ಗದಗ | ಉಳ್ಳಾಗಡ್ಡಿ ರಾಶಿಗೆ ನುಗ್ಗಿದ ಕಾಲುವೆ ನೀರು; ರೈತರ ಲಕ್ಷಾಂತರ ರೂಪಾಯಿ ನಷ್ಟ

Date:

Advertisements

ಉತ್ತಮ ಬೆಲೆಯ ನಿರೀಕ್ಷೆಯಲ್ಲಿದ್ದ ರೈತರಿಗೆ, ಇದ್ದಕ್ಕಿದ್ದ ಹಾಗೆ ವಿಕ್ಟೋರಿಯಾ ಮಹಾರಾಣಿ ಕೆರೆಯ ನೀರು ಸಣ್ಣ ನೀರಾವರಿ ಕಾಲುವೆ ಮೂಲಕ ಹರಿದು ಬಂದು, ಉಳ್ಳಾಗಡ್ಡಿ ರಾಶಿಗೆ ನುಗ್ಗಿದ್ದರಿಂದ ಲಕ್ಷಾಂತರ ರೂಪಾಯಿ ನಷ್ಟವಾದ ಘಟನೆ ಗದಗದಲ್ಲಿ ನಡೆದಿದೆ.

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮದ ಬಯಲು ಜಾಗದಲ್ಲಿ ಉಳ್ಳಾಗಡ್ಡಿ ಸ್ವಚ್ಛಗೊಳಿಸಿ ಮಾರುಕಟ್ಟೆಗೆ ಕಳಿಸಲು ಸಿದ್ದಮಾಡಿಕೊಂಡಿದ್ದರು.

ಒಂದು ಎಕರೆಗೆ ಅರವತ್ತರಿಂದ ಎಪ್ಪತ್ತು ಸಾವಿರ ರೂಪಾಯಿ ಖರ್ಚು ಬರುತ್ತದೆ. ಈರುಳ್ಳಿ ಬೆಲೆ ಇಳಿಕೆಯ ಆತಂಕದ ನಡುವೆಯೂ ಉತ್ತಮ ನೀರಿಕ್ಷೆಯಲ್ಲಿದ್ದ ರೈತರು, ಕಾಲುವೆ ನೀರು ಉಳ್ಳಾಗಡ್ಡಿ ರಾಶಿಗೆ ನುಗ್ಗಿದ ಪರಿಣಾಮ ನಿರೀಕ್ಷೆ ಹುಸಿಗೊಳಿಸಿದೆ.

Advertisements

ಸಾಲ ಮಾಡಿ ಉತ್ತಮ ಬೀಜ, ಗೊಬ್ಬರ ಜೊತೆಗೆ ಕಳೆ ತಗೆದು ಉಳ್ಳಾಗಡ್ಡಿ ಬೆಳೆ ಬೆಳೆದಿದ್ದರು. ಉಳ್ಳಾಗಡ್ಡಿಯನ್ನು ಕಿತ್ತು, ಸ್ವಚ್ಛಗೊಳಿಸಿ ಒಣ ಹಾಕಿ, ಚೀಲದಲ್ಲಿ ತುಂಬುತ್ತಿದ್ದರು. ಇದ್ದಕ್ಕಿದ್ದ ಹಾಗೆ ಕಾಲುವೆಯಿಂದ ಹರಿದ ನೀರು, ಉಳ್ಳಾಗಡ್ಡಿ ರಾಶಿಯನ್ನು ತೊಯ್ದು ಹೋಗಿದೆ. ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ‘ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ’ ಎಂಬಂತಾಗಿದೆ. ಉಳ್ಳಾಗಡ್ಡಿ ರಕ್ಷಣೆ ಮಾಡಿಕೊಳ್ಳಲು ರೈತರು ಹಾಗೂ ಕೂಲಿ ಕಾರ್ಮಿಕರು ಹರಸಾಹಸ ಪಡುವುದನ್ನು ನೋಡಿ ಸಾರ್ವಜನಿಕರು ಮಮ್ಮಲ ಮರುಗಿದರು.

