ರಾಯಚೂರು | ಜಿಲ್ಲೆಗೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಒಳಮೀಸಲಾತಿ ಘೋಷಣೆ ಮಾಡಿ; ಎಂ ವಿರೂಪಾಕ್ಷಿ

Date:

Advertisements

ಹಿಂದುಳಿದ ವರ್ಗಗಳ ನಾಯಕರು ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಿಲ್ಲೆಗೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿಯನ್ನು ರಾಯಚೂರು ಜಿಲ್ಲೆಯಲ್ಲಿಯೇ ಘೋಷಣೆ ಮಾಡಬೇಕು ಎಂದು ಮಾದಿಗ ಮೀಸಲಾತಿ ಐಕ್ಯ ಹೋರಾಟ ಸಮಿತಿ ಸಂಚಾಲಕ ಎಂ ವಿರೂಪಾಕ್ಷಿ ಹೇಳಿದರು.

ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಒಳಮೀಸಲಾತಿ ವರ್ಗೀಕರಣಕ್ಕೆ ಸಂಬಂಧಿಸಿದಂತೆ ಏಳು ಜನ ನ್ಯಾಯಮೂರ್ತಿಗಳ ಪೀಠ ತೀರ್ಪು ನೀಡಿ ಎರಡು ತಿಂಗಳು ಗತಿಸಿದೆ. ಆದರೆ ರಾಜ್ಯ ಸರ್ಕಾರ ಮೀಸಲಾತಿ ವರ್ಗೀಕರಣವನ್ನು ಸ್ವಾಗತಿಸಿ ಸುಮ್ಮನೆ ಕುಳಿತಿದೆ ಎಂದು ಆರೋಪಿಸಿದರು.

ರಾಜ್ಯದಲ್ಲಿಯೇ ಮೀಸಲಾತಿ ವರ್ಗೀಕರಣಕ್ಕೆ ಅಗತ್ಯವಿರುವ ದತ್ತಾಂಶವಿದೆ ಎಂದು ಈಗಾಗಲೇ ಅನೇಕ ತಜ್ಞರು ಹೇಳುತ್ತಿದ್ದಾರೆ. ನ್ಯಾಯಮೂರ್ತಿ ಸದಾಶಿವ ಆಯೋಗ, ಕಾಂತರಾಜ್ ಸಮಿತಿ ಸೇರಿದಂತೆ ಅನೇಕರು ಹೇಳಿರುವುದು ವರದಿಗಳಿವೆ. ಕಾಂಗ್ರೆಸ್ ಸರ್ಕಾರ ಇನ್ನೊಬ್ಬರ ಪ್ರಭಾವಕ್ಕೆ ಗುರಿಯಾಗಿದೆ. ಆದಿ ಕರ್ನಾಟಕ, ಆದಿ ದ್ರಾವಿಡ ಪ್ರತ್ಯೇಕ ಕಾಲಂಗಳಲ್ಲಿ ಗಣತಿ ಮಾಡಲಾಗಿದೆ. ಗೊಂದಲವಾಗುವ ಪ್ರಶ್ನೆಯೇ ಇಲ್ಲ. ಕುಂಟುನೆಪ ಹೇಳದೇ ಸಿಂಧನೂರು, ಮಾನ್ವಿ ಮತ್ತು ರಾಯಚೂರು ನಗರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿಯೇ ಮುಖ್ಯಮಂತ್ರಿಗಳು ಘೋಷಣೆ ಮಾಡಬೇಕು. ಇಲ್ಲದೇ ಹೋದಲ್ಲಿ ಹೋರಾಟದ ಬಿಸಿ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

Advertisements

ಹೋರಾಟಗಾರ ಅಂಬಣ್ಣ ಅರೋಲಿಕರ್ ಮಾತನಾಡಿ, ಒಳಮೀಸಲಾತಿ ವರ್ಗೀಕರಣದಿಂದ ಕೇವಲ ಮಾದಿಗ ಸಮುದಾಯಕ್ಕೆ ಮಾತ್ರ ಅನುಕೂಲವಾಗುವದಿಲ್ಲ. ಎಲ್ಲ ಸಮುದಾಯಗಳಿಗೂ ಅನುಕೂಲವಾಗುತ್ತದೆ. ಒಳ ಮೀಸಲಾತಿ ಹೋರಾಟ ಯಾವುದೇ ಒಂದು ಪಕ್ಷ, ವ್ಯಕ್ತಿಗೆ ಸೀಮಿತವಾಗಿಲ್ಲ. ಎಲ್ಲ ಸಮುದಾಯಗಳ ಪರವಾಗಿ ಮಾದಿಗ ಸಮಾಜ ಹೋರಾಟ ನಡೆಸುತ್ತಿದೆ. ಮೀಸಲಾತಿ ವರ್ಗೀಕರಣ ಕುರಿತಂತೆ ಸರ್ಕಾರ ವಿಳಂಬವಿಲ್ಲದೇ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ಇದನ್ನು ಓದಿದ್ದೀರಾ? ಮಂಗಳೂರು | ಹಿಂದೂ ಮಾಲೀಕತ್ವದ ಶಾಲೆಗಳಿಗೆ ಮಾತ್ರ ಮಕ್ಕಳನ್ನು ಕಳುಹಿಸಬೇಕು; ದ್ವೇಷ ಬಿತ್ತಿದ ಪ್ರೊಫೆಸರ್!

ಈ ಸಂದರ್ಭದಲ್ಲಿ ರವೀಂದ್ರ ಜಲ್ದಾರ, ಪಿ.ಯಲ್ಲಪ್ಪ, ಜೆ.ಬಿ.ರಾಜು,ಕೆ.ಪಿ.ಅನಿಲ್‌ಕುಮಾರ, ರಾಘವೇಂದ್ರ ಬೋರೆಡ್ಡಿ ,ಎಸ್.ರಾಜು ಸೇರಿ ಅನೇಕರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X