ಬೆಂಗಳೂರು | ಭಾರೀ ಮಳೆಗೆ ಮನೆಗೆ ನುಗ್ಗಿದ ನೀರು; 63 ನಿವಾಸಿಗಳಿಗೆ ಶೀಘ್ರ ಪರಿಹಾರ: ಬಿಬಿಎಂಪಿ

Date:

Advertisements

ಬೆಂಗಳೂರು ನಗರದಲ್ಲಿ ಶನಿವಾರ ಮತ್ತು ಭಾನುವಾರ ಸುರಿದ ಭಾರೀ ಮಳೆಯಿಂದಾಗಿ ಹಾನಿಗೊಳಗಾದ ಮನೆಗಳಿಗೆ ಶೀಘ್ರವೇ ಪರಿಹಾರ ನೀಡಲಾಗುವುದು ಎಂದು ಬಿಬಿಎಂಪಿ ತಿಳಿಸಿದೆ. ಪಾಲಿಕೆ ತನ್ನ ನಿಧಿಯಿಂದ ನೇರ ಲಾಭ ವರ್ಗಾವಣೆಯಡಿ ಹಾನಿಗೊಂಡ ಪ್ರತಿ ಮನೆಗೆ ಹತ್ತು ಸಾವಿರ ರೂಪಾಯಿ ಪರಿಹಾರ ನೀಡಲಿದೆ ಎಂದು ತಿಳಿಸಿದರು.

ಮಳೆಯಿಂದಾಗಿ ಮಹಾಲಕ್ಷ್ಮಿ ಲೇಔಟ್‌ನಲ್ಲಿ ಅಧಿಕ ಮನೆಗಳಿಗೆ ಹಾನಿಯಾಗಿದೆ. ಯಲಹಂಕ ವಲಯದ ಕೇಂದ್ರೀಯ ವಿಹಾರ್ ಅಪಾರ್ಟ್‌ಮೆಂಟ್ ಸಮುಚ್ಚಯದಲ್ಲಿಯೂ ಹಲವು ಮನೆಗಳಿಗೆ ನೀರು ನುಗ್ಗಿದೆ. ಒಟ್ಟಾಗಿ 63 ಮನೆಗಳಿಗೆ ಮಳೆ ನೀರು ನುಗ್ಗಿದೆ. ಶೀಘ್ರವೇ ಈ ಮನೆಗಳಿಗೆ ಪರಿಹಾರ ನೀಡುವಂತೆ ವಲಯ ಆಯುಕ್ತರಿಗೆ ಸೂಚಿಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೋಮವಾರ ತಿಳಿಸಿದ್ದಾರೆ.

“ಕೇಂದ್ರೀಯ ವಿಹಾರದಲ್ಲಿರುವ ಅಪಾರ್ಟ್‌ಮೆಂಟ್ ಸಮುಚ್ಚಯವು ಯಲಹಂಕ ಕೆರೆಯ ಹೊರಗಿದೆ. ಸಮುಚ್ಚಯದ ಗೋಡೆಯು ಕುಸಿದು ಬಿದ್ದು ಹಲವು ಮನೆಗಳಿಗೆ ನೀರು ನುಗ್ಗಿದೆ. ನೀರನ್ನು ತೆಗೆಯುವ ಕಾರ್ಯ ಮಾಡಲಾಗುತ್ತಿದೆ. ಮಹಾಲಕ್ಷ್ಮಿ ಲೇಔಟ್‌ನಲ್ಲಿ 63 ಮನೆಗಳು ಜಲಾವೃತವಾಗಿದೆ” ಎಂದು ಮಾಹಿತಿ ನೀಡಿದರು.

Advertisements

ಇದನ್ನು ಓದಿದ್ದೀರಾ? ಕರ್ನಾಟಕದ 15 ಜಿಲ್ಲೆಗಳಲ್ಲಿ ಅಕ್ಟೋಬರ್ 10ರವರೆಗೂ ಧಾರಾಕಾರ ಮಳೆ: ಹವಾಮಾನ ಇಲಾಖೆ

“ಯಲಹಂಕದ ಅಪಾರ್ಟ್‌ಮೆಂಟ್‌ ಕೇಂದ್ರೀಯ ವಿಹಾರ ಕೆರೆ ದಂಡೆಯ ಕೆಳಗಿದೆ. ಅಲ್ಲಿ ಬಿಬಿಎಂಪಿ ಮಳೆನೀರು ಚರಂಡಿ ನಿರ್ಮಿಸಿದೆ. ಆದರೂ ಭಾರೀ ಮಳೆಯಿಂದಾಗಿ ಪ್ರದೇಶವು ಜಲಾವೃತವಾಗಿದೆ. ನಾವು ಸಮಸ್ಯೆಯನ್ನು ಪರಿಹರಿಸಲು ಪ್ರಯತ್ನಿಸುತ್ತೇವೆ” ಎಂದು ಬಿಬಿಎಂಪಿ ಮುಖ್ಯ ಆಯುಕ್ತರು ತಿಳಿಸಿದರು.

ಶನಿವಾರ ಬೆಂಗಳೂರಿನಲ್ಲಿ 115 ಮಿ.ಮೀ ಮಳೆ ಆಗಿತ್ತು. ಭಾನುವಾರವೂ ನಗರದಲ್ಲಿ ಭಾರೀ ಮಳೆ ಸುರಿದಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

Download Eedina App Android / iOS

X