ಉದ್ಯೋಗಕ್ಕಾಗಿ ಜಮೀನು ಹಗರಣ | ಲಾಲು ಪ್ರಸಾದ್, ತೇಜಸ್ವಿ ಯಾದವ್‌ಗೆ ಜಾಮೀನು

Date:

Advertisements

ಉದ್ಯೋಗಕ್ಕಾಗಿ ಜಮೀನು ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್, ಅವರ ಮಕ್ಕಳಾದ ತೇಜಸ್ವಿ ಯಾದವ್ ಮತ್ತು ತೇಜ್ ಪ್ರತಾಪ್ ಯಾದವ್ ಅವರಿಗೆ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಸೋಮವಾರ ಜಾಮೀನು ಮಂಜೂರು ಮಾಡಿದೆ.

ಈ ಪ್ರಕರಣದಲ್ಲಿ ಆರೋಪಿಗಳಾಗಿರುವ ಲಾಲು ಪ್ರಸಾದ್, ತೇಜಸ್ವಿ ಯಾದವ್ ಮತ್ತು ತೇಜ್ ಪ್ರತಾಪ್‌ಗೆ ಸಮನ್ಸ್ ನೀಡಲಾಗಿತ್ತು. ತಲಾ 1 ಲಕ್ಷ ರೂ.ಗಳ ವೈಯಕ್ತಿಕ ಬಾಂಡ್ ಮೇಲೆ ಜಾಮೀನು ನೀಡಲಾಗಿದೆ. ಮೂವರನ್ನು ಬಂಧಿಸಲಾಗಿಲ್ಲ. ಈ ಪ್ರಕರಣದ ಮುಂದಿನ ವಿಚಾರಣೆಯು ಅಕ್ಟೋಬರ್ 23 ಮತ್ತು 24ರಂದು ನಡೆಯಲಿದೆ.

ಇದನ್ನು ಓದಿದ್ದೀರಾ? ಉದ್ಯೋಗಕ್ಕಾಗಿ ಜಮೀನು ಪ್ರಕರಣ; ಲಾಲು ಮತ್ತು ತೇಜಸ್ವಿಗೆ ಇಡಿ ಹೊಸ ಸಮನ್ಸ್

Advertisements

ಲಾಲು ಪ್ರಸಾದ್ ಅವರು ರೈಲ್ವೆ ಸಚಿವರಾಗಿದ್ದಾಗ ಜಬಲ್‌ಪುರ (ಮಧ್ಯಪ್ರದೇಶ) ಪಶ್ಚಿಮ ಕೇಂದ್ರ ರೈಲ್ವೇ ವಲಯದಲ್ಲಿ ಗ್ರೂಪ್-ಡಿ ನೇಮಕಾತಿಯಲ್ಲಿ ಹಗರಣ ನಡೆಸಿದ್ದಾರೆ ಎಂಬ ಆರೋಪವಿದೆ. ತಮ್ಮ ಕುಟುಂಬಸ್ಥರು ಮತ್ತು ಸಹವರ್ತಿಗಳಿಗೆ ಉದ್ಯೋಗವನ್ನು ನೀಡಿ, ಅದರ ಬದಲಿಗೆ ಜಮೀನು ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್, “ನಮಗೆ ನ್ಯಾಯಾಂಗದಲ್ಲಿ ನಂಬಿಕೆ ಇದೆ” ಎಂದು ಹೇಳಿದ್ದಾರೆ.

ಇನ್ನು ಪಿಟಿಐಗೆ ಪ್ರತಿಕ್ರಿಯಿಸಿದ ತೇಜಸ್ವಿ ಯಾದವ್, “ನಾವು ನ್ಯಾಯಾಂಗದ ಮೇಲೆ ನಂಬಿಕೆ ಇಟ್ಟಿದ್ದೇವೆ. ನ್ಯಾಯಾಲಯ ಇಂದು ನಮಗೆ ಜಾಮೀನು ನೀಡಿದೆ. ಅವರು (ಬಿಜೆಪಿ) ಸಾಮಾನ್ಯವಾಗಿ ರಾಜಕೀಯ ಪಿತೂರಿ ಮಾಡುತ್ತಾರೆ ಮತ್ತು ಏಜೆನ್ಸಿಗಳನ್ನು ದುರುಪಯೋಗಪಡಿಸಿಕೊಳ್ಳುತ್ತಾರೆ. ಪ್ರಕರಣವು ಸುಳ್ಳು ಎಂಬುದು ಸಾಬೀತಾಗಿದೆ. ಇದು ನಮ್ಮ ಗೆಲುವು ದೃಢಪಡಿಸುತ್ತದೆ” ಎಂದು ಹೇಳಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X