ಈ ದಿನ.ಕಾಮ್‌ನೊಂದಿಗೆ ರೈತ ಮಹಿಳೆ ಜಯಶ್ರೀ ಮಾತನಾಡಿ, “ಈ ಸಲ ಉಳ್ಳಾಗಡ್ಡಿ ಚಲೋ ಬಂದಿತ್ತು. ನಾಲ್ಕು ಗಾಡಿ ಉಳ್ಳಾಗಡ್ಡಿ ಆಗಿದ್ದವು. ಒಳ್ಳೆ ಬೆಲೆ ಬರುತ್ತೆ ಅಂತ ಉಳ್ಳಾಗಡ್ಡಿ ಕಿತ್ತು, ಸ್ವಚ್ಛ ಮಾಡಿ ಚೀಲ ತುಂಬುತ್ತಿದ್ದೆವು. ಕಾಲುವೆ ನೀರು ಬಂದು ಹಾಳಾಗೈತಿ, ಉಳಿದ ಚಲೋ ಗಡ್ಡಿ ಆರಿಸಾಕ ಹತ್ತೀವಿ” ಎಂದು ಅಳಲನ್ನು ತೋಡಿಕೊಂಡಳು.

ಈ ಸುದ್ದಿ ಓದಿದ್ದೀರಾ? ಗದಗ | ಸಮಯಕ್ಕೆ ಸರಿಯಾಗಿ ಬಾರದ ಬಸ್: ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

“ನಮ್ಮ ಕೆರೆಯಿಂದ ನೂರಾರು ರೈತರ ಸಾವಿರಾರು ಎಕರೆಗೆ ಪ್ರದೇಶ ನೀರಾವರಿಯಾಗಲಿದೆ. ನಮ್ಮ ಗ್ರಾಮದ ಕೆರೆ ಮತ್ತು ಕಾಲುವೆ ಸಮರ್ಪಕವಾಗಿ ನಿರ್ವಹಣೆ ಮಾಡುತ್ತಿಲ್ಲ. ನಮ್ಮಊರನ್ನು ಸಂಪೂರ್ಣವಾಗಿ ನಿರ್ಲಕ್ಷ್ಯದಿಂದ ನೋಡುತ್ತಿದ್ದಾರೆ. ಹಿಂಗ ರೈತರ ಉಳ್ಳಾಗಡ್ಡಿ ರಾಶಿಗೆ ನೀರು ಹೊಕ್ಕರ ಯಾರ್ ಜವಾಬ್ದಾರಿ” ಎಂದು ರೈತ ಶ್ರಿಕಾಂತ ಪ್ಯಾಟಿ ಅಸಮಾಧಾನ ವ್ಯಕ್ತಪಡಿಸಿದರು.

SHARANAPPA H SANGANALA
ಶರಣಪ್ಪ ಎಚ್ ಸಂಗನಾಳ
+ posts

ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ. ಧ್ವನಿ ಶೈಕ್ಷಣಿಕ ಸಂಪನ್ಮೂಲ ಕೇಂದ್ರದಲ್ಲಿ ಒಂದಷ್ಟು ಕಾಲ ಕೆಲಸ. ಸದ್ಯ 'ಈ ದಿನ.ಕಾಮ್'ನಲ್ಲಿ ಮೀಡಿಯಾ ಕೋಆರ್ಡಿನೇಟರ್. ಓದು, ಪಕ್ಷಿ ವೀಕ್ಷಣೆ, ಕೃಷಿಯಲ್ಲಿ ಆಸಕ್ತಿ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಶರಣಪ್ಪ ಎಚ್ ಸಂಗನಾಳ
ಶರಣಪ್ಪ ಎಚ್ ಸಂಗನಾಳ
ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ. ಧ್ವನಿ ಶೈಕ್ಷಣಿಕ ಸಂಪನ್ಮೂಲ ಕೇಂದ್ರದಲ್ಲಿ ಒಂದಷ್ಟು ಕಾಲ ಕೆಲಸ. ಸದ್ಯ 'ಈ ದಿನ.ಕಾಮ್'ನಲ್ಲಿ ಮೀಡಿಯಾ ಕೋಆರ್ಡಿನೇಟರ್. ಓದು, ಪಕ್ಷಿ ವೀಕ್ಷಣೆ, ಕೃಷಿಯಲ್ಲಿ ಆಸಕ್ತಿ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

Download Eedina App Android / iOS

X