಾರದ ಯೋಜನೆಗಳು ಹಾಗೂ ಕಡ್ಡಾಯ ಶಿಕ್ಷಣದ ಮೂಲಕ ಸ್ವಾವಲಂಬಿಯಾಗಿ ಬದುಕು ನಡೆಸುವಲ್ಲಿ ಸಫಲರಾಗಬೇಕು” ಎಂದರು.

Advertisements

“ಸ್ವಾವಲಂಬನೆ ಜೀವನ ನಡೆಸುವ ಅನೇಕ ಮಹಿಳೆಯರು ಇಂದು ಕರಕುಶಲ ಪ್ರದರ್ಶನ ಮತ್ತು ಅಳಿವಿನ ಅಂಚಿನಲ್ಲಿರುವ ಗುಡಿ ಕೈಗಾರಿಕೆಗಳ ಉಳಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಅಂತಹವರ ಜೀವನ ಸುಖಕರವಾಗಿ ಸಾಗಬೇಕು. ಮೂಢನಂಬಿಕೆಯನ್ನು ಅನುಸರಿಸುವಲ್ಲಿ ಮಹಿಳೆಯರೇ ಹೆಚ್ಚಾಗಿರುವುದರಿಂದ ಇಂದು ಮೂಢನಂಬಿಕೆಯ ಹೆಸರಿನಲ್ಲಿ ಎಷ್ಟೋ ಹೆಣ್ಣುಮಕ್ಕಳು ಶೋಷಣೆಗೆ ಒಳಗಾಗುತ್ತಿದ್ದಾರೆ. ಮೊದಲು ಸುಶಿಕ್ಷಿತರಾಗಿ ವೈಜ್ಞಾನಿಕವಾಗಿ ವಿಚಾರಣೆ, ಚಿಂತನೆ ನಡೆಸಬೇಕು” ಎಂದು ಸಲಹೆ ನೀಡಿದರು.

ಮಹಿಳಾ ದಸರಾ 3

“ಮೂಢನಂಬಿಕೆಗೆ ಹೆಣ್ಣುಮಕ್ಕಳು ಬಲಿಯಾಗಬಾರದೆಂದರೆ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಹಿಂದು ಬಿಲ್‌ ಕೋಡ್ ಬಗ್ಗೆ ತಿಳಿದುಕೊಳ್ಳಬೇಕು. ಮಹಿಳೆಯರು ಮಾಟ ಮಂತ್ರ, ಯಂತ್ರ ತಂತ್ರ, ಶಾಸ್ತ್ರಗಳ ಮೊರೆ ಹೋಗುವುದನ್ನು ಬಿಟ್ಟು, ಸಾಮಾಜಿಕ, ಆರ್ಥಿಕ, ರಾಜಕೀಯ ಹಾಗೂ ಶೈಕ್ಷಣಿಕವಾಗಿ ಮುಂದೆ ಬಂದು ಸ್ವಾವಲಂಬಿ ಜೀವನ ನಡೆಸಬೇಕು” ಎಂದರು.

“ಮಹಿಳೆಯರ ಶಿಕ್ಷಣಕ್ಕಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅನೇಕ ಕೆಲಸಗಳನ್ನು ಮಾಡಿದ್ದಾರೆ. 17ನೇ ಶತಮಾನದಲ್ಲಿ ಬಸವಣ್ಣನವರು ಲಿಂಗ ತಾರತಮ್ಯದ ವಿರುದ್ಧ ಹೋರಾಡಿ ಸ್ವಂತ ಮನೆ ಬಿಟ್ಟು ಹೊರ ನಡೆದ ರೀತಿಯಾಗಿ ಹಾಗೂ ಮಹಿಳೆಯರ ಸಮಾನತೆಗಾಗಿ ತಮ್ಮ ಕಾನೂನು ಮಂತ್ರಿ ಪದವಿಯನ್ನೇ ತ್ಯಾಗ ಮಾಡಿದ ಡಾ ಬಿ ಆರ್ ಅಂಬೇಡ್ಕರ್ ಅವರನ್ನು ಈ ಸಮಯದಲ್ಲಿ ನೆನೆಯಬೇಕು” ಎಂದರು.

ಮಹಿಳಾ ದಸರಾ 4

ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಉಪಾಧ್ಯಕ್ಷೆ ಡಾ ಪುಷ್ಪ ಅಮರನಾಥ್ ಮಾತನಾಡಿ, “ಕರ್ನಾಟಕದಲ್ಲಿ ಮಹಿಳೆಯರಿಗೆ ವಿಶೇಷವಾದ ಶಕ್ತಿಯಿದ್ದು, ಈ ಬಾರಿಯ ಸುಭದ್ರ ಸರ್ಕಾರದಲ್ಲಿ ನವರಾತ್ರಿಯನ್ನು ಆಚರಿಸುತ್ತಿದ್ದೇವೆ. ಮಹಿಳೆ ಮನಸ್ಸು ಮಾಡಿದರೆ ಏನನ್ನಾದರು ಸಾಧಿಸಬಹುದು. ಇಂದು ನಾನಾ ಕ್ಷೇತ್ರದಲ್ಲಿ ಮಹಿಳಾ ಮಣಿಗಳು ಕಾರ್ಯ ನಿರ್ವಹಿಸುತ್ತಿರುವುದನ್ನು ನೋಡಬಹುದು. ನಮ್ಮ ಸರ್ಕಾರ ಮಹಿಳೆಯರ ಏಳಿಗೆಯನ್ನು ಬಯಸುವ ಸರ್ಕಾರವಾಗಿದ್ದು, ಈ ದೃಷ್ಟಿಯಲ್ಲಿ ಪಂಚಗ್ಯಾರಂಟಿಗಳನ್ನು ಜಾರಿಗೆ ತರುವ ಮೂಲಕ ಮಹಿಳೆಯರ ಸ್ವಾವಲಂಬಿ ಜೀವನಕ್ಕೆ ದಾರಿ ತೋರಿಸಿದೆ” ಎಂದರು.

