ರಾಯಚೂರು | ರಸ್ತೆ ದುರಸ್ತಿಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ

Date:

Advertisements

ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಬಾಗಲವಾಡ ಮುಖ್ಯರಸ್ತೆಯು ತೆಗ್ಗು ಗುಂಡಿಯಿಂದ ಕೆಸರುಮಯವಾಗಿ ಪೂರ್ತಿ ಹದಗೆಟ್ಟಿದ್ದು, ರಸ್ತೆ ದುರಸ್ತಿ ಮಾಡಿಕೊಡುವಂತೆ ಆಗ್ರಹಿಸಿ ಗ್ರಾಮಸ್ಥರು ಹಾಗೂ ದಲಿತ ಸಂಘರ್ಷ ಸಮಿತಿ (ಭೀಮವಾದ) ಸಿರವಾರ ತಾಲೂಕ ಘಟಕದಿಂದ ಅನಿರ್ಧಿಷ್ಟಾವದಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಯಿತು.

ರಸ್ತೆಗೆ 2 ಕೋಟಿ ಅನುದಾನ ಬಿಡುಗಡೆಯಾಗಿ 2 ವರ್ಷ ಕಳೆದರು ಕಾಮಗಾರಿ ಪ್ರಾರಂಭಿಸಿಲ್ಲ, ಚರಂಡಿ ಮತ್ತು ರಸ್ತೆ ನಿರ್ಮಾಣ, ರಸ್ತೆ ಅಗಲೀಕರಣ ಮಾಡಬೇಕೆಂದು ಒತ್ತಾಯಿಸಿದರು.

ಬಾಗಲವಾಡ ಗ್ರಾಮದ ಮುಖ್ಯ ರಸ್ತೆ ಕನಕ ಶ್ರೀ ಪೆಟ್ರೋಲ್ ಬಂಕ್ ನಿಂದ ಶಿವರಾಜ ಮಂತ್ರಿಕಿ ಇವರ ಮನೆಯವರೆಗೆ 2 ಕಿಲೋ ಮೀಟರ್‌ನವರೆಗೆ 2 ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ಹಿಂದಿನ ಮಾಜಿ ಶಾಸಕರಾದ ರಾಜಾ ವೆಂಕಟಪ್ಪ ನಾಯಕ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಾದ ಶಾಮೀಲಪ್ಪ, ಗ್ರಾಮದ ಮುಖಂಡರು ಸೇರಿಕೊಂಡು ಗುದ್ದಲಿ ಪೂಜೆ ನೆರವೇರಿಸಿದ್ದರು. ಎರಡು ವರ್ಷ ಕಳೆದರೂ ಕಾಮಗಾರಿ ಪ್ರಾರಂಭವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Advertisements

ಹಲವು ಬಾರಿ ರಸ್ತೆ ದುರಸ್ತಿ ಬಗ್ಗೆ ಸಾಕಷ್ಟು ಮನವಿ, ಅಧಿಕಾರಗಳ ಭೇಟಿ ಮಾಡಿದರೂ ಪ್ರಯೋಜನವಾಗಿಲ್ಲ. ಬಾಗಲವಾಡ ಗ್ರಾಮದಿಂದ ಕವಿತಾಳ, ಸಿರವಾರ ಹಾಗೂ ಇನ್ನಿತರ ಗ್ರಾಮಗಳಿಗೆ ಮುಖ್ಯ ರಸ್ತೆಯು ಪೂರ್ತಿ ಹದಗೆಟ್ಟು ಹೋಗಿದೆ. ದಿನನಿತ್ಯ ಶಾಲಾ ವಾಹನಗಳು , ಹಲವಾರು ವಾಹನಗಳು ಸಂಚರಿಸುತ್ತಿರುವುದರಿಂದ ವಾಹನ ಸವಾರರಿಗೆ ತೊಂದರೆಯಾಗಿದೆ.

ಮಳೆಗಾಲದ ಸಮಯದಲ್ಲಿ ರಸ್ತೆಯು ಕೆಸರು ಗದ್ದೆ, ತೆಗ್ಗುಗಳಲ್ಲಿ ನೀರು ನಿಂತು ಗುಂಡಿಗಳು ಕಾಣಿಸದೆ ಅಪಘಾತಗಳು ಸಂಭವಿಸಿವೆ. ಸಾರ್ವಜನಿಕರಿಗೆ ರಸ್ತೆ ಓಡಾಡಲು ಕಷ್ಟವಾಗಿದೆ. ವಿಶೇಷವಾಗಿ ಗರ್ಭಿಣಿ ಮಹಿಳೆಯರಿಗೆ ಬಹಳಷ್ಟು ಸಮಸ್ಯೆ ಎದುರಾಗಿದೆ. ಆದ ಕಾರಣ ಅಧಿಕಾರಿಗಳು ರಸ್ತೆ ಅಗಲೀಕರಣ ಚರಂಡಿ ರಸ್ತೆ ನಿರ್ಮಾಣ ಕೂಡಲೆ ಪ್ರಾರಂಭಿಸಬೇಕೆಂದು ಒತ್ತಾಯಿಸಿ ಧರಣಿ ನಡೆಸಿದರು.

ಕೆಲವು ಹೊತ್ತಿನ ನಂತರ ಅಧಿಕಾರಿಗಳು ಧರಣಿನಿರತ ಭೇಟಿ ನೀಡಿ ಒಂದು ವಾರದೊಳಗೆ ಬೇಡಿಕೆ ಈಡೇರಿಸಲಾಗುವುದು ಎಂದು ಭರವಸೆ ನೀಡಿದರು. ಬಳಿಕ ಪ್ರತಿಭಟನೆಯನ್ನು ಹಿಂಪಡೆದರು.

ಮಲ್ಲನಗೌಡ ಪೋಲಿಸ್ ಪಾಟೀಲ್, ಅಮರೇಶ ಸಿಡಿ, ಬೀರಪ್ಪ ಸಾಹುಕಾರ, ಗುರುಪ್ಪ ಸಾಹುಕಾರ, ಅಮರೇಶ ನಾಯಕ. ಬಸವರಾಜ್ ದ್ಯಾವಣ್ಣರು, ಬಸವ ಸಿಡಿ, ಗಂಗಾಧರ ಬಾಗಲವಾಡ. ಮೌನೇಶ ಕೋರಿ, ನಾಗರಾಜ್ ಹಿಂದಿ ನಮನೆ, ಜಗದೀಶ ಸಾಲಮನಿ, ಮಹಾದೇವಪ್ಪ ಕೋರಿ, ನಾಗರಾಜ್ ಭೋವಿ. ಮೌಲಾಸಾಬ್ ಇನ್ನಿತರರು ಹಾಜರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X