ಸಿದ್ದರಾಮಯ್ಯ ಸರ್ಕಾರ ಬಂದರೆ ಕಿಸಾನ್ ಸಮ್ಮಾನ್‌ ಯೋಜನೆ ಸೇರಿ ಹಲವು ಯೋಜನೆ ಬಂದ್‌: ಜೆ ಪಿ ನಡ್ಡಾ

Date:

Advertisements

ಕರ್ನಾಟಕದಲ್ಲಿ ಈ ಬಾರಿ ಬಿಜೆಪಿ ಸೋತರೆ ಕೇಂದ್ರ ಸರ್ಕಾರದಿಂದ ಬರುವ ಎಲ್ಲ ಯೋಜನೆಗಳು ರಾಜ್ಯಕ್ಕೆ ಬಂದ್‌ ಆಗಲಿವೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅಭಿಪ್ರಾಯ ಪಟ್ಟಿದ್ದಾರೆ.

ವಿಜಯನಗರ ಜಿಲ್ಲೆಯ ಹರಪನಹಳ್ಳಿ ಪಟ್ಟಣದ ಪ್ರವಾಸಿ ಮಂದಿರ ವೃತ್ತದಲ್ಲಿ ಭಾನುವಾರ ಬಿಜೆಪಿ ಅಭ್ಯರ್ಥಿ ಜಿ. ಕರುಣಾಕರ ರೆಡ್ಡಿ ಪರ ರೋಡ್ ಶೋ ನಡೆಸಿದ ಬಳಿಕ ಬಹಿರಂಗ ಸಭೆಯಲ್ಲಿ ಅವರು ಈ ಮಾತು ಹೇಳಿದರು.

“ಸಿದ್ದರಾಮಯ್ಯ ಸರ್ಕಾರ ಬಂದಿದ್ದೇ ಆದಲ್ಲಿ ಕಿಸಾನ್ ಸಮ್ಮಾನ್‌ ಯೋಜನೆ ಸೇರಿ ಹತ್ತು ಹಲವು ಯೋಜನೆಗಳು ರಾಜ್ಯದ ಜನರಿಗೆ ತಲುಪುವುದಿಲ್ಲ. ಹೀಗಾಗಿ ಕೇಂದ್ರ ಮತ್ತು ರಾಜ್ಯದಲ್ಲಿ ಡಬಲ್ ಎಂಜಿನ್ ಸರ್ಕಾರ ತರಲು ಬಿಜೆಪಿ ಬೆಂಬಲಿಸಿ” ಎಂದರು.

Advertisements

“ಪರಿಶಿಷ್ಟರಿಗೆ ಒಳಮೀಸಲಾತಿಯನ್ನು ಬಿಜೆಪಿ ಸರ್ಕಾರ ಕೊಟ್ಟಿದೆ. ಪರಿಶಿಷ್ಟ ಪಂಗಡ, ಲಿಂಗಾಯತರು, ಒಕ್ಕಲಿಗರ ಮೀಸಲಾತಿಯನ್ನೂ ಹೆಚ್ಚಿಸಿದೆ. ಆದರೆ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಈಗ ಹೆಚ್ಚಿಸಿರುವ ಮೀಸಲಾತಿ ರದ್ದು ಮಾಡುತ್ತೇವೆ ಎಂದು ಹೇಳಿದೆ. ಇಂತಹವರಿಗೆ ಬುದ್ದಿ ಕಲಿಸಬೇಕು” ಎಂದು ಕರೆ ಕೊಟ್ಟರು.

“ಕಾಂಗ್ರೆಸ್‌ನವರು ತಾವು ಭ್ರಷ್ಟಾಚಾರ ಮಾಡಿ, ಮತ್ತೊಬ್ಬರ ಮೇಲೆ ಆರೋಪ ಮಾಡುವುದನ್ನು ಕೈಬಿಡಬೇಕು. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಡಿ ಕೆ ಶಿವಕುಮಾರ ಅವರೆಲ್ಲ ಭ್ರಷ್ಟಾಚಾರ ಮಾಡಿ ಬೇಲ್ ಮೇಲೆ ಹೊರಗಿದ್ದಾರೆ. ಅವರ ಮೇಲಿನ ಆರೋಪಗಳು ಸಾಬೀತಾದರೆ ಜೈಲಿಗೆ ಹೋಗುವುದು ತಪ್ಪುವುದಿಲ್ಲ” ಎಂದು ನಡ್ಡಾ ತಿಳಿಸಿದರು.

ಭಾಷಣದ ಕೊನೆಗೆ ಭಜರಂಗ ದಳ ನಿಷೇಧ ಕುರಿತು ವಿಷಯ ಪ್ರಸ್ತಾಪಿಸಿ, ʼಭಜರಂಗ ಬಲಿ ಕೀ ಜೈʼ ಎಂದು ಕೂಗಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

ಬಿಹಾರದಲ್ಲಿ ಒಂದು ಮತವನ್ನೂ ಕದಿಯಲು ನಾವು ಬಿಡಲ್ಲ: ರಾಹುಲ್ ಗಾಂಧಿ

ಮತಗಳನ್ನು ಕದಿಯಲು ಚುನಾವಣಾ ಆಯೋಗ ಮತ್ತು ಬಿಜೆಪಿ ಪಾಲುದಾರಿಕೆ ಹೊಂದಿದೆ ಎಂದು...

ಧರ್ಮಸ್ಥಳ ಪ್ರಕರಣ | ಬಿಜೆಪಿಯವರು ನ್ಯಾಯಕ್ಕಾಗಿ ಧ್ವನಿ ಎತ್ತಿದ್ದಕ್ಕಿಂತ ವಿತಂಡವಾದದಲ್ಲಿ ಮುಳುಗಿದ್ದೇ ಹೆಚ್ಚು!

ಧರ್ಮಸ್ಥಳದಲ್ಲಿ ಅನ್ಯಾಯವಾಗಿ ಶವವಾಗಿರುವ ಅದೆಷ್ಟೋ ಜನರು ಹಿಂದುಗಳು ಎನ್ನಲಾಗುತ್ತಿದೆ. ಹಿಂದೂ ಧರ್ಮದ...

ಉಪರಾಷ್ಟ್ರಪತಿ ಚುನಾವಣೆ: ನಿವೃತ್ತ ನ್ಯಾ. ಸುದರ್ಶನ ರೆಡ್ಡಿ ಇಂಡಿಯಾ ಒಕ್ಕೂಟದ ಅಭ್ಯರ್ಥಿ

ಸೆಪ್ಟೆಂಬರ್ 9ರಂದು ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆಗೆ ವಿರೋಧ ಪಕ್ಷಗಳನ್ನು ಒಳಗೊಂಡ ಇಂಡಿಯಾ...

Download Eedina App Android / iOS

X