ದೆಹಲಿ | ಲಡಾಖ್ ಭವನದಲ್ಲಿ ಉಪವಾಸ ಆರಂಭಿಸಿದ ಸೋನಮ್ ವಾಂಗ್‌ಚುಕ್

Date:

Advertisements

ಲಡಾಖ್‌ಗೆ ಆರನೇ ಪರಿಚ್ಛೇದದಲ್ಲಿ ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಪ್ರತಿಭಟನಾಕಾರರಿಗೆ ಅನುಮತಿ ನಿರಾಕರಿಸಿದ ಕಾರಣ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರು ತಂಗಿದ್ದ ಲಡಾಖ್ ಭವನದಲ್ಲಿ ಭಾನುವಾರ ಉಪವಾಸ ಆರಂಭಿಸಿದ್ದಾರೆ.

ಉಪವಾಸವನ್ನು ಪ್ರಾರಂಭಿಸುವ ಮೊದಲು ಮಾಧ್ಯಮಗಳಿಗೆ ಈ ಬಗ್ಗೆ ಮಾಹಿತಿ ನೀಡಿದ ವಾಂಗ್‌ಚುಕ್, ನಮ್ಮ ಪ್ರತಿಭಟನೆಗೆ ಎಲ್ಲಿಯೂ ಅವಕಾಶ ಸಿಗದ ಕಾರಣ ಲಡಾಖ್ ಭವನದಲ್ಲಿಯೇ ಪ್ರತಿಭಟನೆಯನ್ನು ನಡೆಸಲು ಆರಂಭಿಸುತ್ತೇನೆ ಎಂದು ಹೇಳಿದರು. ಅದಾದ ಬಳಿಕ ತಮ್ಮ ಬೆಂಬಲಿಗರೊಂದಿಗೆ ಸೋನಮ್ ಉಪವಾಸ ಆರಂಭಿಸಿದರು.

ಇದನ್ನು ಓದಿದ್ದೀರಾ? ಸೋನಮ್ ವಾಂಗ್‌ಚುಕ್ ಬಂಧನದ ವಿರುದ್ದ ಪಿಐಎಲ್

Advertisements

ವಾಂಗ್‌ಚುಕ್ ಸೇರಿದಂತೆ ಸುಮಾರು 18 ಜನರು ಲಡಾಖ್ ಭವನದ ಗೇಟ್ ಬಳಿ ಕುಳಿತು ಘೋಷಣೆಗಳನ್ನು ಕೂಗಿದರು. ಇನ್ನು ಭಾನುವಾರ ಬೆಳಿಗ್ಗೆ ಜಂತರ್‌ ಮಂತರ್‌ನಲ್ಲಿ ಉಪವಾಸ ಕುಳಿತುಕೊಳ್ಳಲು ಅನುಮತಿ ನಿರಾಕರಿಸಲಾಗಿದೆ ಎಂದು ಎಕ್ಸ್‌ನಲ್ಲಿ ತಿಳಿಸಿದ್ದಾರೆ.

“ಮತ್ತೊಮ್ಮೆ ನಿರಾಕರಣೆ, ಮತ್ತೊಮ್ಮೆ ಹತಾಶೆ. ಅಂತಿಮವಾಗಿ ಇಂದು ಬೆಳಿಗ್ಗೆ ನಾವು ಪ್ರತಿಭಟನೆಗಾಗಿ ಅಧಿಕೃತವಾಗಿ ಗೊತ್ತುಪಡಿಸಿದ ಸ್ಥಳಕ್ಕೆ ಈ ನಿರಾಕರಣೆ ಪತ್ರವನ್ನು ಪಡೆದುಕೊಂಡಿದ್ದೇವೆ” ಎಂದು ವಾಂಗ್‌ಚುಕ್ ಹೇಳಿದರು.

ಶನಿವಾರ, ಹೆಚ್ಚಿನ ಪ್ರತಿಭಟನಾಕಾರರು ಲಡಾಖ್‌ಗೆ ಮರಳಿದ್ದು ಕೆಲವು ಕಾರ್ಯಕರ್ತರು ವಾಂಗ್‌ಚುಕ್ ಜೊತೆ ಪ್ರತಿಭಟನೆ ಮುಂದುವರೆಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X