ಧಾರವಾಡ | ಅಣ್ಣಿಗೇರಿ ಉಗ್ರಾಣದಲ್ಲಿ ಕಳ್ಳತನ: ಇಬ್ಬರು ಸರ್ಕಾರಿ ಅಧಿಕಾರಿಗಳ ಬಂಧನ

Date:

Advertisements

ಅಣ್ಣಿಗೇರಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ರೈತರು ದಾಸ್ತಾನು ಮಾಡಿದ್ದ ಕಡಲೆ ಮತ್ತು ಹೆಸರು ಕಾಳು ಚೀಲಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಬೆಳಗಾವಿ ಉತ್ತರ ವಲಯ ಪೊಲೀಸ್ ಮಹಾನಿರೀಕ್ಷಕ ಬಿನ್ ವಿಕಾಸಕುಮಾರ ತಿಳಿಸಿದರು.

ಧಾರವಾಡ ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಣ್ಣಿಗೇರಿ ಉಗ್ರಾಣದಲ್ಲಿ ದಾಸ್ತಾನು ಮಾಡಿದ್ದ ಚೀಲಗಳು ಕಳ್ಳತನ ಆಗಿರುವ ಹಿನ್ನೆಲೆಯಲ್ಲಿ, ಪೊಲೀಸ್ ತಂಡಗಳು ಕಾರ್ಯಾಚರಣೆ ನಡೆಸಿ, ಇಬ್ಬರು ಸರ್ಕಾರಿ ಅಧಿಕಾರಿಗಳೇ ಶಾಮೀಲಾಗಿರುವುದನ್ನು ಪತ್ತೆ ಮಾಡಿವೆ. ಈ ಕುರಿತು ಕಡಲೆ ಮತ್ತು ಹೆಸರು ಬೇಳೆ ಚೀಲಗಳನ್ನು ಮರಳಿ ಕೊಡಿಸುವಂತೆ ರೈತರು ಬೇಡಿಕೆ ಇಟ್ಟಿದ್ದರು. ಅಲ್ಲಿನ ಅಧಿಕಾರಿ ಮರಳಿ ಕೊಡದೆ ಇದ್ದಾಗ ಮೇಲಾಧಿಕಾರಿಗಳ ಗಮನಕ್ಕೆ ತಂದಿದ್ದರು.

ಪ್ರಭಾರ ಉಗ್ರಾಣ ವ್ಯವಸ್ಥಾಪಕ ಆಕಾಶ ಸುಭಾಸ ಮುಶಣ್ಣವರ ಹಾಗೂ ಸಹೋದ್ಯೋಗಿ ಶಶಿಕುಮಾರ ಬಸಯ್ಯ ಹಿರೇಮಠ ಈ ಇಬ್ಬರು ಆರೋಪಿಗಳನ್ನು ಪೋಲಿಸ್ ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿಯ ಪ್ರಾದೇಶಿಕ ವ್ಯವಸ್ಥಾಪಕ ನೇಮಪ್ಪ ಲಮಾಣಿ ಗೋದಾಮಿಗೆ ತೆರಳಿ ಪರಿಶೀಲಿಸಿದಾಗ 4,141 ಚೀಲಗಳು ಕಾಣೆಯಾಗಿದ್ದವು. ಈ ಕುರಿತು ಅಣ್ಣಿಗೇರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು ಎಂದರು.

Advertisements

ಆರೋಪಿಗಳು ಕಡಲೆ ಮತ್ತು ಹೆಸರು ಕಾಳಿನ ಚೀಲಗಳನ್ನು ಗದಗ ಮತ್ತು ಧಾರವಾಡದ ವಿವಿಧ ಟ್ರೇಡರ್‌ಗಳಿಗೆ ಮಾರಾಟ ಮಾಡಿದ್ದರು. ಇದುವರೆಗೆ 1,859 ಚೀಲಗಳನ್ನು ಜಪ್ತಿ ಮಾಡಲಾಗಿದ್ದು, ಉಗ್ರಾಣದಲ್ಲಿದ್ದ ದಾಸ್ತಾನಿಗೆ ಕೊಟ್ಟಿ ದಾಖಲೆ ಸೃಷ್ಟಿಸಿ ಅಣ್ಣಿಗೇರಿಯ ರೆಡ್ಡಿ ಬ್ಯಾಂಕ್ ಹಾಗೂ ಗದಗ ಸೆಂಟ್ರಲ್ ಬ್ಯಾಂಕುಗಳಲ್ಲಿ ಸುಮಾರು 37 ಲಕ್ಷ ರೂಪಾಯಿ ಸಾಲ ಪಡೆದಿದ್ದಾರೆ ಎಂಬುದು ತನಿಖೆಯಿಂದ ತಿಳಿದುಬಂದಿದೆ ಎಂದು ತನಿಖೆ ನಡೆಸಿದ ಪೋಲಿಸ್ ಅಧಿಕಾರಿಗಳ ಕುರಿತು ಪ್ರಶಂಸೆ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಹೆಚ್ಚುವರಿ ಆರಕ್ಷಕ ಅಧೀಕ್ಷಕ ನಾರಾಯಣ ಬರಮನಿ ಹಾಗೂ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X