ಹಿರಿಯ ಪತ್ರಕರ್ತ ಮತ್ತು ಕನ್ನಡ ಹೋರಾಟಗಾರರ ವಿರುದ್ಧದ ಎಫ್‌ಐಆರ್‌ ರದ್ದತಿಗೆ ಒತ್ತಾಯ

Date:

Advertisements

ಸುಳ್ಳುಸುದ್ದಿ ಹರಿಬಿಟ್ಟಿದ್ದಾರೆಂದು ಆರೋಪಿಸಿ ಹಿರಿಯ ಪತ್ರಕರ್ತ ದಿನೇಶ್‌ ಅಮೀನ್‌ ಮಟ್ಟು, ಕನ್ನಡ ಪರ ಹೋರಾಟಗಾರ ಬಿ. ಹರೀಶ್‌ಕುಮಾರ್‌ ಭೈರಪ್ಪ, ಹೇಮಂತ್‌ಕುಮಾರ್‌, ಬಿಂದುಗೌಡ, ದಿಲೀಪ್‌ಗೌಡ ಅವರ ವಿರುದ್ಧ ದುರುದ್ದೇಶದಿಂದ ಎಫ್‌ಐಆರ್‌ ದಾಖಲಿಸಲಾಗಿದೆ. ಕೂಡಲೇ ಎಫ್‌ಐಆರ್‌ ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಸಮಾನ ಮನಸ್ಕರ ಒಕ್ಕೂಟ – ಕರ್ನಟಕ ಒತ್ತಾಯಿಸಿದೆ.

ಬೆಂಗಳೂರಿನಲ್ಲಿ ಪೊಲೀಸ್‌ ಮಹಾನಿರೀಕ್ಷಕರಿಗೆ ಹಕ್ಕೊತ್ತಾಯ ಸಲ್ಲಿಸಿರುವ ಒಕ್ಕೂದ ಸದದ್ಯರು, “ದಿನೇಶ್‌ ಮತ್ತಿತರರು ತಮ್ಮ ಫೇಸ್‌ಬುಕ್‌ನಲ್ಲಿ ‘ಬಿ.ಎಲ್‌. ಸಂತೋಷ್‌ ಮಾತನಾಡಿದ್ದಾರೆ ಎಂದು ಹೇಳಲಾಗುವ’ ವರದಿಯನ್ನು ಪೋಸ್ಟ್‌ ಮಾಡಿ ‘ಇದು ನಿಜವೇ, ಅಲ್ಲವೇ ಎಂದು ಸಂತೋಷ್‌ ಅವರು ಸ್ಪಷ್ಟೀಕರಣ ಕೊಡಲಿ’ ಎಂದಿದ್ದಾರೆ. ಅವರು ತಮ್ಮ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಬಳಸಿಕೊಂಡು ಪ್ರಶ್ನೆ ಮಾಡಿದ್ದಾರೆ. ಎಲ್ಲಿಯೂ ಆ ವರದಿಯನ್ನು ಸಮರ್ಥನೆ ಮಾಡಿಲ್ಲ ಮತ್ತು ನಿಜವೆಂದು ಪ್ರಚಾರ ಮಾಡಿಲ್ಲ” ಎಂದು ವಿವರಿಸಿದ್ದಾರೆ.

“ಯಾವುದೇ ಆಯಾಮದಿಂದ ನೋಡಿದರೂ ದಿನೇಶ್‌ ಮತ್ತಿತರರ ಮೇಲೆ ಮಾಡಲಾದ ಆರೋಪ ಸುಳ್ಳಾಗಿದೆ. ಸತ್ಯಕ್ಕೆ ದೂರವಾಗಿದೆ ಎಂಬುದು ಅವರ ಪೋಸ್ಟ್‌ಗಳನ್ನು ನೋಡಿದರೆ ಸ್ಪಷ್ಟವಾಗತ್ತದೆ. ಹೀಗಾಗಿ, ಅವರೆಲ್ಲರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಅನ್ನು ಹಿಂಪಡೆಯಬೇಕು” ಎಂದು ಒಕ್ಕೂಟ ಮನವಿ ಮಾಡಿದೆ.

