ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ: ಸಚಿವ ಸತೀಶ್ ಜಾರಕಿಹೊಳಿ

Date:

Advertisements

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಐದು ವರ್ಷ ಇರುತ್ತಾರೋ ಮೂರು ವರ್ಷ ಇರುತ್ತಾರೋ ಅದು ಹೈಕಮಾಂಡ್‌ಗೆ ಗೊತ್ತಿರುವ ವಿಚಾರ. ಆದರೆ ಈಗಂತೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿರುತ್ತಾರೆ. ಇದರಲ್ಲಿ ಅನುಮಾನ ಬೇಡ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಮಂಗಳವಾರ ಮೈಸೂರಿಗೆ ಭೇಟಿ ನೀಡಿದ ವೇಳೆ ಮಾಧ್ಯಮಗಳ ಜೊತೆ ಮಾತನಾಡಿ, “ಸಚಿವ ಮಹದೇವಪ್ಪ ಭೇಟಿಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ಅವರ ಮನೆ ಹಾಗೂ ನಮ್ಮ ಮನೆ ಅಕ್ಕ ಪಕ್ಕ ಇವೆ. ಪ್ರತಿನಿತ್ಯ ನಾವು ಭೇಟಿ ಆಗುತ್ತಿರುತ್ತೇವೆ. ಇಂದು ರಾತ್ರಿ 9 ಗಂಟೆಯವರೆಗೂ ಮಹದೇವಪ್ಪ ಜೊತೆಗೆ ದಸರಾ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತೇನೆ” ಎಂದರು.

“ಸಿಎಂ ಬದಲಾವಣೆ ಪ್ರಶ್ನೆಯೇ ಉದ್ಭವಿಸಿಲ್ಲ. ಅಂತಹ ಯಾವುದೇ ಚರ್ಚೆಗಳೂ ನಡೆದಿಲ್ಲ. ವಿಪಕ್ಷಗಳು, ಮಾಧ್ಯಮಗಳು, ಚರ್ಚೆ ಮಾಡುತ್ತಿವೆ. ವಿಪಕ್ಷಗಳ ನಾಯಕರು ಪ್ರೀತಿಯಿಂದ ನಮ್ಮ ಹೆಸರು ಹೇಳುತ್ತಿದ್ದಾರೆ ಅಷ್ಟೇ. ಆದರೆ ನಮ್ಮ ಪಕ್ಷದಲ್ಲಿ ಯಾವುದೇ ಚರ್ಚೆ, ಬೆಳವಣಿಗೆ ನಡೆದಿಲ್ಲ. ನಾನು ಈ ವಿಚಾರವನ್ನು ಹಲವು ಬಾರಿ ಸ್ಪಷ್ಟ ಪಡಿಸಿದ್ದೇನೆ” ಎಂದು ತಿಳಿಸಿದರು.

Advertisements

“ಯಾವುದೇ ನಾಯಕರ ಬೆಂಬಲಿಗರು ಅವರ ನಾಯಕರಿಗೆ ಮುಂದಿನ ಸಿಎಂ ಎಂದು ಜೈಕಾರ ಹಾಕುವುದು ಸರ್ವೇ ಸಾಮಾನ್ಯ‌. ಇದನ್ನೇ ಮುಂದಿಟ್ಟುಕೊಂಡು ಏನೋ ಬದಲಾವಣೆ ಆಗುತ್ತದೆ ಎನ್ನೋದು ಸರಿಯಲ್ಲ” ಎಂದರು.

ಇನ್ನು ಸಿಎಂ ರೇಸ್‌ನಲ್ಲಿ ಡಿ ಕೆ ಶಿವಕುಮಾರ್ ಇದ್ದಾರಾ, ಇಲ್ಲವೋ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, “ಮತ್ತೊಬ್ಬರ ವಿಚಾರ ನಾನು ಹೇಳಲು ಆಗೋದಿಲ್ಲ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X