ರಾಮನಗರ | ರೈಲ್ವೆ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡಕ್ಕೆ ಆದ್ಯತೆ: ಪ್ರಗತಿಪರ ಸಂಘಟನೆಗಳಿಂದ ಸ್ವಾಗತ

Date:

Advertisements

ರೈಲ್ವೆ ನೇಮಕಾತಿಯ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಕೇಂದ್ರ ಸರಕಾರವು ಆದೇಶಿಸಿದ್ದು, ಇದು ಕನ್ನಡಿಗರಿಗೆ ಸಿಕ್ಕ ಅಭೂತಪೂರ್ವ ಗೆಲುವು. ಇದಕ್ಕೆ ಕಾರಣರಾದ ಕನ್ನಡಪರ ಹೋರಾಟಗಾರರು ಹಾಗೂ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣರಿಗೆ ಅಭಿನಂದನೆ ಸಲ್ಲಿಸುತ್ತೇವೆ ಎಂದು ಪ್ರಗತಿಪರ ಸಂಘಟನೆಗಳ ಅಧ್ಯಕ್ಷರಾದ ಕುಮಾರಸ್ವಾಮಿ ಸಂತಸ ವ್ಯಕ್ತಪಡಿಸಿದರು.

ಕನಕಪುರದ ರಾಜಾರಾವ್ ರಸ್ತೆಯಲ್ಲಿನ ರಾಜ್ಯ ರೈತ ಸಂಘದ ಕಚೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ, ರೈಲ್ವೆ ನೇಮಕಾತಿ ಪರೀಕ್ಷೆಯಲ್ಲಿ ಇಂಗ್ಲಿಷ್, ಮತ್ತು ಹಿಂದಿಯಲ್ಲಿ ಬರೆಯಬೇಕಾದ ಸಂದಿಗ್ಧ ಪರಿಸ್ಥಿತಿಯಿದ್ದು, ಇದರಿಂದ ಪ್ರತಿಭಾನ್ವಿತ ವಿಧ್ಯಾರ್ಥಿಗಳು ಆಯ್ಕೆಯಿಂದ ವಂಚಿತರಾಗುತ್ತಿದ್ದರು. ಇದು ಕನ್ನಡಿಗರಿಗೆ ಆಗುತ್ತಿದ್ದ ವಂಚನೆಯಾಗಿದ್ದು, ಕನ್ನಡಿಗರಿಗೆ ಅತಿ ಹೆಚ್ಚು ಹುದ್ದೆಗಳನ್ನು ಮೀಸಲಿಡುವ ಮೂಲಕ ಕನ್ನಡಿಗರಿಗೆ ಸಾಮಾಜಿಕ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

WhatsApp Image 2024 10 04 at 5.30.39 PM

ಈ ಹಿಂದೆ ಜಾಫರ್ ಷರೀಫ್, ಚಂದ್ರಶೇಖರ್ ಮೂರ್ತಿ, ಮಲ್ಲಿಕಾರ್ಜುನ ಖರ್ಗೆ ಕೂಡ ಕರ್ನಾಟಕದಿಂದ ಸಂಸದರಾಗಿ ಒಕ್ಕೂಟ ರೈಲ್ವೆ ಖಾತೆ ಸಚಿವರಾಗಿದ್ದರೂ ಈಡೇರಿಸಲಾಗದ ಭರವಸೆಯನ್ನು ವಿ ಸೋಮಣ್ಣ ಈಡೇರಿಸಿದ್ದು ಶ್ಲಾಘನೀಯ. ಅನೇಕ ಕನ್ನಡಪರ ಹೋರಾಟಗಾರರು ಈ ಹೋರಾಟ ಮಾಡಿ ಹಲವಾರು ಕೇಸು ಹಾಕಿಸಿಕೊಂಡು ಜೈಲಿಗೆ ಹೋಗಿ ಬಂದಿದ್ದರು. ಅವರೆಲ್ಲರೂ ಈಗ ಪ್ರಾತಸ್ಮರಣೀಯರಾಗಿದ್ದಾರೆ ಎಂದು ಹೇಳಿದರು.

