ಹಾವೇರಿ | ನಾಡುನುಡಿ ಸಂಸ್ಕೃತಿ ಬಿಂಬಿಸುವಂತಹ ನಾಡಹಬ್ಬ ದಸರಾ: ಕರಿಯಪ್ಪ ಅರಳಿಕಟ್ಟಿ

Date:

Advertisements

ನಮ್ಮ ನಾಡುನುಡಿ ಸಂಸ್ಕೃತಿಯನ್ನು ಬಿಂಬಿಸುವಂತಹ ನಾಡಹಬ್ಬ ದಸರಾ ಕಾರ್ಯಕ್ರಮಗಳು ಪ್ರತಿ ಹಳ್ಳಿಹಳ್ಳಿ, ಗಲ್ಲಿಗಳಲ್ಲಿಯೂ ನಡೆಯಬೇಕು. ಪಾಲಕರು ತಮ್ಮ ಮಕ್ಕಳನ್ನು ಇಂತಹ ಕಾರ್ಯಕ್ರಮಗಳಿಗೆ ಕರೆದುಕೊಂಡು ಬರುವ ಮೂಲಕ ಮಕ್ಕಳಿಗೆ ನಮ್ಮ ಸಂಸ್ಕೃತಿ, ಸಂಸ್ಕಾರದ ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದು ಪತ್ರಕರ್ತ ಕರಿಯಪ್ಪ ಅರಳಿಕಟ್ಟಿ ಹೇಳಿದರು.

ಹಾವೇರಿ ಜಿಲ್ಲೆಯ ರಾಣೇಬೆನ್ನೂರ ಪಟ್ಟಣದ ಕರ್ನಾಟಕ ಸಂಘದಲ್ಲಿ 88ನೇ ವರ್ಷದ ನಾಡಹಬ್ಬದ, 5ನೇ ದಿನದ ಸಭಾ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು.

“ವಿದ್ಯಾರ್ಥಿಗಳು ಪ್ರತಿದಿನ ಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಪತ್ರಿಕೆ ಓದುವುದರಿಂದ ಜ್ಞಾನವೃದ್ಧಿಯ ಜತೆಗೆ ಇತ್ತೀಚೆಗೆ ಹೆಚ್ಚುತ್ತಿರುವ ಸೈಬರ್ ಕ್ರೈಮ್ ಯಾವ ಯಾವ ರೀತಿಯಿಂದ ಮಾಡುತ್ತಾರೆ. ಅವುಗಳಿಂದ ನಾವು ಹೇಗೆ ಜಾಗೃತರಾಗಿರಬೇಕೆಂಬ ಅರಿವು ಮೂಡುತ್ತದೆ” ಎಂದು ತಿಳಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಮೈಸೂರು | ನಂದಿನಿ ಉತ್ಪನ್ನಕ್ಕೆ ಶೇ.10ರಷ್ಟು ರಿಯಾಯಿತಿ: ಮೈಮುಲ್ ಅಧ್ಯಕ್ಷ ಆರ್ ಚೆಲುವರಾಜು

ರೋಟರಿ ಸಂಸ್ಥೆಯ ಅಧ್ಯಕ್ಷ ರಾಜಣ್ಣ ಮೋಟಗಿ ಅತಿಥಿ ಭಾಷಣ ಮಾಡಿ, “ದಸರಾ, ವಿಜಯದಶಮಿ  ನಾಡಹಬ್ಬ. ದೇಶದ ಒಂದೊಂದು ಭಾಗದಲ್ಲಿ ಒಂದೊಂದು ಹೆಸರಿನಲ್ಲಿ ಹತ್ತು ದಿನಗಳ ಕಾಲ ಆಚರಿಸುವ ದೊಡ್ಡಹಬ್ಬವೇ ದಸರಾ, ಮಹಾನವಮಿ” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸ್ನೇಹದೀಪ ಅಂಧಮಕ್ಕಳ ಶಾಲೆಯ ಮಕ್ಕಳಿಂದ ನಾಟಕ, ಭಾವಗೀತೆ, ಕರಾವೋಕೆ, ಮಿಮಿಕ್ರೀ, ನೃತ್ಯಗಳ ಸಮ್ಮಿಶ್ರ ಕಾರ್ಯಕ್ರಮ ಅದ್ಭುತವಾಗಿ ಮೂಡಿಬಂದಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶ್ರೀಪಾದ ಕುಲಕರ್ಣಿ, ವಿನಾಯಕ ಕೆಂಚನಗೌಡ್ರ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

Download Eedina App Android / iOS

X