ಕಾಂಗ್ರೆಸ್‌ನ ಜಾತಿ ರಾಜಕಾರಣವನ್ನು ಹರಿಯಾಣ ಜನ ತಿರಸ್ಕರಿಸಿದ್ದಾರೆ: ಸಂಸದ ಬೊಮ್ಮಾಯಿ

Date:

Advertisements

ಹರಿಯಾಣದಲ್ಲಿ ಬಿಜೆಪಿ ಸಂಪೂರ್ಣ ಬಹುಮತ ಪಡೆದಿದೆ. ಈದು ಇಡೀ ದೇಶದ ರಾಜಕಾರಣ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎನ್ನುವುದಕ್ಕೆ ದಿಕ್ಸೂಚಿ ಯಾಗಿದೆ ಎಂದು ಮಾಜಿ ಸಿಎಂ ಮತ್ತು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಕಾಂಗ್ರೆಸ್‌ ಜಾತಿ ರಾಜಕಾರಣವನ್ನು ಹರಿಯಾಣ ಜನರು ತಿರಸ್ಕಾರ ಮಾಡಿದ್ದಾರೆ. ಹರಿಯಾಣದಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯಲು ಮೋದಿಯವರ ನಾಯಕತ್ವ ಹಾಗೂ ಸ್ಥಳೀಯವಾಗಿ ಪಕ್ಷದ ಸಂಘಟನಾ ಶಕ್ತಿ ಕಾರಣ‌” ಎಂದರು.

“ಲೋಕಸಭೆ ಚುನಾವಣೆಯ ನಂತರ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದ್ದು, ರಾಜಧಾನಿ ದೆಹಲಿಗೆ ಹತ್ತಿರ ಇರುವ ರಾಜ್ಯದ ಚುನಾವಣೆ ದೇಶದ ರಾಜಕಾರಣ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎನ್ನುವುದನ್ನು ಸೂಚಿಸುತ್ತಿದೆ. ಕಾಂಗ್ರೆಸ್‌ನವರು ಬಿಜೆಪಿಯನ್ನು ಸಂವಿಧಾನ ವಿರೋಧಿ ಎಂದು ಬಿಂಬಿಸಲು ಪ್ರಯತ್ನ ಮಾಡಿದರು. ಆದರೆ, ಜನರು ಸಬ್ ಕೆ ಸಾತ್ ಸಬ್ ಕಾ ವಿಕಾಸ್, ಶ್ರೇಷ್ಠ ಭಾರತ, ಅಮೃತ ಕಾಲ ವಿಚಾರಗಳಿಗೆ ಜನರು ಬೆಂಬಲ ಕೊಟ್ಟಿದ್ದಾರೆ. ಮಹಾರಾಷ್ಡದಲ್ಲಿಯೂ ಇದೆ ರೀತಿಯ ಫಲಿತಾಂಶ ಬರುವ ವಿಶ್ವಾಸ ಇದೆ‌” ಎಂದು ಹೇಳಿದರು.

Advertisements

“ಜಮ್ಮು ಕಾಶ್ಮೀರ ಸಾಮಾಜಿಕವಾಗಿ ಸೂಕ್ಷ ರಾಜ್ಯ ಅಲ್ಲಿ ಕಣಿವೆ ಹೊರಗೆ ನಮಗೆ ಬೆಂಬಲ ಸಿಕ್ಕಿದೆ. ಇನ್ನೂ ರಾಜಕಾರಣ ಇದೆ. ಇದೇ ಅಂತಿಮ ಅಲ್ಲ. ಹರಿಯಾಣದಲ್ಲಿನ ಸೋಲಿನ ಬಗ್ಗೆ ಕಾಂಗ್ರೆಸ್ ಗೌರವಯುತವಾಗಿ ಒಪ್ಪಿಕೊಂಡರೆ ಗೌರವ ಕೊಡುತ್ತೇವೆ, ಕುಂಟು ನೆಪ ಹೇಳಿದರೆ ಎದುರು ಉತ್ತರ ಕೊಡುತ್ತೇವೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X