“ಇಂದು ನಾರಿಶಕ್ತಿ, ಗಂಡಿಗಿಂತಲೂ ಒಂದು ಹೆಜ್ಜೆ ಮುಂದಿದೆ. ಮೊದಲು ಮನುಷ್ಯ ನಂತರ ಧರ್ಮ. ಧರ್ಮದ ಹೆಸರಿನಲ್ಲಿ ಮಹಿಳೆಯರು ಮೂಢನಂಬಿಕೆಗೆ ಒಳಗಾಗಬಾರದು. ಕುಟುಂಬ ಮತ್ತು ಸಮಾಜವನ್ನು ಸರಿದಾರಿಯಲ್ಲಿ ಸಾಮಾಜಿಕ ಅಂಶಗಳಾದ ಆರ್ಥಿಕ, ಶೈಕ್ಷಣಿಕ, ಆರೋಗ್ಯ ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರು ಮುಂದೆ ಬಂದು ಸರ್ವತೋಮುಖ ಅಭಿವೃದ್ಧಿಯತ್ತ ಮುಖ ಮಾಡಬೇಕು” ಎಂದರು.

ಮಹಿಳಾ ದಸರಾ 2

ರಾಜ್ಯ ಮಹಿಳಾ ಅಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌದರಿ ಮಾತನಾಡಿ, “ಮೌಢ್ಯ, ಅಂಧಕಾರವನ್ನು ತೊಲಗಿಸುವಲ್ಲಿ ಮಹಿಳೆಯರು ಬದಲಾಗಬೇಕು. ಅಂಬೇಡ್ಕರ್ ಅವರ ಆಶಯದಂತೆ ಮಹಿಳೆಯರು ಶಿಕ್ಷಣ, ಸಂಘಟನೆ ಹೋರಾಟದ ಮಂತ್ರಗಳನ್ನು ಮೈಗೂಡಿಸಿಕೊಳ್ಳಬೇಕು. ಮಹಿಳೆಯರಿಗೆ ಶಿಕ್ಷಣದ ಅವಶ್ಯಕತೆ ಇದೆ. ನಮ್ಮ ಹಕ್ಕುಗಳನ್ನು ನಾವು ಪಡೆದು ಕೊಳ್ಳಬೇಕು. ಹೆಣ್ಣಿನ ಸ್ವರೂಪವೇ ದಸರಾ. ಹೆಣ್ಣು ಅಂದರೆ ಶಕ್ತಿ, ಶಾಂತಿ, ನೆಮ್ಮದಿ, ಸಹನಾ ಶೀಲತೆ, ಸಮೃದ್ಧಿಯ ಪ್ರತಿರೂಪ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಭಾರೀ ಮಳೆಗೆ ಏಕಾಏಕಿ ಕುಸಿದ ಮನೆ; ಮಣ್ಣಿನಡಿ ಸಿಲುಕಿದ್ದ ಮ್ಯರಾಥಾನ್‌ ಓಟಗಾರನ ರಕ್ಷಣೆ

ಮೇಳದಲ್ಲಿ ಚಾಮುಂಡೇಶ್ವರಿ ಒಕ್ಕೂಟ, ಸಿರಿಧಾನ್ಯ ಮಾರಾಟ ಕೇಂದ್ರ, ಕೊಲ್ಲಾಪುರದಮ್ಮ ಸ್ತ್ರೀಶಕ್ತಿ ಸ್ವಹಾಯ ಸಂಘ, ಅನ್ನಪೂರ್ಣೇಶ್ವರಿ ಸ್ತ್ರೀಶಕ್ತಿ ಕೇಂದ್ರ ಸೇರಿದಂತೆ 30ಕ್ಕೂ ಹೆಚ್ಚು ಮಳಿಗೆಗಳು, ಸೀರೆ ಮಾರಾಟ, ಮಹಿಳಾ ಆಭರಣಗಳು, ಚುರುಮುರಿ, ತಿಂಡಿತಿನಿಸುಗಳು, ಬಟ್ಟೆ, ಹೊಸ ಪ್ರಾಡೆಕ್ಟ್, ಪೇಂಟಿಂಗ್ಸ್ ಸೇರಿದಂತೆ ಸ್ತ್ರೀ ಸ್ವಾವಲಂಬನೆ ಸಾರುವ ಮಳಿಗೆಗಳನ್ನು ಸ್ಥಾಪಿಸಿದ್ದರು.

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ದಸರಾ ಉಪಾಸಮಿತಿಯ ವಿಶೇಷಧಿಕಾರಿ ಪ್ರಿಯದರ್ಶಿನಿ, ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಸಮಿತಿಯ ಸದಸ್ಯರು ಸೇರಿದಂತೆ ಅನೇಕ ಮಹಿಳೆಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X