ಕೊಪ್ಪಳ | ಸಿಎಂ ಬರುವ ದಾರಿಯಲ್ಲಿ ವಿರುದ್ಧ ದಿಕ್ಕಿಗೆ ಸಾಗಿದ ಜನಾರ್ದನ ರೆಡ್ಡಿ ಕಾರು : ತಪ್ಪಿದ ಅನಾಹುತ

Date:

Advertisements

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಝೀರೋ ಟ್ರಾಫಿಕ್ ಮೂಲಕ ಬಳ್ಳಾರಿಯ ಜಿಂದಾಲ್‌ ಕಡೆಗೆ ಹೋಗುವಾಗ, ದಾರಿ ಮಧ್ಯೆಯಲ್ಲಿ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಪ್ರಯಾಣಿಸುತ್ತಿದ್ದ ಕಾರು ವಿರುದ್ಧ ದಿಕ್ಕಿನಲ್ಲಿ ಚಲಾಯಿಸಿದ ಘಟನೆ ನಡೆದಿದೆ. ಘಟನೆಯ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ.

ರಾಯಚೂರು ಪ್ರವಾಸ ಮುಗಿಸಿ ಶನಿವಾರ ಸಂಜೆ ಜಿಂದಾಲ್ ವಿಮಾನ ನಿಲ್ದಾಣಕ್ಕೆ ಸಿಎಂ ಸಿದ್ದರಾಮಯ್ಯ ಇದ್ದ ವಾಹನ ತೆರಳುತ್ತಿದ್ದಾಗ ಈ ಬೆಳವಣಿಗೆ ನಡೆದಿದೆ. ಗಂಗಾವತಿ ನಗರದ ಸಿಬಿಎಸ್ ವೃತ್ತದಲ್ಲಿ ಶನಿವಾರ ರಾತ್ರಿ ಗಾಲಿ ಜನಾರ್ದನ್ ರೆಡ್ಡಿ ಅವರು ಟ್ರಾಫಿಕ್ ಜಾಮ್ ಆಗಿದ್ದರಿಂದ ಡಿವೈಡರ್ ಹತ್ತಿಸಿ ವಿರುದ್ಧ ದಿಕ್ಕಿಗೆ ತೆರಳಿದ್ದಾರೆ. ಇದೇ ವೇಳೆ ಸಿಎಂ ಅವರ ಕಾರು ಬಂದಿದೆ.

ಸಿಎಂ ಸಿದ್ದರಾಮಯ್ಯ ರಾಯಚೂರು ಜಿಲ್ಲೆಗೆ ಎರಡು ದಿನದ ಪ್ರವಾಸದಲ್ಲಿರುವುದರಿಂದ ಝೀರೋ ಟ್ರಾಫಿಕ್ ಮಾಡಲಾಗಿದೆ. ಈ ನಡುವೆ ಸುಮಾರು 30 ನಿಮಿಷ ಟ್ರಾಫಿಕ್ ಜಾಮ್ ಆಗಿದ್ದರಿಂದ ರೆಡ್ಡಿ ಅವರ ಕಾರು ಚಾಲಕ ವಿರುದ್ಧ ದಿಕ್ಕಿನಲ್ಲಿ ಚಲಾಯಿಸಿದ್ದಾರೆ.

Advertisements

ವಡ್ಡರಹಟ್ಟಿ ಗ್ರಾಮದಲ್ಲಿ ಶನಿವಾರ ಆಯೋಜಿಸಿದ್ದ ಬಿಜೆಪಿ ಸದಸ್ಯತ್ವ ಅಭಿಯಾನ ಮುಗಿಸಿಕೊಂಡು ಶಾಸಕ ರೆಡ್ಡಿ ನಗರದತ್ತ ಪ್ರಯಾಣ ಮಾಡುತ್ತಿದ್ದರು. ಸಿಎಂ ಬರುತ್ತಿರುವ ಹಿನ್ನೆಲೆಯಲ್ಲಿ ಸಾಮಾನ್ಯ ನಾಗರಿಕರಂತೆಯೇ ಪೊಲೀಸರ ಸೂಚನೆ ಪಾಲಿಸಿದರು. ಆದರೆ ಕೆಲವು ನಿಮಿಷಗಳ ಕಾಲ ಕಾಯ್ದ ಅವರು, ಬಳಿಕ ತಮ್ಮ ವಾಹನವನ್ನು ರಸ್ತೆ ಡಿವೈಡರ್ ಹತ್ತಿಸಿ, ಕೊಂಡೊಯ್ದರು. ಈ ವೇಳೆ ಶಾಸಕ ರೆಡ್ಡಿ ಚಾಲಕನ ಪಕ್ಕದಲ್ಲಿನ ಸೀಟ್​ನಲ್ಲಿ ಕುಳಿತಿದ್ದರು. ರೆಡ್ಡಿ ವಾಹನ ಸಂಚರಿಸುತ್ತಿದ್ದಂತೆಯೇ, ಎದುರಿನಿಂದ ಅದೇ ರಸ್ತೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿದ್ದ ವಾಹನ ತೆರಳಿತು.

ರಾತ್ರಿ ವೇಳೆ ಸ್ವಲ್ಪ ವ್ಯತ್ಯಾಸವಾಗಿದ್ದರೆ ಭಾರೀ ಅನಾಹುತ ಸಂಭವಿಸಬಹುದಿತ್ತು ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು. ಘಟನೆಯಿಂದ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ಇದನ್ನು ಓದಿದ್ದೀರಾ? ಸುಬ್ರಹ್ಮಣ್ಯ | ಇಂದಿನಿಂದ ಕುಮಾರ ಪರ್ವತಕ್ಕೆ ಚಾರಣ: ಆನ್‌ಲೈನ್‌ ನೋಂದಣಿ ಮಾಡಿದರಷ್ಟೇ ಅವಕಾಶ

ಝೀರೋ ಟ್ರಾಫಿಕ್ ಭದ್ರತೆಯ ವೇಳೆ ಶಾಸಕ ಜನಾರ್ದನ ರೆಡ್ಡಿ ನಿಯಮ ಮುರಿದಿದ್ದಾರೆ. ಅವರಿಗೊಂದು ನ್ಯಾಯ, ಜನ ಸಾಮಾನ್ಯರಿಗೂ ಒಂದು ನ್ಯಾಯನಾ ಎಂದು ಸಾರ್ವಜನಿಕರು ಪ್ರಶ್ನಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X