Advertisements

ಕನಕಪುರದ ಪ್ರಗತಿಪರ ಸಂಘಟನೆಗಳ ಒಕ್ಕೂಟದ ನಿಯೋಗ ವಿ ಸೋಮಣ್ಣರನ್ನು ಖುದ್ದು ಭೇಟಿ ಮಾಡಿ ಅಭಿನಂದನೆಗಳನ್ನು ಸಲ್ಲಿಸಲಿದ್ದೇವೆ. ಹಾಗೇಯೇ ದೇವೆಗೌಡರು ಪ್ರಧಾನಿಯಾಗಿದ್ದಾಗ ಘೋಷಣೆಯಾಗಿದ್ದ ಬೆಂಗಳೂರು-ಸತ್ಯಮಂಗಲ ರೈಲು ಮಾರ್ಗದ ಕಾಮಗಾರಿ ನನೆಗುದಿಗೆ ಬಿದ್ದಿದ್ದು, ಆ ಕನಸನ್ನು ಕೂಡ ವಿ.ಸೋಮಣ್ಣ ನನಸಾಗಲಿ ಎಂದು ಹೇಳಿದರು.

ರಾಜ್ಯ ರೈತ ಸಂಘದ ಸಂಚಾಲಕರಾದ ಚೀಲೂರು ಮುನಿರಾಜು ಮಾತನಾಡಿ, ರೈಲ್ವೆ ನೇಮಕಾತಿಯಲ್ಲಿ ಕನ್ನಡ ಭಾಷೆಯಲ್ಲಿ ಪರೀಕ್ಷೆ ಬರೆಯುವ ಅವಕಾಶ ನೀಡಿರುವುದರಿಂದ ಮುಂದಿನ ದಿನಗಳಲ್ಲಿ ರೈಲ್ವೆಯಲ್ಲಿ ಕನ್ನಡಿಗರನ್ನು ಅತಿ ಹೆಚ್ಚಿನ ಸಂಖ್ಯೆಯಲ್ಲಿ ನೋಡಬಹುದು. ರೈಲ್ವೆ ನೇಮಕಾತಿಯಲ್ಲಿ ದಕ್ಷಿಣ ಭಾರತದ ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ನಿಗದಿಪಡಿಸುವ ಅಗತ್ಯವಿದೆ. ಸಾಮಾನ್ಯ ರೈತರ ಮಕ್ಕಳೂ ಕೂಡ ಕನ್ನಡದಲ್ಲಿ ಪರೀಕ್ಷೆ ಬರೆದು ಒಕ್ಕೂಟ ರೈಲ್ವೆಯಲ್ಲಿ ಉದ್ಯೋಗಿಗಳನ್ನಾಗಿ ಕಾಣಲು ಹರ್ಷವೆನಿಸುತ್ತದೆ ಎಂದರು.

ಇದನ್ನು ಓದಿದ್ದೀರಾ? ರಾಮನಗರ | ಉಪಕರಣಗಳ ಮೂಲಕ ಉದ್ಯೋಗ ಖಾತ್ರಿ ಕೆಲಸ: ಸೂಕ್ತ ಕ್ರಮಕ್ಕೆ ಮಾಹಿತಿ ಹಕ್ಕು ವೇದಿಕೆ ಒತ್ತಾಯ

ಕನ್ನಡ ಭಾಸ್ಕರ್ ಮಾತನಾಡಿ, ರೈಲ್ವೆ ನೇಮಕಾತಿಯಲ್ಲಿ ಕನ್ನಡಕ್ಕೆ ಸಿಕ್ಕ ಪ್ರಾಶಸ್ತ್ಯ ಸ್ವಾಗತಾರ್ಹವಾಗಿದ್ದು, ರೈಲಿನಲ್ಲಿ ಕನ್ನಡ ಭಾಷೆಯಲ್ಲಿ ಸೂಚನೆಗಳನ್ನು ಬರೆಯಲಿ ಎಂದು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಸಂಘದ ಉಪಾಧ್ಯಕ್ಷ ಸ್ಟುಡಿಯೋ ಚಂದ್ರು, ಕೆಆರ್‌ಎಸ್ ಪಕ್ಷದ ಮುಖಂಡ ಪ್ರಶಾಂತ್ ಹೊಸದುರ್ಗ, ಸಾಮಾಜಿಕ ಹೋರಾಟಗಾರ ಚೀರಣಕುಪ್ಪೆ ರಾಜೇಶ್, ರೈತ ಸಂಘದ ನವೀನ್ ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X