Advertisements

“ಚಿತ್ತಾಪುರ ಕ್ಷೇತ್ರದ ಬಜೆಪಿ ಅಭ್ಯರ್ಥಿ ಮಣಿಕಂಠ ಅವರು ‘ಖರ್ಗೆ ಕುಟುಂಬವನ್ನು ಸಾಫ್‌ ಮಾಡುತ್ತೇನೆ’ ಎಂದು
ಹೇಳುವ ಆಡಿಯೋ ಹರಿದಾಡುತ್ತಿದೆ ಮತ್ತು ಆ ಬಗ್ಗೆ ಪತ್ರಿಕೆಗಳಲ್ಲಿ ವರದಿಯಾಗಿದೆ. ಕೊಲೆ ಮಾಡುತ್ತೇನೆಂದು ಬೆದರಿಕೆ ಹಾಕಿರುವ ಮಣಿಕಂಠ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಿ, ಅವರನ್ನು ಬಂಧಿಸಬೇಕಾಗಿತ್ತು. ಆದರೆ ಸಂಬಂಧಪಟ್ಟವರು ಈ ಕುರಿತು ಮೌನವಾಗಿರುವುದು ನಮಗೆ ಆತಂಕ ಮೂಡಿಸಿದೆ” ಎಂದು ಒಕ್ಕೂಟದ ಮುಖಂಡರು ಹೇಳಿದ್ದಾರೆ.

ಈ ವರದಿ ಓದಿದ್ದೀರಾ?: ಈದಿನ.ಕಾಮ್‌ ಸಮೀಕ್ಷೆ-8: ಕಾಂಗ್ರೆಸ್‌ಗೆ ಸಿಗಲಿದೆ ಸ್ಪಷ್ಟ ಬಹುಮತ; 132-140 ಸೀಟುಗಳ ನಿರೀಕ್ಷೆ

“ವಿಜಯಪುರದ ಬಿಜೆಪಿ ಅಭ್ಯರ್ಥಿ ಬಸವರಾಜ ಪಾಟೀಲ್‌ ಯತ್ನಾಳ್‌ ಅವರು ಜನರನ್ನು ಪ್ರಚೋದಿಸುವಂತಹ ಹೇಳಿಕೆ ಕೊಡುತ್ತಿದ್ದಾರೆ. ಆದರೆ, ಅವರ ವಿರುದ್ಧವೂ ಕ್ರಮ ತೆಗೆದುಕೊಂಡಿರುವುದಿಲ್ಲ. ಬಿಜೆಪಿ ಮುಖಂಡರು ಸಿದ್ದರಾಮಯ್ಯ ಅವರನ್ನು ಸಿದ್ರಾಮುಲ್ಲಾಖಾನ್‌ ಎಂದು ಅವಹೇಳನ ಮಾಡುತ್ತಿದ್ದಾರೆ. ಅವರ ವಿರುದ್ಧವೂ ಕ್ರಮ ತೆಗೆದುಕೊಂಡಿಲ್ಲ. ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರು ‘ಬಿಜೆಪಿಗೆ ಮತ ಹಾಕದಿದ್ದರೆ ಕೇಂದ್ರದ ಎಲ್ಲ ಅನುದಾನಗಳನ್ನು ನಿಲ್ಲಿಸುತ್ತೇವೆ’ ಎಂದು ರಾಜ್ಯದ ಜನರನ್ನು ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಂಡಡಿಲ್ಲ. ಆದರೆ, ಸೇಡಿನ ರಾಜಕೀಯದ ಕಾರಣದಿಂದ ದಿನೇಶ್‌ ಮತ್ತು ಹರೀಶ್‌ ಇನ್ನಿತರರ ವಿರುದ್ಧ ಆಧಾರರಹಿತ ದೂರನ್ನು ಆಧರಿಸಿ ಮಿಂಚಿನ ವೇಗದಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ. ಈ ಎಫ್‌ಐಆರ್‌ಅನ್ನು ಹಿಂಪಡೆಯಬೇಕು” ಎಂದು ಒತ್ತಾಯಿಸಿದ್ದಾರೆ.

ಹಕ್ಕೊತ್ತಾಯ ಸಲ್ಲಿಸುವ ವೇಳೆ, ಒಕ್ಕೂಟದ ಮುಖಂಡರಾದ ಎಸ್‌.ಜಿ ಸಿದ್ದರಾಮಯ್ಯ, ಎನ್.ಎಲ್ ಮುಕುಂದರಾಜ್, ಜಾಣಗೆರೆ ವೆಂಕಟೇಶಯ್ಯ, ವಸುಂಧರಾ ಭೂಪತಿ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

Download Eedina App Android / iOS

X